ಅಧಿಸೂಚನೆ ಹೊರಡಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
Team Udayavani, Jul 22, 2019, 9:37 AM IST
ನವಲಗುಂದ: ಪಕ್ಷಾತೀತ ಹೋರಾಟ ಸಮಿತಿಯಿಂದ ತಹಶೀಲ್ದಾರ್ ನವೀನ ಹುಲ್ಲೂರ ಮುಖಾಂತರ ಪ್ರಧಾನಮಂತ್ರಿಗೆ ಬೇಡಿಕೆಗಳ ಮನವಿ ಸಲ್ಲಿಸಲಾಯಿತು.
ನವಲಗುಂದ: ರಾಜ್ಯದಲ್ಲಿ ಸರಕಾರ ಅಸ್ಥಿರವಾಗಿದ್ದರಿಂದ ಜು. 21ಕ್ಕೆ ನೀಡಿದ ಗಡುವು ವ್ಯರ್ಥವಾಗಿದೆ. ಇನ್ನೊಂದು ತಿಂಗಳೊಳಗಾಗಿ ಮಹದಾಯಿ ಯೋಜನೆ ಕುರಿತು ಅಧಿಸೂಚನೆ ಹೊರಡಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಲಾಗುವುದೆಂದು ಪಕ್ಷಾತೀತ ಹೋರಾಟ ಸಮಿತಿಯ ಮುಖಂಡ ಸುಭಾಸಚಂದ್ರಗೌಡ ಪಾಟೀಲ ಹೇಳಿದರು.
ಪಟ್ಟಣದಲ್ಲಿ ರವಿವಾರ ನಡೆದ ರೈತ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 28 ಸಂಸದರಿದ್ದರೂ ಈ ಭಾಗದ ಜ್ವಲಂತ ಸಮಸ್ಯೆ ಮಹದಾಯಿ ಕೂಗಿಗೆ ಧ್ವನಿ ನೀಡುತ್ತಿಲ್ಲ. 1457 ದಿವಸಗಳಿಂದ ರೈತರು ನೀರಿಗಾಗಿ ಹೋರಾಟ ಮಾಡುತ್ತಿದ್ದಾರೆ. ಸರ್ಕಾರಗಳು ರೈತರ ಬೇಡಿಕೆಗಳ ಕುರಿತು ಚರ್ಚಿಸಿಲ್ಲ. ಸಂಸದರಾದವರು ರಾಜ್ಯದ ರೈತರ ಹಿತ ಕಾಪಾಡುವಲ್ಲಿ ಇಚ್ಛಾಶಕ್ತಿ ವಹಿಸಬೇಕೆಂದರು.
ಯುವ ರೈತ ಮುಖಂಡ ಮಲ್ಲೇಶ ಉಪ್ಪಾರ ಮಾತನಾಡಿ, ದಶಕಗಳಿಂದ ಸರಕಾರಕ್ಕೆ ಮನವಿ ಸಲ್ಲಿಸಿದರೂ ಕಿವಿಗೊಡದ ಸರಕಾರಗಳಿಗೆ ರೈತರು ಬಿಸಿ ಮುಟ್ಟಿಸಬೇಕಾಗಿದೆ. ನಮ್ಮ ಪಾಲಿನ ನೀರು ಬರುವವರೆಗೂ ಈ ಹೋರಾಟ ನಿಲ್ಲಲ್ಲ ಎಂದರು.
ಪಕ್ಷಾತೀತ ಹೋರಾಟ ಸಮಿತಿ ಅಧ್ಯಕ್ಷ ಬಸಪ್ಪ ಬೀರಣ್ಣವರ ನೇತೃತ್ವದಲ್ಲಿ ನೂರಾರು ರೈತರು ರೈತ ಭವನ ಬಳಿ ಇರುವ ರೈತ ಹುತಾತ್ಮ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಘೋಷಣೆ ಕೂಗಿದರು.
ರೈತ ಡಿ.ವಿ.ಕುರಹಟ್ಟಿ, ರವಿ ತೋಟದ, ಗುರುಶಿದ್ದಪ್ಪ ಕಾಲುಂಗುರ, ಸಂಗಪ್ಪ ನಿಡವಣೆ, ಶಿವಪ್ಪ ಸಂಗಳದ, ಅಲ್ಲಾಭಕ್ಷ ಹಂಚಿನಾಳ, ಬಸಯ್ಯ ಮಠಪತಿ, ಯಲ್ಲರಡ್ಡಿ ವನಹಳ್ಳಿ, ರಾಮಣ್ಣ ಕಿಲಾರಿ, ರವಿ ಪಾಟೀಲ, ಶಿದ್ದಪ್ಪ ಮುಪ್ಪಯ್ಯನವರ, ಅನುಸೂಯಾ ಲಕ್ಕುಂಡಿ, ರತ್ನವ್ವ ಲಕ್ಕುಂಡಿ, ಯಮನವ್ವ ರಂಗಣ್ಣವರ, ಪಾರಮ್ಮ ಬೋರಣ್ಣವರ ಸೇರಿದಂತೆ ನೂರಾರು ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ