ಲಂಚ ಪಡೆಯುವಾಗ ಎಸಿಬಿ ಬಲೆಗೆ ಪಾಲಿಕೆ ನೌಕರ


Team Udayavani, Aug 18, 2017, 12:30 PM IST

hub3.jpg

ಧಾರವಾಡ: ಕಚೇರಿಯಲ್ಲಿ ಮಾಡಿದ ಕೆಲಸಕ್ಕೆ ದೇವಸ್ಥಾನದ ಆವರಣದಲ್ಲಿ ಲಂಚ ಪಡೆಯುತ್ತಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ದ್ವಿತೀಯ ದರ್ಜೆ ಸಹಾಯಕನೊಬ್ಬ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾನೆ. 

ನಿವೇಶನದ ಉತಾರ ಮಾಡಿಕೊಡಲು 15 ಸಾವಿರ ರೂ.ಗಳ ಲಂಚ ಕೇಳಿದ್ದ ಪಾಲಿಕೆಯ ದ್ವಿತೀಯ ದರ್ಜೆ ಸಹಾಯಕ ಸುರೇಶ ಗೊಲ್ಲರ ಗುರುವಾರ ಇಲ್ಲಿನ ಸಮೀಪದ ಸಾಯಿಬಾಬಾ ಮಂದಿರದಲ್ಲಿ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ ಅಧಿ ಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾನೆ. 

ವೀರಭದ್ರಪ್ಪ ನಾವಲಗಿ ಎಂಬುವವರು ಕೆಲಗೇರಿಯಲ್ಲಿ ತಮಗೆ ಸೇರಿದ 8 ಗುಂಟೆ ನಿವೇಶನಕ್ಕೆ ಸಂಬಂಧಿಸಿದಂತೆ ಉತಾರ ಮಾಡಿ ಕೊಡಲು 2016ರ ಏಪ್ರಿಲ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ಕೇವಲ 5 ಗುಂಟೆಯ ಜಾಗಕ್ಕೆ ಉತಾರ ನೀಡಿದ್ದ ಪಾಲಿಕೆ ಅ ಧಿಕಾರಿಗಳು, ಉಳಿದ 3 ಗುಂಟೆಯನ್ನು ಹಾಗೇ ಬಿಟ್ಟಿದ್ದರು.

ಅದನ್ನೂಮತ್ತೆ ಮರಳಿ ಉತಾರಲ್ಲಿ ದಾಖಲಿಸುವಂತೆ ಕೋರಿ ಮೂರು ತಿಂಗಳ ಹಿಂದೆ ವೀರಭದ್ರಪ್ಪ ಮತ್ತೂಂದು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಸಲ್ಲಿಸಿದಾಗಿನಿಂದ ಅನೇಕ ಬಾರಿ ತಮ್ಮ ಕೆಲಸ ಮಾಡಿಕೊಡುವಂತೆ ಕೇಳಿಕೊಂಡರೂ ವೀರಭದ್ರಪ್ಪ ಅವರನ್ನು ಈತ ಇನ್ನೂ ಕೆಲಸವಾಗಿಲ್ಲ. ನಾಳೆ ಬನ್ನಿ, ನಾಡಿದ್ದು ಬನ್ನಿ ಎಂದು ಹೇಳಿ ಸತಾಯಿಸುತ್ತಿದ್ದ.

ಕೊನೆಗೆ ಈ ಕೆಲಸಕ್ಕೆ ಸುರೇಶ ಗೊಲ್ಲರ 15 ಸಾವಿರ ರೂ. ಲಂಚದ ಬೇಡಿಕೆ ಇಟ್ಟ. ಲಂಚದ ಬೇಡಿಕೆ ಇಡುತ್ತಿದ್ದಂತೆ ವೀರಭದ್ರಪ್ಪ ಒಂದು ವಾರದ ಹಿಂದೆ ಎಸಿಬಿ ಅ ಧಿಕಾರಿಗಳಿಗೆ ಈ ಕುರಿತು ದೂರು ನೀಡಿದ್ದರು. ಕೊನೆಗೆ ಇಲ್ಲಿನ ಕೆಲಗೇರಿ ಸಾಯಿಬಾಬಾ ಗುಡಿಯ ಬಳಿ ಗುರುವಾರ ಬೆಳಿಗ್ಗೆ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿ,

ಸುರೇಶನನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸಿಬಿ ಇನ್‌ಸ್ಪೆಕ್ಟರ್‌ ಪ್ರಮೋದ ಯಲಿಗಾರ ತಿಳಿಸಿದ್ದಾರೆ. ನಂತರ ಬಾರಾಕೋಟ್ರಿ ಬಳಿ ಇರುವ ಪಾಲಿಕೆ ವಲಯ ಕಚೇರಿ1ಕ್ಕೆ ತೆರಳಿದ  ಡಿಎಸ್‌ಪಿ ಜೆ.ರಘು ನೇತೃತ್ವದ ತಂಡ,ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ಪರಿಶೀಲನೆ ನಡೆಸಿತು.

ಈ ಸಂದರ್ಭದಲ್ಲಿ ಎದುರಿಗೆ ಇದ್ದ ಕಡತಗಳನ್ನು ಸುಮಾರು ಒಂದೂವರೆ ಗಂಟೆ ಕಾಲ ಹುಡುಕಾಡಿದಂತೆ ಮಾಡಿ ಸುರೇಶ ಸತಾಯಿಸಿದ. ನಂತರ ಎಸಿಬಿ ಅಧಿಕಾರಿಗಳೇ ಹುಡುಕಿ ತೆಗೆದರು. ದಾಳಿ ವೇಳೆ ತನಿಖಾ ಧಿಕಾರಿ ಬಿ.ಎ.ಜಾಧವ, ಜಯಾ ಕಟ್ಟಿ, ಗಿರೀಶ ಮನಸೂರು, ಲೋಕೇಶ ಬೆಂಡಿಕಾಯಿ, ಎಸ್‌.ಎಸ್‌. ಕಾಜಗಾರ ತಂಡದಲ್ಲಿದ್ದರು.  

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.