ಆಡಳಿತ ಪಕ್ಷದವರಿಂದಲೇ ಸಭಾತ್ಯಾಗ


Team Udayavani, Apr 4, 2017, 12:43 PM IST

hub7.jpg

ಹುಬ್ಬಳ್ಳಿ: ಬೀಗಮುದ್ರೆ ಹಾಕಿದ ಪಾಲಿಕೆ ಒಡೆತನದ ವಾಣಿಜ್ಯ ಮಳಿಗೆಗಳ ಬೀಗ ಒಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತರ ಹೇಳಿಕೆಯಿಂದ ಆಕ್ರೋಶಗೊಂಡ ಆಡಳಿತ ಪಕ್ಷದ ಸದಸ್ಯರೇ ಸಭಾತ್ಯಾಗ ಮಾಡಿದ ಅಪರೂಪದ ಘಟನೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಡೆಯಿತು. 

ಬಾಕಿ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಕಿದ ಬೀಗಮುದ್ರೆಯನ್ನು ಒಡೆದು ಕೆಲವರು ಅಂಗಡಿ ಪ್ರವೇಶ ಮಾಡಿದ್ದರೂ ಯಾವುದೇ ಕ್ರಮ ಆಗಿಲ್ಲ. ಆಯುಕ್ತರು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಪಾಲಿಕೆಯಲ್ಲಿ ಆಡಳಿತರೂಢ ಬಿಜೆಪಿ ಸದಸ್ಯರು ಸದನದಿಂದ ಹೊರ ನಡೆದರು.

ಬಿಜೆಪಿ ಸದಸ್ಯರನ್ನು ಬೆಂಬಲಿಸಿ ಜೆಡಿಎಸ್‌ ಸದಸ್ಯರೂ ಸಹ ಸಭಾತ್ಯಾಗ ಕೈಗೊಂಡರು. ನಡೆದಿದ್ದೇನು?: ಕಾಂಗ್ರೆಸ್‌ ಸದಸ್ಯರ  ಗಣೇಶ ಟಗರಗುಂಟಿ ಹಾಗೂಬಿಜೆಪಿಯ ಸುಧೀರ ಸರಾಫ್ ಅವರು  ಪಾದಚಾರಿ ಮಾರ್ಗ, ವಾಹನ ನಿಲುಗಡೆ ಜಾಗ ಅತಿಕ್ರಮಣ, ಕರ ವಸೂಲಾತಿ ಕುರಿತು ಗಮನ ಸೆಳೆಯುವ ಸೂಚನೆ ಮಂಡಿಸಿದರು. 

ಪಾಲಿಕೆ ಹೆಚ್ಚುವರಿ ಆಯುಕ್ತ ಅಜೀಜ್‌ ದೇಸಾಯಿ ಮಾತನಾಡಿ, ಆಸ್ತಿಕರ ವಿಭಾಗದಲ್ಲಿ ಕಳೆದ ಆರ್ಥಿಕ ವರ್ಷದಲ್ಲಿ 55.77 ಕೋಟಿ ರೂ. ಕರ ಸಂಗ್ರಹ ಗುರಿ ಇತ್ತು ಅದರಲ್ಲಿ 51.53 ಕೋಟಿ ರೂ. ವಸೂಲಿಯಾಗಿದೆ. ಇದರಲ್ಲಿ 10ಕೋಟಿ ರೂ. ದಂಡವೂ ಸೇರಿದೆ. ಜಾಹೀರಾತು ವಿಭಾಗದಲ್ಲಿ 3.3 ಕೋಟಿ ರೂ.ನಲ್ಲಿ 2.22 ಕೋಟಿ ರೂ. ಸಂಗ್ರಹವಾಗಿದ್ದು, ಪಾಲಿಕೆ ಒಡೆತನದ ಮಳಿಗೆಗಳ ಬಾಡಿಗೆಯಿಂದ 10.26 ಕೋಟಿ ರೂ.ನಲ್ಲಿ 7.65 ಕೋಟಿ ರೂ. ಸಂಗ್ರಹವಾಗಿದೆ ಎಂದರು.

ಕಿಮ್ಸ್‌ನಿಂದ 50 ಲಕ್ಷ ರೂ.ಬೇಡಿಕೆಯಲ್ಲಿ 23ಲಕ್ಷ ರೂ. ಪಾವತಿಸಿದ್ದು, ದಂಡ ಬೇರೆ ಇದೆ. ವಾಯವ್ಯ ಸಾರಿಗೆ ಸಂಸ್ಥೆಯಿಂದ 59ಲಕ್ಷ ರೂ. ಬಾಕಿ ಬರಬೇಕಿದೆ. ಎಪಿಎಂಸಿಯಿಂದ 1998-2008ರವರೆಗೆ ಸುಮಾರು 4ಕೋಟಿ ರೂ. ಬಾಕಿ ಹಾಗೂ ದಂಡ ಬರಬೇಕಿದೆ. ಎಸ್‌ಡಿಎಂಸಿ ಶಿಕ್ಷಣ ಸಂಸ್ಥೆಯಿಂದ 2.5ಕೋಟಿ ರೂ. ಬಾಕಿ ಬರಬೇಕಿದ್ದು, ಪ್ರಕರಣ ಕೋರ್ಟ್‌ನಲ್ಲಿದೆ ಎಂದರು.

ಕೆಎಲ್‌ಇ ಸಂಸ್ಥೆಯಿಂದ ಕರ ರೂಪದಲ್ಲಿ 60 ಲಕ್ಷ ರೂ. ಬಾಕಿ ಇದ್ದು, ಅದರಲ್ಲಿ 40ಲಕ್ಷ ರೂ. ಪಾವತಿ ಮಾಡಲಾಗಿದೆ. ಇದೇ ಸಂಸ್ಥೆಯ ಕಟ್ಟಡಗಳ  ಪರವಾನಗಿ ಇನ್ನಿತರ ವಿಚಾರದಲ್ಲಿ ಒಟ್ಟಾರೆ8.80ಕೋಟಿ ರೂ. ಬರಬೇಕಿದ್ದು, ಪ್ರಕರಣ  ಲೋಕ ಅದಾಲತ್‌ನಲ್ಲಿದೆ ಎಂದರು. 

ನಗರ ಯೋಜನೆ ವಿಭಾಗ ಅಧಿಕಾರಿ ಮಾತನಾಡಿ, ಕಟ್ಟಡ ಪರವಾನಗಿಯಿಂದ ಧಾರವಾಡದಲ್ಲಿ 3.44ಕೋಟಿ ರೂ., ಹುಬ್ಬಳ್ಳಿಯಲ್ಲಿ 10.06 ಕೋಟಿ ರೂ, ವಿನ್ಯಾಸ, ನವೀಕರಣ, ಪೂರ್ಣಗೊಂಡ ಪ್ರಮಾಣ ಪತ್ರ ಇತ್ಯಾದಿ ರೂಪದಲ್ಲಿ 3.29 ಕೋಟಿ ರೂ.ಸಂಗ್ರಹವಾಗಿದೆ. ಕಳೆದ ಆರ್ಥಿಕ ವರ್ಷಕ್ಕೆ 24 ಕೋಟಿ ರೂ. ಬೇಡಿಕೆಗೆ 16.80 ಕೋಟಿ ರೂ. ಸಂಗ್ರಹವಾಗಿದೆ ಎಂದರು.   

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.