ಪಂಜಾಬ್ ಮಾದರಿಯಲ್ಲಿ ಕರ್ನಾಟಕದಲ್ಲೂ ಆಪ್ ಗೆ ಅಧಿಕಾರ: ಭಾಸ್ಕರ ರಾವ್


Team Udayavani, Jul 21, 2022, 12:43 PM IST

ಪಂಜಾಬ್ ಮಾದರಿಯಲ್ಲಿ ಕರ್ನಾಟಕದಲ್ಲೂ ಆಪ್ ಗೆ ಅಧಿಕಾರ: ಭಾಸ್ಕರ ರಾವ್

ಹುಬ್ಬಳ್ಳಿ: ಹೊಂದಾಣಿಕೆ ರಾಜಕೀಯಕ್ಕೆ ಅವಕಾಶ ನೀಡದೆ, ವಿಷಯಾಧಾರಿತ ಚುನಾವಣೆಗೆ ಹೋಗುತ್ತೇವೆ. ಪಂಜಾಬ್ ಮಾದರಿಯಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಆಪ್ ರಾಜ್ಯ ಉಪಾಧ್ಯಕ್ಷ ಭಾಸ್ಕರ ರಾವ್ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಕ್ಕೆ ಕಿತ್ತಾಟ, ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ. ಇರುವ ಪ್ರಮುಖ ಮೂರು ಪಕ್ಷಗಳು ಪರಸ್ಪರ ಆರೋಪ, ಹಗರಣಗಳ ಪ್ರಸ್ತಾಪಗಳ ಮೂಲಕ ಜನರ ಸಮಸ್ಯೆ, ನೈಜ ವಿಷಯಗಳನ್ನು ಮರೆಮಾಚಿಸಲಾಗುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಈಗಲೇ ಕಿತ್ತಾಟ ಶುರುವಾಗಿದೆ. ಮತದಾರರ ತೀರ್ಪು ಮೊದಲೇ ಸಿಎಂ ನಾನೇ ಎಂಬುದು ಜನತೆಗೆ ಮಾಡುವ ಅವಮಾನವಾಗಿದೆ ಎಂದರು.

ಆಪ್ ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಸೇರಿದಂತೆ ಹತ್ತು ವಿಭಾಗಳನ್ನು ಮಾಡಿದ್ದು, ತರಬೇತಿ, ಜವಾಬ್ದಾರಿ, ಅವಕಾಶ ನೀಡಿಕೆ ಕಾರ್ಯ ಮಾಡುತ್ತಿದೆ. ಗ್ರಾಮೀಣದಲ್ಲೂ ಪಕ್ಷ ಸಂಘಟನೆಗೆ ಒತ್ತು ನೀಡಿದ್ದೇವೆ.

ನಾವು ಅಧಿಕಾರಕ್ಕೆ ಬಂದರ ಏನು ಮಾಡುತ್ತೇವೆ ಎಂಬುದನ್ನು ಮನವರಿಕೆ ಮಾಡುತ್ತೇವೆ. ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆ-ಆಸ್ಪತ್ರೆಗಳನ್ನು ವಿಶ್ವದರ್ಜೆ ಮಾದಿಯಾಗಿ ಮಾಡುತ್ತೇವೆ ಎಂದರು.

ಉತ್ತರ ಕರ್ನಾಟಕದ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಇಲ್ಲಿವರೆಗೆ ಅಧಿಕಾರ ನಡೆಸಿದವರು, ಅಧಿಕಾರದಲ್ಲಿದ್ದವರಿಗೆ ಸ್ಪಷ್ಟ ಚಿಂತನೆ, ನೀಲನಕ್ಷೆ ಇಲ್ಲವಾಗಿದೆ ಎಂದರು.

ಕೇಂದ್ರ ಸರಕಾರ 25 ಕೆ.ಜಿ ಒಳಗಿನ ಆಹಾರ ಧಾನ್ಯಗಳ ಖರೀದಿಗೆ ಜಿಎಸ್ ಟಿ ವಿಧಿಸುತ್ತಿದೆ. ಅಲ್ಲಿಗೆ ತಾನು ಶ್ರೀಮಂತರ ಪರ ಸರಕಾರ ಎಂಬುದನ್ನು ಸಾಬೀತು ಪಡಿಸಿದೆ ಎಂದರು.

ಇದನ್ನೂ ಓದಿ:ನ್ಯಾಷನಲ್ ಹೆರಾಲ್ಡ್ ಪ್ರಕರಣ: E.D ಅಧಿಕಾರಿಗಳಿಂದ ಸೋನಿಯಾ ವಿಚಾರಣೆ, ಕಾಂಗ್ರೆಸ್ ಪ್ರತಿಭಟನೆ

ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿರುವುದು ದುರಹಾಂಕಾರ ಆಡಳಿತದ ಪ್ರತೀಕವಾಗಿದೆ ಎಂದು ಟೀಕಿಸಿದರು.

ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ಒಂದೋ ಠೇವಣಿ ಕಳೆದುಕೊಂಡು ಬಿಡುತ್ತದೆ ಇಲ್ಲವೆ ಎದುರಾಳಿಗಳ ಠೇವಣಿಯನ್ನು ಹಿಡಿಯಾಗಿ ಕಳೆದು ಬಿಡುತ್ತದೆ. ಕಿಚಡಿ ಸರಕಾರಕ್ಕೆ ಅವಕಾಶ ನೀಡದು. ದೆಹಲಿ,ಪಂಜಾಬ್ ನಲ್ಲಿ ಇದೆ ಆಗಿದೆ ಎಂದರು.

ಕೇಂದ್ರ ಸರಕಾರದ ಅಗ್ನಿಪಥ ಯೋಜನೆಯನ್ನು ವೈಯಕ್ತಿಕವಾಗಿ ಬೆಂಬಲಿಸುತ್ತೇನೆ. ಆದರೆ ಅದರ ಅನುಷ್ಠಾನ, ನಾನೇ ಮಾಡಿದೆ ಎಂಬ ಧೋರಣೆ, ಯುವಕರನ್ನು ದಾರಿ ತಪ್ಪಿಸುವ ಯತ್ನವನ್ನು ವಿರೋಧಿಸುತ್ತೇನೆ.

ಬೇರೆ ದೇಶಗಳಲ್ಲಿ ಇಂತಹ ಯೋಜನೆಗಳಿವೆ. ಅಗ್ನಪಥ ಯೋಜನೆ ಇಂಟ್ರನ್ ಶಿಪ್ ಎಂದು ಹೇಳಿ ಯುವಕರ ನೇಮಕಕ್ಕೆ ಮುಂದಾಗಬೇಕಿತ್ತು. ಯುವಕರಿಗೆ ಉದ್ಯೋಗ ನೀಡುತ್ತೇವೆ ಎಂದು ಬಿಂಬಿಸಲು ಹೋಗಿ ತಪ್ಪು ಮಾಡಿದರು ಎಂದರು.

ಪಕ್ಷ ಸೂಚಿಸಿದರೆ ಚುನಾವಣೆಗೆ ಸ್ಪರ್ಧಿಸಲು ಸಿದ್ದ ಎಂದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.