ಅವಶ್ಯಕತೆ ಇಲ್ಲದ ಜಾಗೆಯಲ್ಲಿ ಶೌಚಾಲಯ

ಆನೇಗುಂದಿ ಪ್ಲಾಟ್‌ನಲ್ಲಿ ಕಟ್ಟುತ್ತಿರುವ 15 ಲಕ್ಷ ಅನುದಾನದ ಶೌಚಾಲಯ ಅಸಮರ್ಪಕವಾಗಿದೆ.

Team Udayavani, Jul 6, 2022, 4:31 PM IST

ಅವಶ್ಯಕತೆ ಇಲ್ಲದ ಜಾಗೆಯಲ್ಲಿ ಶೌಚಾಲಯ

ನವಲಗುಂದ: ಪಟ್ಟಣದ ಆನೇಗುಂದಿ ಪ್ಲಾಟ್‌ ರಸ್ತೆಗೆ ಹೊಂದಿಕೊಂಡು ಶ್ರೀ ಲಾಲಗುಡಿ ದೇವಸ್ಥಾನದ ಜಾಗೆಯಲ್ಲಿ 15 ಲಕ್ಷ ರೂ. ಅನುದಾನದಲ್ಲಿ ಶೌಚಾಲಯ ನಿರ್ಮಾಣ ಮಾಡಬೇಕೆಂಬ ಯೋಜನೆಯನ್ನು ಪುರಸಭೆಯವರು ಹಾಕಿಕೊಂಡಿರುವುದನ್ನು ಖಂಡಿಸಿ ಅಲ್ಲಿನ ನಿವಾಸಿಗಳು ಮಂಗಳವಾರ ಪುರಸಭೆಗೆ ಮನವಿ ನೀಡಿ ಒತ್ತಾಯಿಸಿದ್ದಾರೆ.

ಶೌಚಾಲಯ ಅವಶ್ಯಕತೆ ಇಲ್ಲದ ಜಾಗೆಯಲ್ಲಿ ಶೌಚಾಲಯವನ್ನು ಹಾಕಿದರೆ ಮುಂದಿನ ದಿನಗಳಲ್ಲಿ ಇಲ್ಲಿಯ ಪರಿಸರ ಶುದ್ಧವಾಗಿ ಉಳಿಯುವುದಿಲ್ಲ. ಈ ಶೌಚಾಲಯವನ್ನು ಸಾರ್ವಜನಿಕರಿಗೆ ಅನುಕೂಲವಾಗುವಂತಹ ಪ್ರದೇಶಗಳಲ್ಲಿ ಹಾಕಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ “ಪುರಸಭೆ ನಿರ್ಲಕ್ಷ್ಯ; ನಿಸರ್ಗದ ಕರೆಗೆ ಬಯಲೇ ಆಸರೆ’ ಎಂಬ ಶೀರ್ಷಿಕೆಯಡಿ ಮೂತ್ರ ವಿಸರ್ಜನೆಗಾಗಿ ಸರಿಯಾದ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು ಪರದಾಡುತ್ತಿರುವ ಬಗ್ಗೆ ಉದಯವಾಣಿ ವರದಿ ಪ್ರಕಟಿಸಿತ್ತು. ಈ ನಡುವೆಯೇ ಜನದಟ್ಟಣೆ ಇಲ್ಲದ ಪ್ರದೇಶಗಳಲ್ಲಿ ಲಕ್ಷಗಟ್ಟಲೆ ಹಣ ವ್ಯಯ ಮಾಡಿ ಶೌಚಾಲಯ ಕಟ್ಟಲು ಮುಂದಾಗುತ್ತಿರುವುದು ಯಾರಿಗೂ ತಿಳಿಯದಂತಾಗಿದೆ.

ಮಾರುಕಟ್ಟೆ, ಇತರೆ ಪ್ರಮುಖ ಜನದಟ್ಟಣೆ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಹಾಗೂ ಶೌಚಾಲಯ ಇಲ್ಲದೇ ಪರಿತಪಿಸುತ್ತಿರುವ ಜನರ ಸಮಸ್ಯೆಗೆ ಪರಿಹಾರ ನೀಡುವುದನ್ನು ಬಿಟ್ಟು ಸುಸಜ್ಜಿತವಾಗಿ ಆರ್‌ಸಿಸಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿರುವ ಪ್ರದೇಶಗಳಲ್ಲಿ ಶೌಚಾಲಯವನ್ನು ಕಟ್ಟುತ್ತೇವೆ ಎಂದು ಮಂಕು ತಿಮ್ಮನ ಲೆಕ್ಕಾಚಾರ ಪುರಸಭೆ ಮಾಡುತ್ತಿರುವುದು ಈ ಭಾಗದ ಜನರಿಗೆ ಬೇಸರವನ್ನುಂಟು ಮಾಡಿದೆ.

ಪುರಸಭೆ ವಾಣಿಜ್ಯ ಮಳಿಗೆಯಲ್ಲಿಯೂ ಮೂತ್ರ ವಿಸರ್ಜನೆಗಾಗಿ ಯಾವುದೇ ಸವಲತ್ತು ಇಲ್ಲ. ಈ ಮೊದಲು ತರಕಾರಿ ಮಾರುಕಟ್ಟೆಯಲ್ಲಿದ್ದ ಮೂತ್ರಾಲಯವನ್ನು ಪುರಸಭೆಯವರು ತೆಗೆದುಹಾಕಲಾಗಿದೆ. ಹೀಗಾಗಿ ಮೂತ್ರ ವಿಸರ್ಜನೆಗೆ ಜಾಗೆ ಇಲ್ಲದೆ ಇರುವುದರಿಂದ ಪುರಸಭೆ ವಾಣಿಜ್ಯ ಸಂಕೀರ್ಣದ ಮೇಲುಗಡೆ, ಬಾಲೋದ್ಯಾನ ಬಯಲು, ಟಾಕೀಜ್‌ ರಸ್ತೆ, ಬಿಎಸ್‌ಎನ್‌ಎಲ್‌ ಕಾರ್ಯಾಲಯ ಮುಂದಿನ ಬಯಲಲ್ಲಿ ಮೂತ್ರ ವಿಸರ್ಜಿಸುತ್ತಾರೆ.

ಈ ಭಾಗದಲ್ಲಿ ಚಿಕ್ಕ ಮಕ್ಕಳ ಆಸ್ಪತ್ರೆ, ಸರಕಾರಿ ಶಾಲೆ ಹಾಗೂ ತುಂಬಾ ಜನದಟ್ಟಣೆ ಇರುತ್ತಿದ್ದು, ದುರ್ನಾತ ಬೀರುವಂತಾಗಿದೆ. ಮೂಗು ಮುಚ್ಚಿಕೊಂಡೇ ಓಡಾಡುವಂತಾಗಿದೆ. ಈಗ ಪಟ್ಟಣದ ಆನೇಗುಂದಿ ಪ್ಲಾಟ್‌ನಲ್ಲಿ ಕಟ್ಟುತ್ತಿರುವ 15 ಲಕ್ಷ ಅನುದಾನದ ಶೌಚಾಲಯ ಅಸಮರ್ಪಕವಾಗಿದೆ. ಇದರ ಅಕ್ಕಪಕ್ಕಕ್ಕೂ ದೇವಸ್ಥಾನಗಳು ನಿರ್ಮಾಣವಾಗುತ್ತಿರುವುದರಿಂದ ಶೌಚಾಲಯವನ್ನು ಇಲ್ಲಿ ಕಟ್ಟಬಾರದೆಂಬ ಕೂಗು ಈ ಭಾಗದ ಜನರದ್ದಾಗಿದೆ.

ಈ ಭಾಗದಲ್ಲಿ ಶೌಚಾಲಯ ಅವಶ್ಯಕತೆ ಇಲ್ಲ. ಜನದಟ್ಟಣೆ ಇರುವಂತಹ ಮಾರ್ಕೆಟ್‌ನಲ್ಲಿ ಒಂದು ಶೌಚಾಲಯ, ಮೂತ್ರ ವಿಸರ್ಜನೆ ವ್ಯವಸ್ಥೆ ಇಲ್ಲದೇ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುತ್ತಾರೆ. ಅವಶ್ಯಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಹಾಗೂ ಶೌಚಾಲಯವನ್ನು ಮಾಡಿ ಸರಕಾರದ ಅನುದಾನ ಸರಿಯಾಗಿ ಉಪಯೋಗಿಸವಂತಾಗಬೇಕು.
∙ಬಿ.ಕೆ. ರಾಯನಗೌಡರ, ಆನೇಗುಂದಿ ಪ್ಲಾಟ್‌ ನಿವಾಸಿ

*ಪುಂಡಲೀಕ ಮುಧೋಳ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.