“ಕಮಲ-ದಳ ಸಖ್ಯ ಒದ್ದು ಬಂದವರ ಜತೆ ಮದುವೆಯಾದಂತಿದೆ”


Team Udayavani, Jan 31, 2021, 2:53 PM IST

Adagur H. Vishwanath talk about politcs

ಧಾರವಾಡ: ವಿಧಾನ ಪರಿಷತ್ತಿನಲ್ಲಿ ಬಿಜೆಪಿ-ಜೆಡಿಎಸ್‌ ಹೊಂದಾಣಿಕೆಯು ಒದ್ದು ಬಂದವರೊಂದಿಗೆ ಮದುವೆ ಆಗಲು ಹೊರಟಂತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಲೇವಡಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ -ಬಿಜೆಪಿ ಮಧ್ಯೆ ಮೈತ್ರಿ ಏರ್ಪಟ್ಟಿದ್ದು, ಸಭಾಪತಿ ಹುದ್ದೆಯನ್ನು ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರಿಗೆ ನೀಡಲು ಎರಡೂ ಪಕ್ಷಗಳು ಒಪ್ಪಿಗೆ ಸೂಚಿಸಿವೆ. ಆದರೆ ನಾವು ಯಾರನ್ನು ಒದ್ದು ಬಂದೆವೋ ಅವರ ಜತೆ ಬಿಜೆಪಿ ಮದುವೆ ಆಗುತ್ತಿದೆ. ಇದು ಶೇಕ್ಸ್‌ಪಿಯರ್‌ನ ಹೆಂಬ್ಲೆಟ್‌ ನಾಟಕದ ದೃಶ್ಯದಂತಿದ್ದು, ಜನಸ್ನೇಹಿಯಲ್ಲದ  ಇಂತಹ ಹೊಂದಾಣಿಕೆ ರಾಜಕಾರಣ ಬಗ್ಗೆ ಬಿಜೆಪಿ ಹೈಕಮಾಂಡ್‌ ತೀರ್ಮಾನಿಸಬೇಕು ಎಂದರು.

ದೆಹಲಿಯಲ್ಲಿ ಯುಪಿಎ, ಬೆಂಗಳೂರಲ್ಲಿ ಎನ್‌ಡಿಎ ಎನ್ನುವ ಜೆಡಿಎಸ್‌ ನಿಜ ಬಣ್ಣವೇ ಗೊತ್ತಾಗುತ್ತಿಲ್ಲ. ಅವರದ್ದು ಬರೀ ಹೊಂದಾಣಿಕೆ ರಾಜಕಾರಣ. ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಈಗ ದೆಹಲಿಯಲ್ಲಿ ಗುಲಾಂ ನಬಿ ಆಜಾದ್‌ ಜತೆ ಕಾಣಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿಯವರ ಜತೆ ಇದ್ದಾರೆ. ಮಾತಿನಲ್ಲಿ ರೈತ ಎನ್ನುವ ಈ ಮಣ್ಣಿನ ಮಕ್ಕಳು ಮೊನ್ನೆ ಏಕೆ ಬಾಯಿ ಬಿಡಲಿಲ್ಲ. ಇಂತಹ ಅವಕಾಶವಾದಿ ರಾಜಕೀಯ ಪಕ್ಷಗಳ ಜತೆ ಸೇರುವುದೂ ದೊಡ್ಡ ಅಪಾಯ ಎಂದರು.

ಮಂತ್ರಿಯಾಗಲು ಸಿಡಿದೆದ್ದಿದ್ದಲ್ಲ: ಚುನಾಯಿತರಾಗುವವರೆಗೆ ಸಚಿವ ಸ್ಥಾನವಿಲ್ಲ ಎಂಬ ಸುಪ್ರೀಂ ಕೋರ್ಟ್‌ ಆದೇಶ ಸ್ವಾಗತಿಸುತ್ತೇನೆ. ಆದರೆ, ವಿಶ್ವನಾಥರ ಕನಸು ಭಗ್ನ ಎಂದು ಬಿಂಬಿಸುತ್ತಿರುವಂತೆ ಏನೂ ಆಗಿಲ್ಲ. 17 ಜನ ಕಾಂಗ್ರೆಸ್‌, ಜೆಡಿಎಸ್‌ ಶಾಸಕರು ರಾಜೀನಾಮೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಇತಿಹಾಸ. ಅವರೆಲ್ಲ ಮಂತ್ರಿ ಆಗಲೇಬೇಕು ಎಂಬ ಹಠದಿಂದ ಕಾಂಗ್ರೆಸ್‌-ಜೆಡಿಎಸ್‌ ತೊರೆದವರಲ್ಲ. ಆಯಾ ಶಾಸಕಾಂಗ ಪಕ್ಷಗಳ ನಾಯಕರ ವಿರುದ್ಧ ಎದ್ದ ದಂಗೆಯೇ ಹೊರತು ಮಂತ್ರಿಯಾಗಲು ಅಲ್ಲ. ಮಂತ್ರಿ ಆಗಬೇಕೆಂದು ನಾನು ಎಲ್ಲಿಯೂ ಹೇಳಿಲ್ಲ. ಆದರೆ, ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದರು.

ಇದನ್ನೂ ಓದಿ:ಮಕ್ಕಳನ್ನು ಪುಸ್ತಕದ ಹುಳುಗಳಾಗಿಸಿ

ಕರ್ನಾಟಕದಲ್ಲಿ ರಾಕ್ಷಸ ರಾಜಕಾರಣ, ಕುಟುಂಬ ರಾಜಕಾರಣ ಕೊನೆಯಾಗಬೇಕೆಂದು ಅಂದು ರಾಜಭವನದ ಎದುರು ನಿಂತು ಹೇಳಿದ್ದೆವು. ಇತ್ತೀಚೆಗೆ ಪ್ರಧಾನಿ ಮೋದಿಯವರೂ ಈ ಬಗ್ಗೆ ಹೇಳಿಕೆ ನೀಡಿ, ಕುಟುಂಬ ರಾಜಕಾರಣ ದೇಶದ ಜನತಂತ್ರ ವ್ಯವಸ್ಥೆಯನ್ನು ಗೆದ್ದಿಲು ತಿಂದಂತೆ ತಿನ್ನುತ್ತಿದೆ. ಇದಕ್ಕೆ ಕೊನೆ ಹಾಡಬೇಕು ಎಂದಿದ್ದಾರೆ. ಯಡಿಯೂರಪ್ಪ ಪುತ್ರ, ಅನಂತಕುಮಾರ ಪತ್ನಿಗೆ ಟಿಕೆಟ್‌ ನಿರಾಕರಿಸಿರುವ ಉದಾಹರಣೆ ನಮ್ಮ ಮುಂದಿದೆ. ಮುಂದೆ ಸುರೇಶ ಅಂಗಡಿ ಕುಟುಂಬದವರಿಗೆ ಟಿಕೆಟ್‌ ನಿರಾಕರಿಸಲಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕು ಎಂದರು.

2014ರಲ್ಲಿ 18 ಜನರು, 2004ರಲ್ಲಿ 7 ಜನ ಶಾಸಕರು ಪಕ್ಷಾಂತರ ಮಾಡಿದರು. ಮಾತ್ರವಲ್ಲ ಮಾಜಿ ಸಿಎಂ ಸಿದ್ದರಾಮಯ್ಯ 6 ಸಲ, ರಮೇಶಕುಮಾರ 9 ಸಲ ಪಕ್ಷಾಂತರ ಮಾಡಿದ್ದಾರೆ. ಆದರೆ, ಇವರ ಪಕ್ಷಾಂತರವನ್ನು ಗಂಭೀರವಾಗಿ ಪರಿಗಣಿಸದೆ ಈಗ ನಮಗೆ ಪಕ್ಷಾಂತರಿಗಳು, ಅತೃಪ್ತರು ಎಂಬ ಪಟ್ಟ ಕಟ್ಟಲಾಗುತ್ತಿದೆ. ಇದು ಯಾವ ನ್ಯಾಯ? ನಮ್ಮದು ಪಕ್ಷಾಂತರ ಅಲ್ಲ. ಆಡಳಿತ ಪಕ್ಷಗಳ ಸಿದ್ಧಾಂತ, ಮುಖಂಡರ ನಡೆ ವಿರುದ್ಧ ನಡೆದ ದಂಗೆ ಎಂದು ಹೇಳಿದರು.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.