ಮತ್ತೆ ಕಲಘಟಗಿಯಿಂದಲೇ ಸ್ಪರ್ಧಿಸುವೆ: ಸಂತೋಷ ಲಾಡ್
Team Udayavani, Jul 11, 2021, 6:55 PM IST
ಬಳ್ಳಾರಿ: ಕಳೆದ ಬಾರಿ ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಇದೀಗ ಕಲಘಟಗಿಯಲ್ಲೇ ಉಳಿಯುವ ಮೂಲಕ ಕ್ಷೇತ್ರದ ಜನರಿಗೆ ಹತ್ತಿರವಾಗುತ್ತೇನೆ. ಮತ್ತೆ ಕಲಘಟಗಿಯಿಂದಲೇ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿ ಯಲ್ಲಿ ಕಲಘಟಗಿ ಕ್ಷೇತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಾಗಿಲ್ಲ. ಆಗ ಸಚಿವ ಸ್ಥಾನ ನೀಡಿ ಬಳ್ಳಾರಿ ಜಿಲ್ಲೆ ಉಸ್ತುವಾರಿ ವಹಿಸಿಕೊಂಡಿದ್ದರಿಂದ ಕಲಘಟಗಿ ಕ್ಷೇತ್ರದ ಬಗ್ಗೆ ಹೆಚ್ಚು ಗಮನ ಹರಿಸಲಾಗಿಲ್ಲ. 2013ರಲ್ಲಿ ನನ್ನ ಸೋಲಿಗೂ ಅದೇ ಕಾರಣವಿರಬಹುದು. ಇದೀಗ ಹಿಂದೆ ನಡೆದಿರುವ ತಪ್ಪುಗಳನ್ನು ಅರಿತು ಸರಿಪಡಿಸಿಕೊಂಡು ಕ್ಷೇತ್ರದಲ್ಲೇ ಉಳಿದುಕೊಳ್ಳುವ ಮೂಲಕ ಅಲ್ಲಿನ ಜನರಿಗೆ ಹತ್ತಿರವಾಗುತ್ತೇನೆ.
ರಾಜಕೀಯವಾಗಿ ನಾನು ಕಲಘಟಗಿ ಕ್ಷೇತ್ರದತ್ತ ಆಸಕ್ತಿ ವಹಿಸಿದ್ದು ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕಲಘಟಗಿ ಬ್ಲಾಕ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ಸ್ಪಲ್ಪ ಗೊಂದಲವಿತ್ತಾದರೂ ಅದನ್ನು ಡಿ.ಕೆ.ಶಿವಕುಮಾರ್ ಅವರೇ ಸರಿಪಡಿಸಿದ್ದಾರೆ. ನನಗೆ ಪ್ರತಿಸ್ಪರ್ಧಿಯಾಗಿ ನಾಗರಾಜ್ ಛಬ್ಬಿ ಅವರನ್ನು ಬೆಳೆಸುತ್ತಾರೆ ಎಂಬುದು ಸರಿಯಲ್ಲ. ಪಕ್ಷ ಎಲ್ಲರಿಗೂ ಅವಕಾಶ ಕಲ್ಪಿಸುವ ಕೆಲಸ ಮಾಡಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್