ವಾಜಪೇಯಿ ರಾಜಕೀಯ ಆದರ್ಶ ಅಳವಡಿಸಿಕೊಳ್ಳಿ 


Team Udayavani, Sep 1, 2018, 5:07 PM IST

secptember-23.jpg

ಹುಬ್ಬಳ್ಳಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ರಾಷ್ಟ್ರವನ್ನು ವಿಶ್ವದ ಎತ್ತರಕ್ಕೆ ಕೊಂಡೊಯ್ಯಬೇಕೆನ್ನುವ ಗುರಿಯೊಂದಿಗೆ ರಾಜಕಾರಣ ಮಾಡಿದರೇ ಹೊರತು ಅಧಿಕಾರಕ್ಕಾಗಿ ಅಥವಾ ಇನ್ನಾರನ್ನೋ ತುಳಿಯಲಿಕ್ಕಾಗಿ ಅಲ್ಲ. ಹೀಗಾಗಿಯೇ ಅವರೊಬ್ಬ ರಾಜಋಷಿ ಹಾಗೂ ಮುತ್ಸದ್ಧಿ ಎಂದರೆ ಯಾರ ವಿರೋಧ ವ್ಯಕ್ತವಾಗಲಿಕ್ಕಿಲ್ಲ ಎಂದು ಆರೆಸ್ಸೆಸ್‌ನ ಹಿರಿಯ ಪ್ರಚಾರಕ ಸು. ರಾಮಣ್ಣ ಹೇಳಿದರು.

ಜೆ.ಸಿ. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ನಡೆದ ಅಜಾತಶತ್ರು ಅಟಲ್‌ಜೀ ಸಂಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವೈಚಾರಿಕ ಭಿನ್ನಾಭಿಪ್ರಾಯಗಳಿದ್ದರೂ ಉತ್ತಮ ಕಾರ್ಯವನ್ನು ಬಹಿರಂಗವಾಗಿ ಶ್ಲಾಘಿಸಿದ್ದು ವಾಜಪೇಯಿಯವರ ಮೇರು ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದರು.

ವಾಜಪೇಯಿ ಅವರು ಮಾಡಿದ ರಾಜಕಾರಣಕ್ಕೂ ಇಂದಿನ ರಾಜಕಾರಣಕ್ಕೂ ಸಾಕಷ್ಟು ವ್ಯತ್ಯಾಸವಿದೆ. ರಾಜಕೀಯ ಪದದ ಅರ್ಥ ವ್ಯಂಗ್ಯವಾಗಿ ಮಾರ್ಪಟ್ಟಿದೆ. ಅಧಿಕಾರಕ್ಕಾಗಿ ರಾಜಕಾರಣ ಎನ್ನುವಷ್ಟರ ಮಟ್ಟಿಗೆ ವ್ಯವಸ್ಥೆ ಬೆಳೆದು ಬಿಟ್ಟಿದೆ. ವಾಜಪೇಯಿ ಅವರಂತಹ ಮಹಾನ್‌ ನಾಯಕರ ರಾಜಕೀಯ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು, ರಾಜಧರ್ಮ ಅನುಸರಿಸಬೇಕು ಎಂದರು. ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ವಾಜಪೇಯಿ ಅವರ ಸಮಯಪ್ರಜ್ಞೆ, ತೆಗೆದುಕೊಳ್ಳುತ್ತಿದ್ದ ನಿರ್ಧಾರಗಳು ನನ್ನನ್ನು ಸಾಕಷ್ಟು ಆಕರ್ಷಿಸಿವೆ. ಅವರು ಒಂದೇ ಒಂದು ಆರೋಪವಿರದ ಸಜ್ಜನ ರಾಜಕಾರಣಿ ಎಂದರು.

ಶಾಸಕ ಜಗದೀಶ ಶೆಟ್ಟರ ಮಾತನಾಡಿ, ರಾಜ್ಯದಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿ ಸರಕಾರ ನಿತ್ಯ ಗೊಂದಲಗಳಿಂದ ಕೂಡಿದೆ. ಆದರೆ ವಾಜಪೇಯಿ ಅವರು ವಿಭಿನ್ನ ವೈಚಾರಿಕ ಭಿನ್ನಾಭಿಪ್ರಾಯಗಳನ್ನು ಹೊಂದಿದ 23 ಪಕ್ಷಗಳನ್ನು ಒಗ್ಗೂಡಿಸಿಕೊಂಡು ಯಶಸ್ವಿಯಾಗಿ ಆಡಳಿತ ನಡೆಸಿದರು. ಇತರರ ಕಾರ್ಯ ಸಾಧನೆಯನ್ನು ಮುಕ್ತಕಂಠದಿಂದ ಸ್ವಾಗತಿಸುತ್ತಿದ್ದರು ಎಂದರು. ಶಾಸಕರಾದ ಅರವಿಂದ ಬೆಲ್ಲದ, ಸಿ.ಎಂ. ನಿಂಬಣ್ಣವರ, ಪ್ರದೀಪ ಶೆಟ್ಟರ, ಪದ್ಮಶ್ರೀ ಪುರಸ್ಕೃತ ಡಾ| ಎಂ.ಎಂ. ಜೋಶಿ, ಜಿ.ಎಂ. ಚಿಕ್ಕಮಠ ಮಾತನಾಡಿದರು. ಶಾಸಕ ಅಮೃತ ದೇಸಾಯಿ, ಮಾಜಿ ಶಾಸಕರಾದ ಅಶೋಕ ಕಾಟವೆ, ವೀರಭದ್ರಪ್ಪ ಹಾಲಹರವಿ, ಮಹಾಪೌರ ಸುಧೀರ ಸರಾಫ, ಉಪ ಮಹಾಪೌರ ಮೇನಕಾ ಹುರಳಿ, ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ, ಶಾಂತಣ್ಣ ಕಡಿವಾಳ, ಬಾಲಚಂದ್ರ ನಾಕೋಡ ಇದ್ದರು.

ವಾಜಪೇಯಿ ದೇಶ ಕಂಡ ಮಹಾನ್‌ ನಾಯಕರಲ್ಲಿ ಒಬ್ಬರು. ಎಲ್ಲಾ ಪಕ್ಷದವರನ್ನು ಗೌರವದಿಂದ ಕಾಣುವ ವ್ಯಕ್ತಿತ್ವವೇ ಅವರನ್ನು ಇಷ್ಟೊಂದು ಎತ್ತರಕ್ಕೆ ಬೆಳೆಸಿದೆ. ಇಂದಿರಾ ಗಾಂಧಿ ಅವರನ್ನು ದುರ್ಗಾ ದೇವಿಗೆ ಹೋಲಿಸಿದ ಗೌರವ ಗುಣ ಎಲ್ಲರಲ್ಲೂ ಕಾಣಲು ಸಾಧ್ಯವಿಲ್ಲ. ಇಂದು ಸಣ್ಣದರಲ್ಲೂ ಕೆಸರೆರಚಾಟ ನಡೆಯುತ್ತಿದೆ. ಇಂದಿರಾ ಗಾಂಧಿ ಹಾಗೂ ವಾಜಪೇಯಿ ಅವರ ಭಾಷಣ ಕೇಳಿ ಬೆಳೆದವನು ನಾನು.
 ಸಿ.ಎಸ್‌. ಶಿವಳ್ಳಿ, ಕಾಂಗ್ರೆಸ್‌ ಶಾಸಕ

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.