ಹೇಳ ಹೆಸರಿಲ್ಲದಂತಾಗುತ್ತಿದೆ ಬೆಂಬಲ ಬೆಲೆ ಕೇಂದ್ರ!

ಬೆಳೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿದ್ದ 72 ರೈತರ ಪೈಕಿ ಯಾರೂ ಕಾಳು ಮಾರಾಟ ಮಾಡಿಲ್ಲ.

Team Udayavani, Nov 19, 2022, 12:54 PM IST

ಹೇಳ ಹೆಸರಿಲ್ಲದಂತಾಗುತ್ತಿದೆ ಬೆಂಬಲ ಬೆಲೆ ಕೇಂದ್ರ!

ಧಾರವಾಡ: ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಆರಂಭಿಸಿರುವ ಖರೀದಿ ಕೇಂದ್ರಗಳಲ್ಲಿ ನೋಂದಣಿ, ಖರೀದಿ ಪ್ರಕ್ರಿಯೆ ವರ್ಷದಿಂದ ವರ್ಷಕ್ಕೆ ಕುಸಿತ ಕಾಣುತ್ತಿದ್ದು, ರೈತರಿಂದ ಸ್ಪಂದನೆಯೂ ಕಡಿಮೆಯಾಗುತ್ತಿದೆ.

ಸೆ.1ರಿಂದಲೇ ಹೆಸರು ಬೆಳೆ ಖರೀದಿಗಾಗಿ 18 ಕೇಂದ್ರ ಹಾಗೂ ಉದ್ದು ಬೆಳೆ ಖರೀದಿಗಾಗಿ ಮೂರು ಕೇಂದ್ರ ಸ್ಥಾಪಿಸಿದ್ದು, ಅ. 13ಕ್ಕೆ ರೈತರ ನೋಂದಣಿ ಮುಕ್ತಾಯಗೊಂಡಿದೆ. ಇದೀಗ ನ.27ರ ವರೆಗೆ ಖರೀದಿ ಪ್ರಕ್ರಿಯೆ ಸಾಗಿದ್ದು, ಈ ಅವಧಿಯೂ ಇನ್ನೊಂದು ವಾರದಲ್ಲಿ ಮುಕ್ತಾಯಗೊಳ್ಳಲಿದೆ. ಆದರೆ ಅ.13ಕ್ಕೆ ಮುಕ್ತಾಯವಾಗಿರುವ ರೈತರ ನೋಂದಣಿಯಲ್ಲಿ ಶೇ.50 ರೈತರಿಂದಲೂ ಈವರೆಗೆ ಹೆಸರು ಕಾಳು ಖರೀದಿಯಾಗಿಲ್ಲ. ಇನ್ನು ಉದ್ದು ಬೆಳೆದ ರೈತರಂತೂ ಖರೀದಿ ಕೇಂದ್ರಗಳತ್ತ ಹೆಜ್ಜೆಯನ್ನೇ ಇಟ್ಟಿಲ್ಲ. ಈ ವರ್ಷದಿಂದ ಆರಂಭಿಸಿರುವ ಸೋಯಾಬೀನ್‌ ಬೆಳೆ ಮಾರಾಟಕ್ಕೂ ರೈತರಿಂದ ಸ್ಪಂದನೆ ಸಿಗುವ ನಿರೀಕ್ಷೆ ಇಲ್ಲದಂತಾಗಿದೆ.

ಹೆಸರು-ಉದ್ದು ಖರೀದಿ: 2018ರಲ್ಲಿ 27 ಸಾವಿರ ರೈತರು ನೋಂದಣಿ ಮಾಡಿಸಿದ್ದ ಜಿಲ್ಲೆಯಲ್ಲಿಯೇ 2019ರಲ್ಲಿ ತೆರೆದಿದ್ದ 8 ಖರೀದಿ ಕೇಂದ್ರಗಳಲ್ಲಿ ಕೇವಲ 3169 ರೈತರು ನೋಂದಣಿ ಮಾಡಿಸಿದ್ದರು. 2020ರಲ್ಲಿ ತೆರೆದಿದ್ದ 9 ಖರೀದಿ ಕೇಂದ್ರಗಳಲ್ಲಿ ನೋಂದಣಿಯಾಗಿದ್ದ 546 ರೈತರು ಕೂಡ ತಮ್ಮ ಬೆಳೆ ಮಾರಾಟ ಮಾಡದೇ ದೂರ ಉಳಿದುಬಿಟ್ಟರು. 2021ರಲ್ಲಿ 16 ಹೆಸರು ಖರೀದಿ ಕೇಂದ್ರ ತೆರೆಯಲಾಗಿತ್ತು. ನೋಂದಣಿ ನಿರೀಕ್ಷೆಯಷ್ಟು ಕಂಡುಬಂದರೂ ಮಳೆಯಿಂದ ಬೆಳೆ ಹಾನಿ, ಹೆಸರು ಬೆಳೆಯ ಗುಣಮಟ್ಟದ ಕೊರತೆ ಹಾಗೂ ತೇವಾಂಶ ಹೆಚ್ಚಳ ಪರಿಣಾಮ ಖರೀದಿಯೇ ಆಗಿರಲಿಲ್ಲ.

ಇದೀಗ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಆರಂಭಿಸಿರುವ 18 ಖರೀದಿ ಕೇಂದ್ರಗಳಲ್ಲಿ 13,804 ರೈತರು ಹೆಸರು ಕಾಳು ಮಾರಾಟಕ್ಕೆ ನೋಂದಣಿ ಮಾಡಿಸಿದ್ದರು. ಆದರೆ ನ.17 ವರೆಗೆ 4137 ರೈತರು ಮಾರಾಟ ಮಾಡಿದ್ದು, ಈವರೆಗೆ 47,994 ಕ್ವಿಂಟಲ್‌ ಖರೀದಿಯಾಗಿದೆ. ಅದೇ ರೀತಿ ಮೂರು ಉದ್ದು ಬೆಳೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿದ್ದ 72 ರೈತರ ಪೈಕಿ ಯಾರೂ ಕಾಳು ಮಾರಾಟ ಮಾಡಿಲ್ಲ.

ಸೋಯಾಬೀನ್‌ಗೂ ಸಿಗದ ಸ್ಪಂದನೆ: ಜಿಲ್ಲೆಯಲ್ಲಿ ಈ ವರ್ಷದಿಂದಲೇ ಬೆಂಬೆಲೆಯಡಿ ಸೋಯಾಬೀನ್‌ ಬೆಳೆ ಖರೀದಿಗಾಗಿ ಧಾರವಾಡ, ಉಪ್ಪಿನಬೆಟಗೇರಿ, ಕಲಘಟಗಿಯಲ್ಲಿ ಖರೀದಿ ಕೇಂದ್ರ ಆರಂಭಿಸಲಾಗಿದೆ.ಪ್ರತಿ ಕ್ವಿಂಟಲ್‌ಗೆ 4,300 ರೂ. ಬೆಂಬೆಲೆ ನಿಗದಿ ಮಾಡಲಾಗಿದ್ದು, ಡಿ.23 ರವರೆಗೆ ನೋಂದಣಿಗೆ ಅವಕಾಶ ನೀಡಲಾಗಿದೆ. 2023 ಫೆ.6 ವರೆಗೆ ಖರೀದಿ ಪ್ರಕ್ರಿಯೆ ಇರಲಿದೆ. ಆದರೆ ಬಹುತೇಕ ರೈತರು ಈಗಾಗಲೇ ಸೋಯಾಬೀನ್‌ ಬೆಳೆ ಮಾರಾಟ ಮಾಡಿದ್ದು, ಇದಲ್ಲದೇ ಬೆಂಬೆಲೆಗಿಂತ ಮಾರುಕಟ್ಟೆಯಲ್ಲಿಯೇ ಅಧಿಕ ಬೆಲೆ ಇರುವ ಕಾರಣ ಈವರೆಗೂ ನೋಂದಣಿಗೆ ರೈತರು ಮನಸ್ಸು ಮಾಡಿಲ್ಲ.

ಹೆಸರು ಖರೀದಿ ಅವಧಿ ವಿಸ್ತರಿಸಲು ರೈತ ಮುಖಂಡರ ಒತ್ತಾಯ
ಜಿಲ್ಲೆಯಲ್ಲಿ ಬಿತ್ತನೆಯಾದ ಹೆಸರು ಬೆಳೆಯ ಪೈಕಿ ಅಧಿಕ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿ ಉಂಟಾಗಿದ್ದು, ಮೋಡ ಕವಿದ ವಾತಾವರಣದಿಂದ ಹೆಸರು ಕಾಳಿನ ತೇವಾಂಶ ಹೆಚ್ಚಳದಿಂದ ಬೆಂಬೆಲೆಯಡಿ ಖರೀದಿ ಪ್ರಕ್ರಿಯೆಗೆ ಹಿನ್ನಡೆಯಾಗಿತ್ತು. ಇದೀಗ ತೇವಾಂಶ ಪ್ರಮಾಣ ಸರಿ ಪ್ರಮಾಣದಲ್ಲಿ ಬರುತ್ತಿರುವ ಕಾರಣ ರೈತರು ಸಹ ಖರೀದಿ ಕೇಂದ್ರಗಳಲ್ಲಿ ಹೆಸರು ಮಾರಾಟಕ್ಕೆ ಮುಂದಾಗಿದ್ದಾರೆ. ಆದರೆ ಖರೀದಿ ಪ್ರಕ್ರಿಯೆ ನ.27ಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಈ ಅವಧಿ ವಿಸ್ತರಣೆ ಮಾಡಬೇಕೆಂಬ ಬೇಡಿಕೆ ರೈತ ಸಮುದಾಯದಿಂದ ಕೇಳಿ ಬಂದಿದೆ. ಈ ಬಗ್ಗೆ ಅಧಿಕೃತವಾಗಿ ಜಿಲ್ಲಾಡಳಿತಕ್ಕೂ ರೈತ ಮುಖಂಡರು ಮನವಿ ಸಲ್ಲಿಸಿದ್ದಾರೆ.

ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಖರೀದಿಯಾಗಿದ್ದು, ನ.27ಕ್ಕೆ ಖರೀದಿ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ. ಈ ಅವಧಿ ವಿಸ್ತರಣೆಗಾಗಿ ಮನವಿ ಮಾಡಲಾಗಿದೆ. ಇನ್ನು ಉದ್ದು ಖರೀದಿಗಾಗಿ 72 ಜನ ರೈತರು ನೋಂದಣಿ ಮಾಡಿದ್ದರೂ ಈವರೆಗೂ ಯಾರೂ ಮಾರಾಟ ಮಾಡಿಲ್ಲ. ಇದೀಗ ಆರಂಭಿಸಿರುವ ಸೋಯಾಬೀನ್‌ ಖರೀದಿ ಕೇಂದ್ರಗಳಲ್ಲಿ ರೈತರ ನೋಂದಣಿ ಆರಂಭಿಸಿದ್ದು, ಆದರೆ ಮಾರುಕಟ್ಟೆಯಲ್ಲಿಯೇ ಅಧಿಕ ಬೆಲೆ ಇರುವ ಕಾರಣ ಯಾರೂ ನೋಂದಣಿ ಮಾಡಿಸಿಲ್ಲ.
ವಿನಯ್‌ ಪಾಟೀಲ, ಹುಬ್ಬಳ್ಳಿ ಶಾಖಾ
ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಹಕಾರ
ಮಾರಾಟ ಮಹಾಮಂಡಳ

ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

NIA (2)

ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ

4-shivamogga

ಒಳ ಮೀಸಲಾತಿ ಬೇಗುದಿ ; ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ, ಪ್ರತಿಭಟನೆ

tdy-16

ಆಕಾಂಕ್ಷಾ ದುಬೆ ಬಳಿಕ ಮತ್ತೊಂದು ಘಟನೆ: ನೇಣು ಬಿಗಿದ ಸ್ಥಿತಿಯಲ್ಲಿ ಯುವ ನಟಿ ಪತ್ತೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

dambula

ಇಡಬ್ಲೂಎಸ್ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರಕಾರದಿಂದ ನಿರ್ಲಕ್ಷ್ಯ: ಹನುಮಂತ ಡಂಬಳ

ವಿದರ್ಭದಿಂದ ಕರುನಾಡಿಗೆ ಗಾರ್ದಭ ಗುಳೆ; 6 ತಿಂಗಳಿಗೆ 5 ಲಕ್ಷ ರೂ. ದುಡಿಯುವ ತಂಡ

ವಿದರ್ಭದಿಂದ ಕರುನಾಡಿಗೆ ಗಾರ್ದಭ ಗುಳೆ; 6 ತಿಂಗಳಿಗೆ 5 ಲಕ್ಷ ರೂ. ದುಡಿಯುವ ತಂಡ

ಮೀಸಲಾತಿ ಬಗ್ಗೆ ಧೈರ್ಯದ ನಿರ್ಧಾರ: ಸಚಿವ ಪ್ರಹ್ಲಾದ ಜೋಷಿ

ಮೀಸಲಾತಿ ಬಗ್ಗೆ ಧೈರ್ಯದ ನಿರ್ಧಾರ: ಸಚಿವ ಪ್ರಹ್ಲಾದ ಜೋಷಿ

ಚುನಾವಣೆಗಾಗಿ ಮೀಸಲು ಹೆಚ್ಚಿಸಿಲ್ಲ: ಸಚಿವ ಮುರುಗೇಶ ನಿರಾಣಿ

ಚುನಾವಣೆಗಾಗಿ ಮೀಸಲು ಹೆಚ್ಚಿಸಿಲ್ಲ: ಸಚಿವ ಮುರುಗೇಶ ನಿರಾಣಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

1-weqewqew

ಮಂಗಳೂರಿನಲ್ಲಿ ಗಾಂಜಾ ಜಾಲ; ಪೆಡ್ಲರ್ ಸಹಿತ ನಾಲ್ವರ ಬಂಧನ

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

tdy-19

ಗುಬ್ಬಿ, ತುಮಕೂರು ನಗರ, ಗ್ರಾಮಾಂತರ ಕ್ಷೇತ್ರ ಕಗ್ಗಂಟು

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.