ದೇಶಭಕ್ತಿ ಕಿಚ್ಚು ಹೊತ್ತಿಸಿದ 9 ಕಿಮೀ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ

ಮಹನೀಯರ ತ್ಯಾಗ-ಬಲಿದಾನದ ಫಲವಾಗಿ ಸ್ವಾತಂತ್ರ್ಯದ ಅರಿವು ;ಯುವಜನರಲ್ಲಿ ದೇಶಾಭಿಮಾನ ಮೂಡಿಸುವ ಸದುದ್ದೇಶ

Team Udayavani, Aug 16, 2022, 12:59 PM IST

7

ಕಲಘಟಗಿ: ಸ್ವಾತಂತ್ರ್ಯ ದೊರಕಿ 75 ವರ್ಷಗಳು ಕಳೆದಿದ್ದು, ಸ್ವಾತಂತ್ರ್ಯ ಹೋರಾಟದ ಸಾವು-ನೋವು, ಹೋರಾಟಗಾರರು ಅನುಭವಿಸಿರುವ ಕಷ್ಟಗಳ ಕುರಿತು ಅರಿಯದ ಇಂದಿನ ಪೀಳಿಗೆಗೆ ಅರಿವು ಮೂಡಿಸುವುದಲ್ಲದೇ ಯುವಜನರಲ್ಲಿ ದೇಶಭಕ್ತಿಯ ಕಿಚ್ಚು ಹೊತ್ತಿಸುವ ಸದುದ್ದೇಶದಿಂದ ವಿಶ್ವದಾಖಲೆಯ ತ್ರಿವರ್ಣಧ್ವಜದ ಜಾಥಾ ಮತಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಸಂತೋಷ ಲಾಡ್‌ ಹೇಳಿದರು.

76ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅವಿಸ್ಮರಣೀಯಗೊಳಿಸಲು ದೇಶಾಭಿಮಾನದ 9 ಅಡಿ ಅಗಲ 9 ಕಿಲೋಮೀಟರ್‌ ಉದ್ದದ ಇತಿಹಾಸ ನಿರ್ಮಿತ ತ್ರಿವರ್ಣ ಧ್ವಜದ ಮೆರವಣಿಗೆ ಸೋಮವಾರ ತಾಲೂಕಿನ ದಾಸ್ತಿಕೊಪ್ಪದಿಂದ ಪಟ್ಟಣದಲ್ಲಿ ಹಾಯ್ದು ಗಲಗಿನಗಟ್ಟಿ ಕ್ರಾಸ್‌ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದ ನಂತರ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಆಯೋಜಿಸಿದ್ದ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ವರ್ಲ್ಡ್ ಬುಕ್‌ ಆಫ್‌ ರೆಕಾರ್ಡ್ಸ್‌ನ ಪ್ರೋವಿಜನಲ್‌ ಸರ್ಟಿಫಿಕೇಟ್‌ ಸಂತೋಷ ಲಾಡ್‌ ಫೌಂಡೇಶನ್‌ಗೆ ನೀಡಿರುವುದನ್ನು ಇಂದಿಲ್ಲಿ ಸ್ವೀಕರಿಸಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ದೊರಕಿ ಅಮೃತ ಮಹೋತ್ಸವ ಆಚರಣೆಯ ಸಂಭ್ರಮದಲ್ಲಿ ದೇಶಾಭಿಮಾನವನ್ನು ಇಂದಿನ ಯುವಶಕ್ತಿಗೆ ತುಂಬುವುದು ಅತೀ ಅವಶ್ಯ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸುಖಾಸುಮ್ಮನೆ ದೊರಕಿಲ್ಲ ಎಂಬುದನ್ನು ಪ್ರತಿಯೊಬ್ಬ ಪ್ರಜೆಗೂ ಮನನ ಮಾಡಲು ದೇಶದ ಪ್ರಧಾನಮಂತ್ರಿಗಳು ಹರ್‌ ಘರ್‌ ತಿರಂಗಾ ಹಮ್ಮಿಕೊಂಡಿದ್ದರು. ಅದೇ ನಿಟ್ಟಿನಲ್ಲಿ ತ್ರಿವರ್ಣಧ್ವಜ ಜಾಥಾಕ್ಕೆ ಮತಕ್ಷೇತ್ರದ ಜನತೆ ಸಾಥ್‌ ನೀಡಿದ್ದು, ಅಮೃತ ಮಹೋತ್ಸವ ಸಂಭ್ರಮಾಚರಣೆಯಲ್ಲಿ ತೊಡಗಿಸಿ ಕೊಂಡಿರುವ ನಾವೆಲ್ಲರೂ ಅದೃಷ್ಟವಂತರು. ವ್ಯಾಪಾರ ವಹಿವಾಟಿಗೆ ನಮ್ಮ ದೇಶಕ್ಕೆ ಬಂದ ಬ್ರಿಟೀಷರು 267 ವರ್ಷಗಳ ಕಾಲ ನಮ್ಮನ್ನಾಳುವುದರೊಂದಿಗೆ ಗುಲಾಮಗಿರಿಯ ಬಾಳನ್ನು ನಮ್ಮ ಪೂರ್ವಜರಿಗೆ ನೀಡಿದ್ದರು ಎಂಬುದನ್ನು ಮರೆಯಬಾರದು. ಸಹಸ್ರಾರು ಮಹನೀಯರುಗಳ ತ್ಯಾಗ-ಬಲಿದಾನದಿಂದ 1947ರ ಅಗಸ್ಟ್‌ 15ರಂದು ಸ್ವಾತಂತ್ರ್ಯ ದೊರಕಿದೆ. ಇಂದಿನ ಹಾಗೂ ಮುಂದಿನ ಪೀಳಿಗೆಗೆ ಇದನ್ನು ಪರಿಚಯಿಸುವ ಅವಶ್ಯಕತೆ ತುಂಬಾ ಇದೆ. ಇದನ್ನು ನಾವೆಲ್ಲರೂ ಅರಿತು ಮುಂದಿನವರಿಗೂ ತಿಳಿಸಬೇಕಾಗಿದೆ ಎಂದರು.

ವಿಶ್ವದಾಖಲೆಯ ತ್ರಿವರ್ಣಧ್ವಜದ ಜಾಥಾದಲ್ಲಿ ಸುಮಾರು ಒಂದು ಲಕ್ಷದಷ್ಟು ಜನರು ದೇಶಾಭಿಮಾನದಿಂದ ಪಾಲ್ಗೊಂಡಿದ್ದರು. ಸಂತೋಷ ಲಾಡ್‌ ಫೌಂಡೇಶನ್‌ ಮೂಲಕ ಪ್ರತಿ ಮುನ್ನೂರು ಮೀಟರ್‌ ಅಂತರದಲ್ಲಿ ಸುಮಾರು 30-40 ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರು ಮತ್ತು 100 ಕ್ವಿಂಟಲ್‌ ಅಕ್ಕಿಯ ಪಲಾವ್‌ ಊಟದ ವ್ಯವಸ್ಥೆ ಮಾಡಲಾಗಿತ್ತು.

ಸಹಸ್ರಾರು ಮಹನೀಯರ ತ್ಯಾಗ-ಬಲಿದಾನದ ಫಲವಾಗಿ ಸ್ವಾತಂತ್ರ್ಯ ದೊರಕಿದೆ ಎಂಬುದನ್ನು ಪ್ರತಿಯೊಬ್ಬರೂ ಅರಿಯಬೇಕಿದೆ. ಇಂದು ನಾವೆಲ್ಲರೂ ಸುಖ-ನೆಮ್ಮದಿಯಿಂದ ಬಾಳು ನಡೆಸುತ್ತಿದ್ದರೆ ನಮ್ಮ ದೇಶದ ಸೈನಿಕರ ಶ್ರಮ ಹಾಗೂ ರೈತರು ನೀಡುತ್ತಿರುವ ಸೇವೆಯೇ ಕಾರಣವಾಗಿದೆ. ಕಾರಣ ಪ್ರತಿಯೊಬ್ಬರೂ ಸಂವಿಧಾನಾತ್ಮಕವಾಗಿ ದೇಶಾಭಿಮಾನದೊಂದಿಗೆ ಬದುಕಬೇಕಾಗಿದೆ. –ಸಂತೋಷ ಲಾಡ್‌ ಮಾಜಿ ಸಚಿವ

ಟಾಪ್ ನ್ಯೂಸ್

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.