ಅಬಚೂರಿನ ಪೋಸ್ಟಾಫೀಸು ಕೃತಿ ಸಂವಾದ


Team Udayavani, Jun 28, 2018, 5:39 PM IST

28-june-22.jpg

ಶಿರಸಿ: ಅಮಾನುಷ ವಸ್ತು ನಿಷ್ಠೆ ದಾಟಲು ನಗುವೊಂದೇ ಆಧಾರ ಎಂಬುದನ್ನು ತೇಜಸ್ವಿಯವರ ಹಲವು ಕೃತಿಗಳಲ್ಲಿ ಕಾಣಬಹುದಾಗಿದೆ. ಸಹಜತೆ ಮತ್ತು ಕೌತುಕದ ಮೂಲಕ ಹೊಸ ಜಗತ್ತನ್ನು ಅವರು ತೆರೆದಿಡುತ್ತಾರೆ ಎಂದು ಪ್ರಸಿದ್ಧ ಸಾಹಿತಿ ಶ್ರೀಧರ ಬಳಗಾರ ಹೇಳಿದರು. ನಗರದ ನೆಮ್ಮದಿ ಕುಟೀರದಲ್ಲಿ ನಡೆದ ತೇಜಸ್ವಿಯವರ ಅಬಚೂರಿನ ಪೋಸ್ಟಾಫೀಸು ಕೃತಿ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.

ಈ ಕೃತಿ ಮೂಲಕ ತೇಜಸ್ವಿಯವರು ಅಸಂಗತ ಜಗತ್ತನ್ನು ಉತ್ತಮ ಪರಿಕಲ್ಪನೆ ಮೂಲಕ ಓದುಗರಿಗೆ ನೀಡಿದ್ದಾರೆ. ಚರಿತ್ರೆಯ ಓಟವನ್ನು ಹುಲು ಮಾನವರಾಗಿ ನಾವು ಅಸಹಾಯಕತೆಯಿಂದ ನೋಡಬೇಕಾಗುತ್ತದೆ. ಮನುಷ್ಯನ ಎಲ್ಲ ರೀತಿಯ ಹೋರಾಟ, ಇಚ್ಛೆ, ಆಯ್ಕೆಗಳನ್ನು ಯಕಶ್ಚಿತ್‌ ಎನ್ನುವಂತೆ ಚರಿತ್ರೆ ನೋಡುತ್ತದೆ. ಹೀಗಾಗಿ, ತೇಜಸ್ವಿ ಅವರಿಗೆ ಚರಿತ್ರೆ ಎನ್ನುವುದು ಅಮಾನುಷವಾದ, ವಸ್ತು ನಿಷ್ಠವಾದ ಓಟವಾಗಿ ಕಾಣುತ್ತದೆ. ಇದೇ ರೀತಿ, ಮನುಷ್ಯನ ದುಃಖ, ಸುಖ, ಹುಟ್ಟು, ಸಾವು ಎಲ್ಲವನ್ನೂ ಒಂದೇ ಬಗೆಯಾಗಿ ನೋಡುವ ಪ್ರಕೃತಿ ಕೂಡ ಅವರಿಗೆ ನಿರ್ದಯಿಯಾಗಿ ತೋರುತ್ತದೆ. ಗ್ರಾಮ ಭಾರತದ ಎಲ್ಲ ತತ್ವಗಳು, ದೇಸಿ ಜ್ಞಾನ ಸರ್ವನಾಶ ಮಾಡುವ ಆಧುನಿಕತೆ ಸಹ ಅವರಿಗೆ ಅಮಾನುಷತೆಯ ಕಲ್ಪನೆ ಕೊಡುತ್ತದೆ ಎಂದರು.

ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನವು ಕನ್ನಡಕ್ಕೆ ಹೊಸತನ ಕಟ್ಟಿಕೊಡುವ ಪ್ರಯತ್ನವಾಗಿದೆ. ಇದನ್ನು ತೇಜಸ್ವಿ ಅವರು ಪುಸ್ತಕದ ಮುನ್ನುಡಿಯಲ್ಲಿ ಸಹ ಹೇಳಿಕೊಂಡಿದ್ದಾರೆ. ಇದಕ್ಕಿಂತ ಹಿಂದಿನ ಕೃತಿಗಳು ಆತ್ಮಕೇಂದ್ರಿತ, ವ್ಯಕ್ತಿ ಕೇಂದ್ರಿತವಾದ ಅಸ್ತಿತ್ವವಾದ ಇಟ್ಟುಕೊಂಡಿದ್ದರೆ, ಈ ಕೃತಿಯು ಭಿನ್ನ ದಾರಿ ಹಿಡಿದು, ಸಮಾಜ ನಿಷ್ಠ, ಸಮುದಾಯ ಕೇಂದ್ರಿತವಾಗಿ ಸಾಗಿದೆ. ನವ್ಯವು ಅನೇಕ ಪ್ರತಿಭಾವಂತ ಸಾಹಿತಿಗಳನ್ನು ಕೊಟ್ಟಿದ್ದರೂ, ನಂತರದ ದಿನಗಳಲ್ಲಿ ಇದು ಬಿಡಿಸಲಾಗದ ರಾಹುವಾಗಿ ಕಾಡಿತು. ಕನ್ನಡಕ್ಕೆ ಅಂಟಿದ್ದ ಈ ರಾಹುವನ್ನು ಬಿಡಿಸಿದ್ದು ಅಬಚೂರಿನ ಪೋಸ್ಟಾಫೀಸು ಎಂದರು. ಪ್ರಮುಖರಾದ ಪಾಂಡುರಂಗ ಹೆಗಡೆ, ವಿ.ಪಿ. ಹೆಗಡೆ ವೈಶಾಲಿ ಇತರರು ಇದ್ದರು.

ಟಾಪ್ ನ್ಯೂಸ್

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.