9 ಇಂದಿರಾ ಕ್ಯಾಂಟೀನ್‌ ಪುನರಾರಂಭ


Team Udayavani, Jun 8, 2020, 10:46 AM IST

9 ಇಂದಿರಾ ಕ್ಯಾಂಟೀನ್‌ ಪುನರಾರಂಭ

ಹುಬ್ಬಳ್ಳಿ: ಕೋವಿಡ್ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಹುತೇಕವಾಗಿ ಸ್ಥಗಿತಗೊಂಡಿದ್ದ ಅವಳಿನಗರದ 9 ಇಂದಿರಾ ಕ್ಯಾಂಟೀನ್‌ಗಳು ಪುನರಾರಂಭಗೊಂಡಿವೆ. ಕಳೆದ ಕೆಲ ದಿನಗಳಿಂದ ಪೌರ ಕಾರ್ಮಿಕರಿಗೆ ಮಾತ್ರ ಸೀಮಿತವಾಗಿದ್ದ ಇಂದಿರಾ ಕ್ಯಾಂಟೀನ್‌ಗಳನ್ನು ಜೂ.1ರಿಂದ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿದೆ.

ಸಾರ್ವಜನಿಕರಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿಯ ಊಟ ನೀಡಲಾಗುತ್ತಿದೆ. ಆರಂಭದಲ್ಲಿ ಕೇವಲ ಹುಬ್ಬಳ್ಳಿಯ ಎರಡು ಹಾಗೂ ಧಾರವಾಡದ ಎರಡು ಕ್ಯಾಂಟೀನ್‌ಗಳನ್ನು ಮಾತ್ರ ತೆರೆಯಲಾಗಿತ್ತು. ಇದೀಗ ಎಲ್ಲ 9 ಕ್ಯಾಂಟೀನ್‌ಗಳು ಸೇವೆ ನೀಡುತ್ತಿವೆ.

ಪಾರ್ಸ್‌ಲ್‌ನಿಂದ ತಟ್ಟೆಗೆ: ಲಾಕ್‌ಡೌನ್‌ನಿಂದ 2 ತಿಂಗಳ ನಂತರ ಮತ್ತೇ ಕಾರ್ಯಾರಂಭ ಮಾಡಿರುವ ಇಂದಿರಾ ಕ್ಯಾಂಟೀನ್‌ ಆರಂಭದಲ್ಲಿ ಮೇ.23ರಿಂದ ಕೇವಲ ಪಾರ್ಸಲ್‌ ಮಾತ್ರ ನೀಡಲಾಗುತ್ತಿತ್ತು. ಅದು ಕೂಡಾ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ ಮಾತ್ರ ನೀಡಲಾಗುತ್ತಿತ್ತು. ಅದು ಕಿಮ್ಸ್‌ ಆವರಣ, ಗೋಕುಲ ರಸ್ತೆ ಹೊಸ ಬಸ್‌ ನಿಲ್ದಾಣ ಹಾಗೂ ಧಾರವಾಡ ಎರಡು ಕ್ಯಾಂಟೀನ್‌ಗಳಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿತ್ತು . ರಾಜ್ಯ ಸರಕಾರ ಜೂ.8ರಿಂದ ಎಲ್ಲೆಡೆ ಹೊಟೇಲ್‌ ಗಳ ಪುನರಾರಂಭಕ್ಕೆ ಹಸಿರು ನಿಶಾನೆ ತೋರಿಸಿದ್ದು, ಇದಕ್ಕೂ ಮೊದಲೇ ಇಂದಿರಾ ಕ್ಯಾಂಟೀನ್‌ಗಳು ಪುನರಾರಂಭಗೊಂಡಿವೆ. ಕೋವಿಡ್ ಮುಂಜಾಗ್ರತೆ: ಅವಳಿನಗರದ ಎಲ್ಲ ಒಂಬತ್ತು ಇಂದಿರಾ ಕ್ಯಾಂಟೀನ್‌ಗಳಲ್ಲೂ ಸರಕಾರದ ನಿಯಮಾನುಸಾರ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಕ್ಯಾಂಟೀನ್‌ಗಳ ಸಿಬ್ಬಂದಿ ಶುಚಿತ್ವಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ.

ಕ್ಯಾಂಟೀನ್‌ಗೆ ಬರಲು ಹಿಂದೇಟು: ಈ ಹಿಂದೆ 300 ರಿಂದ 500 ಪ್ಲೇಟ್‌ಗಳವರೆಗೆ ಉಪಹಾರ-ಊಟ ವಿತರಿಸಲಾಗುತ್ತಿತ್ತು. ಕೊರೊನಾ ಆತಂಕದಿಂದ ಜನ ಹೊರಗಡೆಯ ಉಪಹಾರ, ಊಟಕ್ಕೆ ಹಿಂದೇಟು ಹಾಕುತ್ತಿರುವುದರಿಂದ 250-300 ಉಪಹಾರ ಹಾಗೂ ಊಟ ವಿತರಿಸಲಾಗುತ್ತಿದೆ. ಕೆಲ ಕ್ಯಾಂಟೀನ್‌ಗಳಲ್ಲಿ ಜನರ ಕೊರತೆ ಇದ್ದು, ಉಪಹಾರ-ಊಟ ತುಂಬಾ ಕಡಿಮೆ ಹೋಗುತ್ತಿದೆ.

ಇನ್ನು ನ್ಯೂ ಇಂಗ್ಲೀಷ್‌ ಸ್ಕೂಲ್‌, ಸೋನಿಯಾಗಾಂಧಿ ನಗರ ಹಾಗೂ ಎಸ್‌.ಎಂ.ಕೃಷ್ಣಾ ನಗರದಲ್ಲಿ ರಾತ್ರಿ ಊಟ ಇನ್ನೂ ಆರಂಭಿಸಲಾಗಿಲ್ಲ. ಇನ್ನುಳಿದ ಕ್ಯಾಂಟೀನ್‌ಗಳಲ್ಲೂ ರಾತ್ರಿ ಊಟಕ್ಕೆ ಜನರು ಆಗಮಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಅಲ್ಲಿ ಜನರ ಆಗಮಿಸುವುದನ್ನು ನೋಡಿ ರಾತ್ರಿ ಊಟ ಆರಂಭಿಸಲಾಗುವುದು.

ಕೋವಿಡ್ ವೈರಸ್‌ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅವಳಿನಗರದ ಎಲ್ಲ ಇಂದಿರಾ ಕ್ಯಾಂಟೀನ್‌ಗಳನ್ನು ಪುನರಾಂಭಿಸಲಾಗಿದೆ. ಕೆಲ ಕ್ಯಾಂಟೀನ್‌ಗಳಲ್ಲಿ ಕೊರೊನಾ ಕಾರಣದಿಂದ ಊಟ-ಉಪಹಾರದ ಸಂಖ್ಯೆ ಕಡಿಮೆಯಾಗಿದ್ದು, ಇನ್ನೂ ಮೂರು ಕಡೆ ರಾತ್ರಿ ಊಟ ಆರಂಭಿಸಿಲ್ಲ. ಇನ್ನು ಸೋಮವಾರದಿಂದ ಅಲ್ಲಿಯೂ ರಾತ್ರಿ ಊಟ ಆರಂಭಿಸುವ ಕುರಿತು ಚಿಂತನೆ ನಡೆದಿದೆ. ಮಾಸಾಂತ್ಯದೊಳಗೆ ಜನರ ಆಗಮನ ಹೆಚ್ಚುವ ನಿರೀಕ್ಷೆ ಇದೆ.  –ಹೇಮಲ್‌ ದೇಸಾಯಿ, ಸಿಇಒ ಮಯೂರ ಆದಿತ್ಯಾ ರೆಸಾರ್ಟ್‌(ಇಂದಿರಾ ಕ್ಯಾಂಟಿನ್‌ ನಿರ್ವಹಣೆ ).

 

-ಬಸವರಾಜ ಹೂಗಾರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.