ರಸ್ತೆ ಕಾಮಗಾರಿಗೆ ಅಡ್ಡಲಾಗಿಮಲಗಿ ದಂಪತಿ ಪ್ರತಿಭಟನೆ
Team Udayavani, Mar 20, 2021, 6:05 PM IST
ಕುಂದಗೋಳ: ತರ್ಲಘಟ್ಟ ಗ್ರಾಪಂನಲ್ಲಿ ಅವ್ಯವಹಾರ ಆಗಿದೆ ಎಂದು ಆರೋಪಿಸಿ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣವರ ಕೈಗೊಂಡಿರುವ ಸತ್ಯಾಗ್ರಹ 5ನೇ ದಿನಕ್ಕೆ ಪಾದಾರ್ಪಣೆಗೊಂಡಿದ್ದು, ಶುಕ್ರವಾರ ರಸ್ತೆ ಕಾಮಗಾರಿ ಮಾಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ರಸ್ತೆ ಮಧ್ಯೆ ಮಲಗಿ ಪ್ರತಿಭಟಿಸಿದ ಘಟನೆ ಜರುಗಿದೆ.
ಗ್ರಾಮಕ್ಕೆ ಬಂದ ಕೋಟ್ಯಂತರ ರೂ. ಅನುದಾನ ದುರುಪಯೋಗ ಪಡಿಸಿಕೊಂಡಿದ್ದು ಸಂಪೂರ್ಣ ತನಿಖೆ ಆಗುವವರೆಗೂ ಯಾವುದೇ ಕಾಮಗಾರಿಗಳನ್ನು ಮಾಡಬಾರದು. ಹಿಂದೆ ಈ ರಸ್ತೆಗೆ ಲಕ್ಷಾಂತರ ರೂಪಾಯಿ ಖರ್ಚು ಹಾಕಿದ್ದಾರೆ. ಈಗ ಈ ರಸ್ತೆ ಮಾಡಿದರೆ ಎಲ್ಲ ಸಾಕ್ಷಿಗಳು ನಶಿಸಿ ಹೋಗುತ್ತವೆ. ಅಭಿವೃದ್ಧಿ ಕಾರ್ಯಕ್ಕೆ ನನ್ನ ವಿರೋಧವಿಲ್ಲ. ಮೊದಲು ಅ ಧಿಕಾರಿಗಳು 2015ರಿಂದ 20ರ ವರೆಗೆ ನಡೆದ ಅವ್ಯವಹಾರವನ್ನು ಸಂಪೂರ್ಣ ತನಿಖೆ ಮಾಡಿ ಸಂಬಂಧಪಟ್ಟ ಅಧಿ ಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲು ಆಗಬೇಕು ಹಾಗೂ ದುರುಪಯೋಗ ಪಡಿಸಿಕೊಂಡ ಹಣವನ್ನು ಪಂಚಾಯತಿಗೆ ಮರಳಿಸಬೇಕೆಂದು ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ.
ನನ್ನ ಜೀವ ಹೋದರೂ ಸರಿ ತನಿಖೆ ಆಗುವವರೆಗೂ ತುರ್ತು ಕೆಲಸ ಬಿಟ್ಟು ಬೇರೆ ಯಾವ ಕೆಲಸಕ್ಕೆ ಅನುವು ಮಾಡಿಕೊಡುವುದಿಲ್ಲ ಎಂದು ಪಟ್ಟುಹಿಡಿದರು. ಪರಿಣಾಮ ಕೆಲಕಾಲ ಗೊಂದಲದ ವಾತಾವರಣ, ಮಾತಿನ ಸಮರ ಜರುಗಿತು. ಪಿಡಿಒ ಮಧ್ಯೆ ಪ್ರವೇಶಿಸಿ ಕೆಲಸವನ್ನು ತಾತ್ಕಾಲಿಕವಾಗಿ ನಿಲ್ಲಿಸುತ್ತೇವೆ, ಸೋಮವಾರ ಗ್ರಾಮದ ಹಿರಿಯರೊಂದಿಗೆ ಜಿಪಂ ಸಿಇಒ ಅವರನ್ನು ಭೇಟಿ ಮಾಡಿ ಇಲ್ಲಿ ನಡೆದ ಘಟನೆಯನ್ನು ವಿವರಿಸುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
MUST WATCH
ಹೊಸ ಸೇರ್ಪಡೆ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್