ಹಿರಿಯರ ಮೇಲಿನ ದೌರ್ಜನ್ಯ ತಡೆಗೆ ಕ್ರಮ
•ಇಂದಿನ ಯುವಕರ ಎದುರು ಹಿರಿಯರೇ ತರುಣರು: ಜುಬೇರ•60 ದಿನಗಳಲ್ಲಿ ದೂರಿಗೆ ಪರಿಹಾರ ಭರವಸೆ
Team Udayavani, Jul 21, 2019, 10:00 AM IST
ಹುಬ್ಬಳ್ಳಿ: ಹೊಸೂರ ವೃತ್ತದಲ್ಲಿರುವ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಮಹಮ್ಮದ ಜುಬೇರ ಉದ್ಘಾಟಿಸಿದರು.
ಹುಬ್ಬಳ್ಳಿ: ವಯೋವೃದ್ಧರು ಒಂದೆಡೆ ಕುಳಿತುಕೊಳ್ಳದೆ ಸದಾ ಕ್ರಿಯಾಶೀಲರಾಗಿರಬೇಕು ಎಂದು ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ ಹೇಳಿದರು.
ಹೊಸೂರ ವೃತ್ತದಲ್ಲಿರುವ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಗೆ ಭೇಟಿ ನೀಡಿ ಅವರು ಮಾತನಾಡಿದರು. ಎಲ್ಲ ನಿವೃತ್ತ ನೌಕರರು ಹಾಗೂ ನಾಗರಿಕರು ಕೂಡಿಕೊಂಡು ನಿರ್ಮಿಸಿರುವ ಈ ವೇದಿಕೆಯಲ್ಲಿ ಇಂದು ಸಾವಿರಾರು ಜನರು ಸದಸ್ಯತ್ವ ಪಡೆದುಕೊಂಡಿರುವುದು ಹೆಮ್ಮೆಯ ವಿಷಯ. ಇಂದಿನ ಯುವಕರನ್ನು ನೋಡಿದರೆ ಅವರ ಮುಂದೆ ನೀವೆಲ್ಲರೂ ನವತರುಣರೇ ಆಗಿದ್ದೀರಿ. ನಿಮ್ಮ ದೇಹಕ್ಕೆ ವಯಸ್ಸಾಗಿದೆ ಹೊರತು ಮನಸ್ಸಿಗಲ್ಲ ಎಂದರು.
ಜಿಲ್ಲೆಯಲ್ಲಿ ಹಿರಿಯರ ಮೇಲೆ ಮಕ್ಕಳ ದೌರ್ಜನ್ಯ ಕುರಿತು 27 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಈಗಾಗಲೇ ಸುಮಾರು 18ಕ್ಕೂ ಹೆಚ್ಚು ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ. ಉತ್ತಮ ಹುದ್ದೆಯಲ್ಲಿರುವ ಮಕ್ಕಳು ತಂದೆ-ತಾಯಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವುದು, ಮನೆಯಿಂದ ಹೊರಹಾಕುವುದು, ದೌರ್ಜನ್ಯ ಎಸಗುವುದು ಮಾಡುತ್ತಿದ್ದಾರೆ. ಇಂತಹ ಕೃತ್ಯ ತಡೆ ಹಾಗೂ ಹಿರಿಯ ನಾಗರಿಕರ ರಕ್ಷಣೆಗಾಗಿ ಒಂದು ವೇದಿಕೆ ನಿರ್ಮಿಸಲಾಗಿದೆ. ಅಲ್ಲಿ ನಿಮ್ಮ ದೂರು ನೀಡಿದಲ್ಲಿ 60 ದಿನಗಳಲ್ಲಿ ಅದಕ್ಕೆ ಪರಿಹಾರ ದೊರಕಿಸಿಕೊಡಲಾಗುವುದು ಎಂದು ಹೇಳಿದರು.
ಸಂಘದ ರಾಜ್ಯಾಧ್ಯಕ್ಷ ಬಿ.ಎ. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಕ್ಕೆ ನೀಡಿರುವ ಜಾಗದಲ್ಲಿ ಕೆಲವೊಂದು ತಾಂತ್ರಿಕ ತೊಂದರೆಗಳು ಕಂಡು ಬಂದಿದ್ದು ಅವುಗಳನ್ನು ಬಗೆಹರಿಸಿಕೊಡುವಂತೆ ಉಪವಿಭಾಗಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.
ಭಾರತದ ಉತ್ತಮ ನಾಗರಿಕ ಪ್ರಶಸ್ತಿ ಪಡೆದ ಟಾಕಪ್ಪ ಯಲ್ಲಪ್ಪ ಕಲಾಲ ಅವರನ್ನು ಸನ್ಮಾನಿಸಲಾಯಿತು. ಪಿ.ಎಸ್. ಧರಣೆಪ್ಪನವರ, ಎಫ್.ಎ. ಶೇಖ್, ಗದಗ ಜಿಲ್ಲೆ ಅಧ್ಯಕ್ಷ ಬಿ.ಬಿ. ಹೂಗಾರ, ಗಾಯಕವಾಡ, ಡಾ| ಡಿ.ಜಿ. ಪಾಟೀಲ, ಪ್ರೊ| ಎಂ.ಪಿ. ಕುಂಬಾರ, ರಮಾ ನೀಲಪ್ಪಗೌಡರ, ಶಂಕರ ಮಲಕಣ್ಣವರ, ಫಕ್ಕೀರಪ್ಪ ಇನ್ನಿತರರಿದ್ದರು.
ಲಕ್ಷ್ಮೀ ಮಂಗಳವೇಡಿ ಪ್ರಾರ್ಥಿಸಿದರು. ಗಾಮನಗಟ್ಟಿ ಸ್ವಾಗತಿಸಿದರು. ಮಂಗಳೂರಮಠ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ