ಎಸಿ ಬಸ್ಗಳ ಕಾರ್ಯಾಚರಣೆ
Team Udayavani, Jun 25, 2020, 11:32 AM IST
ಧಾರವಾಡ: ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಸಾರಿಗೆ ಸಂಸ್ಥೆಯ ಎಸಿ ಬಸ್ಗಳ ಕಾರ್ಯಾಚರಣೆಯನ್ನು ಸರ್ಕಾರದ ಅನುಮತಿ ಮೇರೆಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಆರಂಭಿಸಲಾಗುತ್ತಿದೆ.
ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಜೂ.25 ಜಾರಿಗೆ ಬರುವಂತೆ ಹಂತ ಹಂತವಾಗಿ ಎಸಿ ಬಸ್ಗಳ ಕಾರ್ಯಾಚರಣೆಯನ್ನು ಆರಂಭಿಸಲಿದೆ. ಪ್ರಸ್ತುತ ಹಂತದಲ್ಲಿ ಎಸಿ ಬಸ್ ಸೇವೆಗಳನ್ನು ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ವಿವಿಧ ಸ್ಥಳಗಳಿಂದ ಬೆಂಗಳೂರು, ಮೈಸೂರು ಸ್ಥಳಗಳಿಗೆ ಮತ್ತು ಆ ಸ್ಥಳಗಳಿಂದ ಸಾರಿಗೆ ಕಾರ್ಯಾಚರಣೆ ಮಾಡಲಾಗುತ್ತಿದೆ. ಬಸ್ಸಿನೊಳಗಿನ ತಾಪಮಾನವನ್ನು ಸರ್ಕಾರದ ಮಾರ್ಗಸೂಚಿಗಳನ್ವಯ 24-25 ಡಿಗ್ರಿ ಸೆಲ್ಸಿಯಸ್ನಲ್ಲಿ ನಿರ್ವಹಿಸಲಾಗುತ್ತದೆ. ಇದಲ್ಲದೆ, ಕೋವಿಡ್-19 ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ, ರಾತ್ರಿ ಸೇವಾ ಬಸ್ಗಳಲ್ಲಿ ಯಾವುದೇ ರೀತಿಯ ಹೊದಿಕೆ ನೀಡಲಾಗಲ್ಲ. ಪ್ರಯಾಣಿಕರು ತಮ್ಮ ಸ್ವಂತ ಹೊದಿಕೆ ಬಳಸಿಕೊಳ್ಳಲು ಕೋರಲಾಗಿದೆ. ಪ್ರಯಾಣಿಕರು ಆನ್ಲೈನ್ ನಲ್ಲಿ ಮುಂಚಿತವಾಗಿ www.ksrtc.in ನಲ್ಲಿ ಸೇವೆಗಳಿಗಾಗಿ ಸಂಸ್ಥೆಯ ಫ್ರಾಂಚೈಸೀ ಮತ್ತು ಮುಂಗಡ ಕಾಯ್ದಿರಿಸುವಿಕೆ ಕೌಂಟರ್ಗಳ ಮೂಲಕ ಟಿಕೇಟ್ ಕಾಯ್ದಿರಿಸಬಹುದು. ಪ್ರಯಾಣಿಕರು ಮೇಲಿನ ಸೌಲಭ್ಯ ಪಡೆಯಬಹುದಾಗಿದೆ ಎಂದು ಹುಬ್ಬಳ್ಳಿಯ ವಾಕರಸಾ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್