ಅಧಿಸೂಚನೆ ಹೊರಡಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ


Team Udayavani, Jul 22, 2019, 9:37 AM IST

HUBALI-TDY-01

ನವಲಗುಂದ: ಪಕ್ಷಾತೀತ ಹೋರಾಟ ಸಮಿತಿಯಿಂದ ತಹಶೀಲ್ದಾರ್‌ ನವೀನ ಹುಲ್ಲೂರ ಮುಖಾಂತರ ಪ್ರಧಾನಮಂತ್ರಿಗೆ ಬೇಡಿಕೆಗಳ ಮನವಿ ಸಲ್ಲಿಸಲಾಯಿತು.

ನವಲಗುಂದ: ರಾಜ್ಯದಲ್ಲಿ ಸರಕಾರ ಅಸ್ಥಿರವಾಗಿದ್ದರಿಂದ ಜು. 21ಕ್ಕೆ ನೀಡಿದ ಗಡುವು ವ್ಯರ್ಥವಾಗಿದೆ. ಇನ್ನೊಂದು ತಿಂಗಳೊಳಗಾಗಿ ಮಹದಾಯಿ ಯೋಜನೆ ಕುರಿತು ಅಧಿಸೂಚನೆ ಹೊರಡಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಲಾಗುವುದೆಂದು ಪಕ್ಷಾತೀತ ಹೋರಾಟ ಸಮಿತಿಯ ಮುಖಂಡ ಸುಭಾಸಚಂದ್ರಗೌಡ ಪಾಟೀಲ ಹೇಳಿದರು.

ಪಟ್ಟಣದಲ್ಲಿ ರವಿವಾರ ನಡೆದ ರೈತ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 28 ಸಂಸದರಿದ್ದರೂ ಈ ಭಾಗದ ಜ್ವಲಂತ ಸಮಸ್ಯೆ ಮಹದಾಯಿ ಕೂಗಿಗೆ ಧ್ವನಿ ನೀಡುತ್ತಿಲ್ಲ. 1457 ದಿವಸಗಳಿಂದ ರೈತರು ನೀರಿಗಾಗಿ ಹೋರಾಟ ಮಾಡುತ್ತಿದ್ದಾರೆ. ಸರ್ಕಾರಗಳು ರೈತರ ಬೇಡಿಕೆಗಳ ಕುರಿತು ಚರ್ಚಿಸಿಲ್ಲ. ಸಂಸದರಾದವರು ರಾಜ್ಯದ ರೈತರ ಹಿತ ಕಾಪಾಡುವಲ್ಲಿ ಇಚ್ಛಾಶಕ್ತಿ ವಹಿಸಬೇಕೆಂದರು.

ಯುವ ರೈತ ಮುಖಂಡ ಮಲ್ಲೇಶ ಉಪ್ಪಾರ ಮಾತನಾಡಿ, ದಶಕಗಳಿಂದ ಸರಕಾರಕ್ಕೆ ಮನವಿ ಸಲ್ಲಿಸಿದರೂ ಕಿವಿಗೊಡದ ಸರಕಾರಗಳಿಗೆ ರೈತರು ಬಿಸಿ ಮುಟ್ಟಿಸಬೇಕಾಗಿದೆ. ನಮ್ಮ ಪಾಲಿನ ನೀರು ಬರುವವರೆಗೂ ಈ ಹೋರಾಟ ನಿಲ್ಲಲ್ಲ ಎಂದರು.

ಪಕ್ಷಾತೀತ ಹೋರಾಟ ಸಮಿತಿ ಅಧ್ಯಕ್ಷ ಬಸಪ್ಪ ಬೀರಣ್ಣವರ ನೇತೃತ್ವದಲ್ಲಿ ನೂರಾರು ರೈತರು ರೈತ ಭವನ ಬಳಿ ಇರುವ ರೈತ ಹುತಾತ್ಮ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಘೋಷಣೆ ಕೂಗಿದರು.

ರೈತ ಡಿ.ವಿ.ಕುರಹಟ್ಟಿ, ರವಿ ತೋಟದ, ಗುರುಶಿದ್ದಪ್ಪ ಕಾಲುಂಗುರ, ಸಂಗಪ್ಪ ನಿಡವಣೆ, ಶಿವಪ್ಪ ಸಂಗಳದ, ಅಲ್ಲಾಭಕ್ಷ ಹಂಚಿನಾಳ, ಬಸಯ್ಯ ಮಠಪತಿ, ಯಲ್ಲರಡ್ಡಿ ವನಹಳ್ಳಿ, ರಾಮಣ್ಣ ಕಿಲಾರಿ, ರವಿ ಪಾಟೀಲ, ಶಿದ್ದಪ್ಪ ಮುಪ್ಪಯ್ಯನವರ, ಅನುಸೂಯಾ ಲಕ್ಕುಂಡಿ, ರತ್ನವ್ವ ಲಕ್ಕುಂಡಿ, ಯಮನವ್ವ ರಂಗಣ್ಣವರ, ಪಾರಮ್ಮ ಬೋರಣ್ಣವರ ಸೇರಿದಂತೆ ನೂರಾರು ರೈತರು ಇದ್ದರು.

ರಾಜಕೀಯ ಒಳಜಗಳಗಳಿಂದ ರೈತರ- ಜನರ ಕೆಲಸ ಕುಂಠಿತ:

ಇಂದಿನ ರಾಜಕೀಯ ಒಳಜಗಳಾಟದಿಂದ ರೈತರ, ಸಾರ್ವಜನಿಕರ ಕೆಲಸಗಳು ಕುಂಠಿತಗೊಂಡಿವೆ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು. ರೈತ ಹುತಾತ್ಮ ದಿನಾಚರಣೆಯಂದು ನವಲಗುಂದ-ಅಳಗವಾಡಿಯಲ್ಲಿರುವ ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ಜನಪ್ರತಿನಿಧಿಗಳು ರೈತರ ಸಮಸ್ಯೆ ಆಲಿಸುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ರೈತ ಹುತಾತ್ಮರ ಬಲಿದಾನದಿಂದ ಇಂದು ರೈತ ಹೋರಾಟ, ಚಳವಳಿಗೆ ಸ್ಫೂರ್ತಿಯಾಗಿದೆ ಎಂದ ಅವರು ಹುತಾತ್ಮರ ನೆನಪು ಸದಾ ನಮ್ಮಲ್ಲಿರಲಿ ಎಂದರು. ರೈತ ಸಂಘದ ಪುಟ್ಟಣ್ಣಯ್ಯ ಬಣದ ದರ್ಶನ ಪುಟ್ಟಣ್ಣಯ್ಯ ಮಾತನಾಡಿ, ಇವತ್ತು ಸಾಲದಿಂದ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಸರಿಯಾದ ಬೆಳೆ ಬರದೆ ಇರುವುದರಿಂದ ರೈತರು ನಗರಕ್ಕೆ ಗುಳೆ ಹೊರಟಿದ್ದಾರೆ. ರೈತರು ಒಗ್ಗಟ್ಟಾಗಿ ನಮ್ಮ ಹಕ್ಕಿಗಾಗಿ ಸತತ ಹೋರಾಟ ಮಾಡಬೇಕೆಂದು ಹೇಳಿದರು. ರೈತ ಸಂಘದ ಅಧ್ಯಕ್ಷ ಬಡಗಾಲಪೂರ ನಾಗೇಂದ್ರ, ಗಂಗಾಧರ ಮೇಟಿ, ಬಸವರಾಜ ಸಾಬಳೆ, ವಿಠuಲ ಜಾಧವ, ರಾಘವೇಂದ್ರ ನಾಯಕ, ಸುಣ್ಣಪ್ಪ ಪೂಜಾರ, ಕರಿಯಪ್ಪ ಮೇಟಿ, ಕೊಡಗು ಜಿಲ್ಲೆಯ ರೈತ ಹೊತ್ತನಗೌಡ್ರ, ಬಸಮ್ಮ ಸಂಕಣ್ಣವರ, ವೀರಸಿಂಗ ರಜಪೂತ್‌, ಪಕ್ಷಾತೀತ ಹೋರಾಟ ಸಮಿತಿಯ ಸುಭಾಸಚಂದ್ರಗೌಡ ಪಾಟೀಲ, ಮಲ್ಲೇಶ ಉಪ್ಪಾರ, ಬಸಪ್ಪ ಬೀರಣ್ಣವರ, ಡಿ.ವಿ.ಕುರಹಟ್ಟಿ, ರವಿ ತೋಟದ, ಶಿವಪ್ಪ ಸಂಗಳದ, ಅಲ್ಲಾಭಕ್ಷ ಹಂಚಿನಾಳ ಇತರರು ಇದ್ದರು.
ಪಶ್ಚಾತ್ತಾಪ ಪಡಬೇಕಾದೀತು ಹುಷಾರ್‌:

ರಾಜ್ಯದಲ್ಲಿ ರೆಸಾರ್ಟ್‌ ರಾಜಕೀಯ ನಡೆದಿದ್ದು,ಯಾರೊಬ್ಬರು ಮಹದಾಯಿ ಕುರಿತು ಚರ್ಚಿಸುತ್ತಿಲ್ಲ. ರೈತರ ಕಷ್ಟ ಆಲಿಸದಿದ್ದರೆ ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ರೈತಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಎಚ್ಚರಿಕೆ ನೀಡಿದರು. ಪಟ್ಟಣದ ರೈತಭವನದ ಬಳಿ ಇರುವ ರೈತ ಹುತಾತ್ಮ ಬಸಪ್ಪ ಲಕ್ಕುಂಡಿಯವರ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಮಹಾದಾಯಿ ಹೋರಾಟಕ್ಕೆ ಜಾತಿ, ಮತ, ಪಂಥ ಬಿಟ್ಟು ಹೋರಾಟಕ್ಕೆ ಎಲ್ಲರೂ ಮುಂದಾಗಬೇಕು ಎಂದರು. ರೈತ ಹುತಾತ್ಮ ದಿನಾಚರಣೆಯಂದು ರಾಜಕಾರಣಿಗಳು ಮಾಲಾರ್ಪಣೆ ಮಾಡಿ ಭಾಷಣ ಮಾಡಿ ಹೋಗುತ್ತಾರೆ. ರೈತರ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತರುವುದರಲ್ಲಿ ವಿಫಲರಾಗಿದ್ದಾರೆಂದು ಕಿಡಿಕಾರಿದರು. ಮಹದಾಯಿ ನೀರು ಬಂದರೆ ನಾವು ಬಂಗಾರದಂಥ ಬೆಳೆ ತೆಗೆಬಹುದು. ರೈತರು ಜಾಗೃತರಾಗಿ ಹೋರಾಟಕ್ಕೆ ಶಕ್ತಿಯಾಗಿ ನಿಲ್ಲಬೇಕೆಂದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.