ಧಾರವಾಡ: ಕೊಲೆ ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು
Team Udayavani, Jul 6, 2020, 10:51 AM IST
ಧಾರವಾಡ: ಇಲ್ಲಿನ ಮದಿಹಾಳದಲ್ಲಿ ನಿನ್ನೆ ನಡೆದ ಕೊಲೆಗೆ ಸಂಬಂಧಿಸಿದಂತೆ ರೌಡಿಶೀಟರ್ ಶ್ರೀಶೈಲ ಗಾಣಿಗೇರನನ್ನು ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರ ಯಶಸ್ವಿಯಾಗಿದ್ದಾರೆ.
ಶಿವಯೋಗಿ ಭಾವಿಕಟ್ಟಿ ಹಾಗೂ ಆರೋಪಿ ಶ್ರೀಶೈಲ ಗಾಣಿಗೇರ ಮಧ್ಯೆ ಆಸ್ತಿಗೆ ಸಂಬಂಧಿಸಿದ ವ್ಯವಹಾರವಿತ್ತು. ಈ ಸಂಬಂಧ ಮೊನ್ನೆ ತಡರಾತ್ರಿ ಶಿವಯೋಗಿ ಹಾಗೂ ಆತನ ಇನ್ನಿಬ್ಬರು ಸಹಚರರಾದ ಈರಪ್ಪ ಯಂಗಳ್ಳಿ ಹಾಗೂ ಸುನೀಲ ಕೋನಣ್ಣವರ ಅವರು ಶ್ರೀಶೈಲನ ಮನೆಗೆ ಹೋಗಿ ಕ್ಯಾತೆ ತೆಗೆದಿದ್ದರು. ಈ ಜಗಳ ವಿಕೋಪಕ್ಕೆ ಹೋಗಿದ್ದರಿಂದ ಶ್ರೀಶೈಲ ರಿವಾಲ್ವಾರ್ ನಿಂದ ಶಿವಯೋಗಿಯನ್ನು ಹತ್ಯೆ ಮಾಡಿದ್ದಾನೆ. ಅಲ್ಲದೇ ಉಳಿದ ಇಬ್ಬರ ಮೇಲೂ ದಾಳಿ ನಡೆಸಿದ್ದು, ಅವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ನಡೆದ ಕೂಡಲೇ ಆರೋಪಿ ಶ್ರೀಶೈಲ ಅಲ್ಲಿಂದ ಪರಾರಿಯಾಗಿದ್ದ.
ಆರೋಪಿಯನ್ನು ಪತ್ತೆ ಮಾಡಲು ಪೊಲೀಸ್ ಆಯುಕ್ತ ಆರ್.ದಿಲೀಪ್ ಅವರು ಎಸಿಪಿ ಅನುಶಾ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿದ್ದರು. ಆ ತಂಡ ಇದೀಗ ಆರೋಪಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಆತನಿಂದ ಹತ್ಯೆಗೆ ಬಳಸಿದ ರಿವಾಲ್ವಾರ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು