ಡೆಂಘೀ ಹರಡದಂತೆ ಕ್ರಮ
Team Udayavani, Jun 23, 2018, 5:42 PM IST
ಜಮಖಂಡಿ: ತಾಲೂಕಿನಲ್ಲಿ ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಾಲೂಕು ಮಟ್ಟದ ಸರ್ಕಾರಿ ಇಲಾಖೆಗಳ ಸಹಕಾರ-ಸಹಯೋಗ ಅತೀ ಅವಶ್ಯವಾಗಿದೆ. ನಗರಸಭೆ ಮತ್ತು ನೀರು ಪೂರೈಕೆ ಮಂಡಳಿ ಸಿಬ್ಬಂದಿ ಅಚ್ಚುಕಟ್ಟಾಗಿ ತಮ್ಮ-ತಮ್ಮ ಕೆಲಸ ನಿರ್ವಹಿಸಿದರೆ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಜಿ.ಎಸ್.ಗಲಗಲಿ ಹೇಳಿದರು.
ನಗರದ ಕುಡಚಿ ರಸ್ತೆಯಲ್ಲಿರುವ ಮಿನಿ ವಿಧಾನಸೌಧ ಕಚೇರಿ ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಳೆಗಾಲ ಪ್ರಾರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೊಳ್ಳಗಳು ಉತ್ಪತ್ತಿಯಾಗುತ್ತಿದ್ದು, ಮನೆ ಮುಂದೆ ನೀರು ಸಂಗ್ರಹ ಮಾಡಿಕೊಳ್ಳಬಾರದು. ಈಗಾಗಲೇ ತಾಲೂಕಿನಲ್ಲಿ 31 ಚಿಕೂನ್ ಗುನ್ಯಾ ಪ್ರಕರಣಗಳ ಬಗ್ಗೆ ಸಂಶಯ ಪಡಲಾಗಿದ್ದು, ತಾಲೂಕಿನ ಹಿಪ್ಪರಗಿ, ಶಿರಗುಪ್ಪಿ, ರಬಕವಿ-ಬನಹಟ್ಟಿ, ತೇರದಾಳಗಳಲ್ಲಿ ಆಶಾ ಕಾರ್ಯಕರ್ತೆಯರು ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುತ್ತಿದ್ದಾರೆ. 74 ಡೆಂಘೀ ಬಗ್ಗೆ ಸಂಶಯ ಪಡೆಲಾಗಿದ್ದು, ಅದರಲ್ಲಿ 11 ಪ್ರಕರಣ ಗುರುತಿಸಲಾಗಿದ್ದು, ಅದರಲ್ಲಿ ಒಂದು ಮಲೇರಿಯಾ ರೋಗ ಕೇಸ್ ದಾಖಲಾಗಿದೆ ಎಂದರು.
ಡಾ|ಎಚ್.ಜಿ. ದಡ್ಡಿ ಮಾತನಾಡಿ, ತಾಲೂಕಿನಲ್ಲಿ ಉಣ್ಣೆ ಜ್ವರ ಪತ್ತೆಯಾಗಿದ್ದು, ಜಮಖಂಡಿ-ಬನಹಟ್ಟಿಗಳಲ್ಲಿ ವೈದ್ಯರ ಸಭೆ ಕರೆದು ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ಜಮಖಂಡಿ-ರಬಕವಿ-ಬನಹಟ್ಟಿ ನಗರಸಭೆಗಳಲ್ಲಿ ಚರಂಡಿ ಸ್ವಚ್ಛತೆ ಬಗ್ಗೆ ತಿಳಿವಳಿಕೆ ಮೂಡಿಸುವ ಶಿಬಿರ ನಡೆಸಬೇಕು. ಅಲ್ಲದೇ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಹಾಗೂ ಸ್ವತ್ಛ-ಶುದ್ಧ ನೀರು ಪೂರೈಕೆ ಮಾಡಬೇಕು. ಕಾಟಾಚಾರಕ್ಕೆ ಸಭೆ ನಡೆಸದೆ ಪ್ರತಿಯೊಬ್ಬರು ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು. ಕಂದಾಯ ಇಲಾಖೆ ಶಿರಸ್ತೇದಾರ್ ಎ.ಎಸ್. ಗೋಟ್ಯಾಳ, ಸಮಾಜ ಕಲ್ಯಾಣಾಧಿ ಕಾರಿ ಟಿ.ವಿ. ಮಂಟೂರ, ಎಸ್.ಎಸ್. ಕಡ್ಲಿಮಟ್ಟಿ, ಪ್ರಕಾಶ ಗೌಡರ, ಸಿಡಿಪಿಒ ಎಸ್.ಆರ್.ವಾಲೇಕರ, ತಾಪಂ ಅ ಧಿಕಾರಿ
ಬಿ.ಎ.ಬಿರಾದಾರ, ರಬಕವಿ-ಬನಹಟ್ಟಿ, ಜಮಖಂಡಿ ನಗರಸಭೆ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾ ಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ