ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ

ಡವಗಿ ನಾಲಾದಲ್ಲಿದೆ 2 ವಾರಕ್ಕೆ ಸಾಕಾಗುವಷ್ಟು ನೀರು

Team Udayavani, Apr 1, 2022, 10:24 AM IST

4

ಅಳ್ನಾವರ: ಕಾಳಿ ನದಿಯಿಂದ ನೀರು ಬರುವ ಪೂರ್ವದ ದಿನಗಳಲ್ಲಿ ಪಟ್ಟಣದ ಜನತೆಗೆ ಕುಡಿಯುವ ನೀರಿನ ತೊಂದರೆಯಾಗದ ಹಾಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ತಹಶೀಲ್ದಾರ್‌ ಅಮರೇಶ ಪಮ್ಮಾರ ಹೇಳಿದರು.

ಸ್ಥಳಿಯ ಪಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಇನ್ನೂ ಎರಡು ವಾರಕ್ಕೆ ಬೇಕಾಗುವಷ್ಟು ನೀರು ಡವಗಿ ನಾಲಾದಲ್ಲಿ ಸಂಗ್ರಹ ಇದೆ. ಅಷ್ಟರಲ್ಲೇ ಕಾಳಿ ನದಿ ನೀರು ಬರುವ ಮುನ್ಸೂಚನೆ ಇದೆ. ಅವಶ್ಯ ಬಿದ್ದರೆ ಹೂಲಿಕೇರಿ ಇಂದಿರಮ್ಮನ ಕೆರೆಯಿಂದ ನೀರು ತಂದು ಜನತೆಗೆ ನೀಡಲಾಗುವುದು. ಕಾಳಿ ನದಿಯಿಂದ ನೀರು ತರುವ ಯೋಜನೆ ಮುಕ್ತಾಯದ ಹಂತದಲ್ಲಿದೆ. ಅಂತಿಮ ಹಂತದ ಕೆಲಸ ವೇಗವಾಗಿ ನಡೆಯುತ್ತಿದೆ ಎಂದರು.

ಸದಸ್ಯ ಛಗನ್‌ ಪಟೇಲ್‌ ಮಾತನಾಡಿ, ಪಟ್ಟಣದಲ್ಲಿ ಸ್ವತ್ಛತೆ ಕಾರ್ಯ ಸರಿಯಾಗಿ ನಿಭಾಯಿಸಲು ಹೆಚ್ಚಿನ ಕೂಲಿಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಬೇಕು. ಮಳೆಗಾಲ ಆರಂಭಕ್ಕೂ ಮುನ್ನ ಟೆಂಡರ್‌ ಆದ ಎಲ್ಲ ಕಾಮಗಾರಿ ಮುಗಿಸುವಂತೆ ನೋಡಿಕೊಳ್ಳಬೇಕು. ಪೌರ ಕಾರ್ಮಿಕರಿಗೆ ಉತ್ತಮ ಗುಣಮಟ್ಟದ ಪರಿಕರ ಒದಗಿಸಬೇಕು ಎಂದು ಹೇಳಿದರು.

ಸದಸ್ಯ ಅಮೂಲ ಗುಂಜೀಕರ ಮಾತನಾಡಿ, ಆರ್‌ಒ ಪ್ಲಾಂಟ್‌ನಲ್ಲಿ ದಿನಾಲು ಶೇಖರಣೆ ಆಗುವ ಹಣದ ಬಗ್ಗೆ ಸದಸ್ಯರಿಗೆ ಸರಿಯಾಗಿ ಲೆಕ್ಕಪತ್ರ ಮಾಹಿತಿ ನೀಡಬೇಕು. ಹೊಸದಾಗಿ ಮನೆ ಕಟ್ಟಿಕೊಳ್ಳುವವರು ನಿಯಮಗಳನ್ನು ಪಾಲಿಸಬೇಕು. ಪಟ್ಟಣಕ್ಕೆ ಸಂಪರ್ಕ ನೀಡುವ ಅಪ್ರೋಚ್‌ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕು ಎಂದರು.

ಸ್ವಯಂ ಘೋಷಿತ ಆಸ್ತಿ ತೆರಿಗೆ ಶೇ.3 ಪರಿಷ್ಕರಣೆ,ಲೈಸೆನ್ಸ್‌ ಫೀ ಹೆಚ್ಚಳಕ್ಕೆ ಸಭೆ ಸೂಚಿಸಿತು. ಪಟ್ಟಣದಲ್ಲಿ ಆಸ್ತಿ ತೆರಿಗೆ 51 ಲಕ್ಷದಲ್ಲಿ ರೂ.ದಲ್ಲಿ 44 ಲಕ್ಷ ರೂ.ಹಾಗೂ ನೀರಿನ ಕರ 51ಲಕ್ಷದಲ್ಲಿ ರೂ.ದಲ್ಲಿ 27 ಲಕ್ಷ ವಸೂಲಿ ಆಗಿದೆ ಎಂದು ಎಸ್‌.ಆರ್‌. ಹಿರೇಹಾಳ ತಿಳಿಸಿದರು.

ಹಿರಿಯ ಸದಸ್ಯ ರೂಪೇಶ ಗುಂಡಕಲ್‌ ಮಾತನಾಡಿ, ಮರಾಠಾ ಸಮಾಜದಲ್ಲಿನ ಶವಸಂಸ್ಕಾರಕ್ಕೆ ಇನ್ನೊಂದು ಶೆಡ್‌ ನಿರ್ಮಿಸಬೇಕು. ಆಶ್ರಯ ಕಾಲನಿಯ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಎಂ.ಸಿ.ಪ್ಲಾಟ್‌ ಗಾರ್ಡನ್‌ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದರು.

ಎಸ್‌ಎಫ್‌ಸಿ ಯೋಜನೆಯಡಿ 12.4 ಲಕ್ಷ ರೂ. ಗಳಿಗೆ ಕ್ರಿಯಾ ಯೋಜನೆ, ಸ್ವತ್ಛ ಭಾರತ ಮಿಶನ್‌ ಅಡಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು 38.74 ಲಕ್ಷ ರೂ. ಅನುದಾನಕ್ಕೆ ಅರ್ಜಿ ಕರೆಯಲು ವಿವಿಧ ಯೋಜನೆಯಡಿ ಕರೆಯಲಾದ ಟೆಂಡರ್‌ ಕಾಮಗಾರಿಗಳಿಗೆ ಅಡಳಿತಾತ್ಮಕ ಅನುಮೋದನೆ ನೀಡಲಾಯಿತು. ಎಸ್‌ಎಫ್‌ಸಿ ಯೋಜನೆಯಡಿ ಶೇ. 24.10 ರ ಯೋಜನೆಯಡಿ ಬಾಕಿ ಉಳಿದ 99 ಲಕ್ಷ ರೂ. ಮೊತ್ತಕ್ಕೆ ಕ್ರಿಯಾ ಯೋಜನೆ ತಯಾರಿಸಲಾಯಿತು. ಶೇ.5ರಲ್ಲಿ ದಿವ್ಯಾಂಗರಿಗೆ, ಶೇ.7.5 ರ ಯೋಜನೆಯಡಿ ಡೆ ನಲ್ಮ್ ಯೋಜನೆಯಡಿ ಸ್ವಯಂ ಉದ್ಯೋಗಕ್ಕಾಗಿ ಸಾಲ ಪಡೆದ ಫಲಾನುಭವಿಗಳಿಗೆ ಸಹಾಯಧನ ವಂತಿಕೆ ನೀಡಲು ಒಪ್ಪಿಗೆ ನೀಡಲಾಯಿತು.

ಉಪಾಧ್ಯಕ್ಷ ನದೀಮ ಕಾಂಟ್ರ್ಯಾಕ್ಟರ್‌ ಅಧ್ಯಕ್ಷತೆ ವಹಿಸಿದ್ದರು. ಪ್ರಭಾರಿ ಮುಖ್ಯಾಧಿಕಾರಿ, ತಹಶೀಲ್ದಾರ್‌ ಅಮರೇಶ ಪಮ್ಮಾರ, ಸ್ಥಾಯಿ ಸಮಿತಿ ಅಧ್ಯಕ್ಷ ರಾಜು ಯಲಕಪಾಟಿ, ಸದಸ್ಯರಾದ ರೇಶ್ಮಿ ತೇಗೂರ, ಸುನಂದಾ ಕಲ್ಲು, ಭಾಗ್ಯವತಿ ಕುರುಬರ, ಜೈಲಾನಿ ಸುದರ್ಜಿ, ನೇತ್ರಾವತಿ ಕಡಕೋಳ, ನೌಸಿನ ಗೋರಿ, ಅಂಜಲಿನ್‌ ಬೆರೆಟ್ಟೊ, ಮಂಗಳಾ ರವಳಪ್ಪನವರ, ತಮೀಮ ತೇರಗಾಂವ, ರಮೇಶ ಕುನ್ನೂರಕರ, ಯಲ್ಲಪ್ಪ ಹೂಲಿ, ಮಧು ಬಡಸ್ಕರ್‌, ರೂಪೇಶ ಗುಂಡಕಲ್‌, ಛಗನಲಾಲ ಪಟೇಲ, ಅಮೂಲ ಗುಂಜೀಕರ, ನಾಮ ನಿರ್ದೇಶನ ಸದಸ್ಯರಾದ ಅಶೋಕ ಬರಗುಂಡಿ, ಅನ್ನಪೂರ್ಣಾ ಕೌಜಲಗಿ, ಪ್ರತಾಪ ಕಲಾಲ ಇದ್ದರು.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.