ಶೌಚಾಲಯವಾಯ್ತು ಅನುಪಯುಕ್ತ ಬಸ್‌

ಬಿಆರ್‌ಟಿಎಸ್‌ ಸಿಬ್ಬಂದಿ ಸಂಕಟಕ್ಕೆ ತಾತ್ಕಾಲಿಕ ಬ್ರೇಕ್‌ ; ಪುರುಷ-ಮಹಿಳಾ ಸಿಬ್ಬಂದಿಗೆ ಪ್ರತ್ಯೇಕ ವ್ಯವಸ್ಥೆ

Team Udayavani, Oct 7, 2022, 3:22 PM IST

20

ಹುಬ್ಬಳ್ಳಿ: ಅನುಪಯುಕ್ತ ಬಸ್ಸೊಂದನ್ನು ಸಂಚಾರಿ ಶೌಚಾಲಯವನ್ನಾಗಿ ಪರಿವರ್ತಿಸಿ ನೀಡಿದ್ದರಿಂದ ಬಿಆರ್‌ಟಿಎಸ್‌ ಮಹಿಳಾ ಸಿಬ್ಬಂದಿ ಅನುಭವಿಸುತ್ತಿದ್ದ ಶೌಚಾಲಯ ಸಮಸ್ಯೆಗೆ ತಾತ್ಕಾಲಿಕ ಬ್ರೇಕ್‌ ಬಿದ್ದಂತಾಗಿದೆ.

ಬಿಆರ್‌ಟಿಎಸ್‌ ಪ್ರತ್ಯೇಕ ಪಥದಲ್ಲಿರುವ ಬಸ್‌ ನಿಲ್ದಾಣಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಶೌಚಾಲಯ ಕೊರತೆ ಅನುಭವಿಸುತ್ತಿದ್ದರು. ಪುರುಷ ಸಿಬ್ಬಂದಿಗಿಂತ ಮಹಿಳಾ ಸಿಬ್ಬಂದಿ ಮಾತ್ರ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದರು. ನಗರ ಪ್ರದೇಶಗಳಲ್ಲಿನ ನಿಲ್ದಾಣದ ಮಹಿಳಾ ಸಿಬ್ಬಂದಿ ಅನಿವಾರ್ಯ ಯಾವುದಾದರೂ ಹೊಟೇಲ್‌, ಕಚೇರಿಗಳನ್ನು ಆಶ್ರಯಿಸಿದ್ದರು. ಆದರೆ ಉಣಕಲ್ಲ ಕೆರೆ ನಿಲ್ದಾಣದಿಂದ ಧಾರವಾಡದ ಗಾಂಧಿನಗರದ ನಿಲ್ದಾಣವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಅನಿವಾರ್ಯಎಂಟು ಗಂಟೆಗಳ ಕಾಲ ಎಲ್ಲವನ್ನೂ ಸಹಿಸಿಕೊಂಡು ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ಇತ್ತು. ಆದರೆ ಸಂಚಾರಿ ಶೌಚಾಲಯ ವ್ಯವಸ್ಥೆಯಿಂದ ಸಿಬ್ಬಂದಿ ಸಂಕಟಕ್ಕೆ ತಾತ್ಕಾಲಿಕವಾಗಿ ಬ್ರೇಕ್‌ ಬಿದ್ದಂತಾಗಿದೆ.

ಸಿಬ್ಬಂದಿಗಾಗಿ ಶೌಚಾಲಯ:

ಬಿಆರ್‌ಟಿಎಸ್‌ ಕಾರಿಡಾರ್‌ ನಿಲ್ದಾಣಗಳಲ್ಲಿ ಟಿಕೆಟ್‌ ಕೌಂಟರ್‌ ಸಿಬ್ಬಂದಿ ಎಂಟು ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುತ್ತಾರೆ. ಕೆಲವೆಡೆಯಂತೂ ಪ್ರಯಾಣಿಕರ ದಟ್ಟಣೆಯಿಂದ ಒಂದೇ ಕೌಂಟರ್‌ ಇರುವ ಕಡೆಗಳಲ್ಲಿ ಕೌಂಟರ್‌ ಸೇವೆ ಬಂದ್‌ ಮಾಡುವಂತಿಲ್ಲ. ಇದರಿಂದಾಗಿ ನೈಸರ್ಗಿಕ ಕರೆಗಳಿಗೆ ಹೋಗದಂತಹ ಪರಿಸ್ಥಿತಿ ಇದೆ. ಈ ಸಮಸ್ಯೆಯಿಂದ ಕೆಲವರು ಬೇರೆಡೆಗೆ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದ ಉದಾಹರಣೆಗಳಿವೆ. ಇದೀಗ ಅನುಪಯುಕ್ತ ಬಸ್ಸೊಂದನ್ನು ಸಂಚಾರಿ ಶೌಚಾಲಯವನ್ನಾಗಿ ಪರಿವರ್ತಿಸಲಾಗಿದ್ದು, ಸಿಬ್ಬಂದಿ ಬಳಕೆಗೆ ಮಾತ್ರ ಮೀಸಲಿರಿಸಲಾಗಿದೆ.

ಪುರುಷ ಹಾಗೂ ಮಹಿಳಾ ಸಿಬ್ಬಂದಿ ಪ್ರತ್ಯೇಕ ಶೌಚಗಳಿದ್ದು, ನೀರಿನ ವ್ಯವಸ್ಥೆ ಇರುತ್ತದೆ. ಬಸ್‌ ಕೆಳಗೆ ಒಂದು ಸೆμrಕ್‌ ಟ್ಯಾಂಕ್‌ ನಿರ್ಮಿಸಿದ್ದು, ಯುಜಿಡಿ ಇರುವ ಕಡೆಗಳಲ್ಲಿ ಈ ಟ್ಯಾಂಕ್‌ ಖಾಲಿ ಮಾಡಲಾಗುತ್ತದೆ. ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ವರೆಗೆ ಒಂದು ಪಾಳೆಯದಲ್ಲಿ ಬರುವ ಸಿಬ್ಬಂದಿಗೆ 10 ರಿಂದ 11 ಗಂಟೆವರೆಗೆ ಧಾರವಾಡದಿಂದ ಹೊರಟು ಪ್ರತಿಯೊಂದು ನಿಲ್ದಾಣದ ಸಿಬ್ಬಂದಿಗೆ ಈ ಸೇವೆ ನೀಡಲಾಗುತ್ತಿದೆ. ಇನ್ನು ಮಧ್ಯಾಹ್ನ 2 ಗಂಟೆ ನಂತರ ಬರುವ ಎರಡನೇ ಪಾಳೆಯ ಸಿಬ್ಬಂದಿಗೆ ಸಂಜೆ 7 ಗಂಟೆ ಸುಮಾರಿಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಧಾರವಾಡಕ್ಕೆ ಹೊರಡುತ್ತದೆ. ಪ್ರತಿ ಪಾಳೆಯಲ್ಲಿ ಕೆಲಸ ಮಾಡುವ ಸುಮಾರು 65 ಸಿಬ್ಬಂದಿಗೆ ಇದರಿಂದ ಅನುಕೂಲವಾಗುತ್ತಿದೆ. ಹೆಚ್ಚಿನ ಬೇಡಿಕೆ ವ್ಯಕ್ತವಾದರೆ ಎರಡು ಬಾರಿ ಸಂಚರಿಸುವ ಚಿಂತನೆಯಿದೆ.

ಪತ್ರ ವ್ಯವಹಾರಕ್ಕೆ ಸೀಮಿತ: ಸಿಬ್ಬಂದಿಗೆ ಮೂಲ ಸೌಲಭ್ಯ ಕಲ್ಪಿಸದ ಕುರಿತು ಸಾಕಷ್ಟು ಚರ್ಚೆಗಳ ನಂತರ ಬಿಆರ್‌ ಟಿಎಸ್‌ ವತಿಯಿಂದ ಶೌಚಾಲಯ ನಿರ್ಮಿಸುವ ಇಂಗಿತ ವ್ಯಕ್ತವಾಗಿತ್ತು. ಆದರೆ ಇದಕ್ಕಾಗಿ ಪ್ರತ್ಯೇಕವಾಗಿ ಭೂ ಸ್ವಾಧೀನ ಪಡಿಸಿಕೊಳ್ಳುವುದು ಸುಲಭವಲ್ಲ. ಇನ್ನು ನಗರ ಪ್ರದೇಶದ ನಂತರ ಶೌಚಾಲಯ ನಿರ್ಮಾಣಕ್ಕೆ ಬೇಕಾದ ಯುಜಿಡಿ ಇರಲಿಲ್ಲ. ಪಾಲಿಕೆಯಿಂದಲೂ ಕೂಡ ಇ-ಶೌಚಾಲಯದ ವ್ಯವಸ್ಥೆ ಜಾರಿಗೆ ತರುವ ಚರ್ಚೆಗಳು ನಡೆದವು. ಆದರೆ ಇದಕ್ಕೇ ಬೇಕಾದ ಅನುದಾನದ ಪ್ರಶ್ನೆ ಎದುರಾಯಿತು. ನಿರ್ಮಾಣದ ನಂತರ ನಿರ್ವಹಣೆ ಯಾರದ್ದು ಎನ್ನುವ ಗೊಂದಲ ನಿರ್ಮಾಣವಾಯಿತು. ಇದು ಸರಕಾರದ ಹಂತಕ್ಕೂ ಹೋಗಿತ್ತು. ಈ ಹಗ್ಗಜಗ್ಗಾಟದಿಂದ ಬಿಆರ್‌ಟಿಎಸ್‌ ಕಾರಿಡಾರ್‌ದುದ್ದಕ್ಕೂ ಶೌಚಾಲಯ ನಿರ್ಮಿಸಬೇಕೆನ್ನುವ ಚರ್ಚೆ ಕೇವಲ ಕಡತಕ್ಕೆ ಸೀಮಿತವಾಯಿತು. ಹೀಗಾಗಿ ನಾಲ್ಕು ವರ್ಷಗಳಿಂದ ಮಹಿಳಾ ಸಿಬ್ಬಂದಿ ಬೇಡಿಕೆ ಕೇವಲ ಮನವಿಗೆ ಮೀಸಲು ಎನ್ನುವಂತಾಯಿತು.

ಕೋವಿಡ್‌ ಸಂದರ್ಭದಲ್ಲಿ ವಾಯವ್ಯ ಸಾರಿಗೆ ಸಂಸ್ಥೆ ಅನುಪಯುಕ್ತ ಬಸ್‌ಗಳಿಂದ ಕೋವಿಡ್‌ ತಪಾಸಣೆ, ಪರೀಕ್ಷೆ, ಲಸಿಕೆ ಹೀಗೆ ವಿವಿಧ ಕಾರ್ಯಗಳಿಗೆ ಸಿದ್ಧಪಡಿಸಿ ಸಂಬಂಧಿಸಿದ ಇಲಾಖೆಗಳಿಗೆ ನೀಡಿದ್ದರು. ಅದರಲ್ಲಿ ಈ ಸಂಚಾರಿ ಶೌಚಾಲಯವೂ ಒಂದಾಗಿತ್ತು ಈ ಬಸ್‌ನ್ನು ಸಂಪೂರ್ಣವಾಗಿ ಪರಿವರ್ತಿಸಿದ ಕಾರಣ ಇತರೆ ಕಾರ್ಯಕ್ಕೆ ಬಳಸಲು ಸಾಧ್ಯವಾಗದಂತಹ ಪರಿಸ್ಥಿತಿ ಇದೆ. ಕೋವಿಡ್‌ ನಂತರದಲ್ಲಿ ಈ ಬಸ್‌ ಅನಿವಾರ್ಯತೆ ಇರಲಿಲ್ಲ. ಹೀಗಾಗಿ ನಗರ ಸಾರಿಗೆ ವಿಭಾಗದ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ಇದರ ಸದ್ಬಳಕೆ ಹಾಗೂ ಅನಿವಾರ್ಯತೆ ಕುರಿತು ಮನವಿ ಮಾಡಿದಾಗ ಬಿಆರ್‌ಟಿಎಸ್‌ ಸಿಬ್ಬಂದಿ ಬಳಕೆಗೆ ನೀಡಲಾಗಿದೆ. ಇದರಿಂದಾಗುವ ಕಳೆದ ನಾಲ್ಕು ವರ್ಷದ ಬೇಡಿಕೆಗೆ ಪರಿಹಾರ ದೊರೆತಂತಾಗಿದೆ.

ಟಿಕೆಟ್‌ ಕೌಂಟರ್‌ಗಳ ಸಿಬ್ಬಂದಿ ಆರಂಭದಿಂದ ಶೌಚಾಲಯಕ್ಕೆ ಬೇಡಿಕೆ ಸಲ್ಲಿಸಿದ್ದರು. ಹೀಗಾಗಿ ಸಂಸ್ಥೆಯಿಂದಲೇ ನಿರ್ಮಿಸಿದ್ದ ಸಂಚಾರಿ ಶೌಚಾಲಯ ಬಸ್‌ ಇತ್ತು. ಈ ಕುರಿತು ಮಾನ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದಾಗ ಬಳಸಲು ಅನುಮತಿ ನೀಡಿದರು. ಇದರಿಂದ ಸಿಬ್ಬಂದಿಗೆ ಸಾಕಷ್ಟು ಅನುಕೂಲವಾಗಿದೆ. ಎರಡು ಪಾಳೆಯಲ್ಲಿರುವ ಬರುವ ಸಿಬ್ಬಂದಿ ಅನುಕೂಲವಾಗುವ ಸಮಯದಲ್ಲಿ ಸಂಚಾರ ಮಾಡುತ್ತಿದೆ.  -ವಿವೇಕಾನಂದ ವಿಶ್ವಜ್ಞ, ವಿಭಾಗೀಯ ನಿಯಂತ್ರಣಾಧಿಕಾರಿ, ನಗರ ಸಾರಿಗೆ ವಿಭಾಗ

ಕಾರಿಡಾರ್‌ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಶೌಚಾಲಯ ನಿರ್ಮಿಸುವ ಕುರಿತು ಸಾಕಷ್ಟು ಚರ್ಚೆಗಳು ನಡೆದಿದ್ದವು. ಆದರೆ ಯುಜಿಡಿ, ಬೇಕಾದ ಸ್ಥಳ, ನಿರ್ವಹಣೆಯಂತಹ ಕೆಲ ಕಾರಣಗಳಿಂದ ಶಾಶ್ವತ ಪರಿಹಾರದ ಪ್ರಯತ್ನಗಳು ಕೈಗೂಡಲಿಲ್ಲ. ಇದೀಗ ವಾಯವ್ಯ ಸಾರಿಗೆ ಸಂಸ್ಥೆಯಿಂದ ಸಂಚಾರಿ ಶೌಚಾಲಯ ವ್ಯವಸ್ಥೆ ಕಲ್ಪಿಸಿರುವ ಕಾರಣ ಅಲ್ಲಿನ ಸಿಬ್ಬಂದಿ ಸಾಕಷ್ಟು ಅನುಕೂಲವಾಗಿದೆ.  -ಮಂಜುನಾಥ ಜೆಡೆನವರ, ಸಾರ್ವಜನಿಕ ಸಂಪರ್ಕಾಧಿಕಾರಿ, ಬಿಆರ್‌ಟಿಎಸ್‌

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.