![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ವಯೋಮಿತಿ ಅವೈಜ್ಞಾನಿಕ
Team Udayavani, Aug 20, 2018, 5:29 PM IST
![20-agust-21.jpg](https://www.udayavani.com/wp-content/uploads/2018/08/20/20-agust-21.jpg)
ಬ್ಯಾಡಗಿ: ಕೇಂದ್ರ ಸರ್ಕಾರ ಕ್ರೀಡಾ ವಸತಿ ನಿಲಯಗಳಲ್ಲಿ ತರಬೇತಿ ಪಡೆಯುವ ವಿದ್ಯಾರ್ಥಿಗಳ ಗರಿಷ್ಟ ವಯೋಮಿತಿ 25ರ ವರೆಗೆ ಹೆಚ್ಚಿಸಬೇಕು. ಅಂದಾಗ ಮಾತ್ರ ವಿದ್ಯಾರ್ಥಿ ಕ್ರೀಡೆಯಲ್ಲಿ ಪರಿಪೂರ್ಣತೆ ಕಂಡುಕೊಳ್ಳಲು ಸಾಧ್ಯ, ಇದೊಂದು ಅವೈಜ್ಞಾನಿಕ ಪದ್ಧತಿಯಾಗಿದ್ದು ಕೂಡಲೇ ಸಂಸದರು, ಕೇಂದ್ರದ ಕ್ರೀಡಾ ಸಚಿವರು ಈ ಕುರಿತು ಗಂಭೀರ ಚರ್ಚೆ ನಡೆಸುವುದು ಅಗತ್ಯ ಎಂದು ಜಿಲ್ಲಾ ದೈಹಿಕ ಶಿಕ್ಷಣ ಸಂಯೋಜಕ ಬಿಎಚ್ಎನ್ ರಾವಳ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಾವೇರಿ ಜಿಲ್ಲಾ ಅಮೆಚೂರ ಕಬಡ್ಡಿ ಸಂಸ್ಥೆ ಬ್ಯಾಡಗಿ ಹಾಗೂ ತೀರ್ಪುಗಾರರ ಮಂಡಳಿ ಆಶ್ರಯದಲ್ಲಿ ಏರ್ಪಡಿಸಿದ್ದ ಜ್ಯೂನಿಯರ್ ಬಾಲಕ-ಬಾಲಕಿಯರ ಆಯ್ಕೆ ಟ್ರಯಲ್ಸ್ಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಿನ ನಿಯಮದಂತೆ 15 ರಿಂದ 19 ವಯೋಮಾನದ ಕ್ರೀಡಾಟುಗಳಿಗೆ ಮಾತ್ರ ಕ್ಷತ್ರಿಯ ಹಾಸ್ಟೆಲ್ಗಳಲ್ಲಿ ತರಬೇತಿ ಪಡೆಯಲು ಅವಕಾಶವಿದೆ, 15 ನೇ ವಯಸ್ಸಿಗೆ ಕ್ರೀಡಾಪಟು ಇನ್ನೂ ಪ್ರವರ್ಧಮಾನಕ್ಕೆ ಬಂದಿರುವುದಿಲ್ಲ, ಇಂತಹ ಸಂದರ್ಭದಲ್ಲಿ ಆತನ ಶಿಕ್ಷಣ ಎಲ್ಲಿ ಅತಂತ್ರವಾಗುವುದೋ ಎಂಬ ಭಯದಲ್ಲಿ ಬಹುತೇಕ ಪಾಲಕರು ವಸತಿ ಶಾಲೆಗೆ ಸೇರಿಸಲು ಹಿಂಜರಿಯುತ್ತಾರೆ. ಹೀಗಾಗಿ ಇದೊಂದು ಅವೈಜ್ಞಾನಿಕ ಪದ್ಧತಿಯಾಗಿದ್ದು, ಕನಿಷ್ಟ 16 ರಿಂದ ಗರಿಷ್ಟ 25ಕ್ಕೆ ವಯೋಮಿತಿ ಹೆಚ್ಚಿಸುವುದು ಸೂಕ್ತ ಎಂದರು.
ಕಬಡ್ಡಿ ಸಂಸ್ಥೆಯ ಖಜಾಂಚಿ ಗಂಗಣ್ಣ ಎಲಿ ಮಾತನಾಡಿ, 15ನೇ ವಯಸ್ಸಿಗೆ ಕ್ರೀಡಾಪಟು ಇನ್ನೂ 9ನೇ ತರಗತಿ ಅಭ್ಯಾಸದಲ್ಲಿರುತ್ತಾನೆ. ಬಾಲ್ಯಾವಸ್ಥೆಯಿಂದ ಹೊರಬಂದಿರನು. ಇಂತಹ ವಯಸ್ಸಿನಲ್ಲಿ ಕ್ಷತ್ರಿಯ ಹಾಸ್ಟೆಲ್ಗೆ ಆಯ್ಕೆಯಾದ ಕ್ರೀಡಾಪಟುವಿನ ಶೈಕ್ಷಣಿಕ ಜೀವನದ ಪ್ರಮುಖ ಘಟ್ಟ 10ನೇ ತರಗತಿ ಫಲಿತಾಂಶದ ಮೇಲೆ ದುಷ್ಪರಿಣಾಮ ಬೀರುವುದು ನಿಶ್ಚಿತ ಎಂದರು.
ಎಲ್.ಎಸ್.ಹರಳಹಳ್ಳಿ ಮಾತನಾಡಿ, ಕ್ರೀಡಾಪಟುವಿನ ಕನಿಷ್ಟ ವಿದ್ಯಾರ್ಹತೆ ಎಸ್ಎಸ್ಎಲ್ಸಿ ನಿಗದಿಪಡಿಸಿದಲ್ಲಿ 16ನೇ ವಯಸ್ಸಿನ ಬಳಿಕ ಕ್ರೀಡಾಪಟು ತನ್ನದೇ ಆದ ಜವಾಬ್ದಾರಿಗಳನ್ನು ನಿಭಾಯಿಸಿಕೊಳ್ಳಲು ಸಾಧ್ಯ. ಅಲ್ಲದೇ ಕನಿಷ್ಟ 10 ವರ್ಷ ಆತ ಕ್ರೀಡಾ ವಸತಿ ಶಾಲೆಯಲ್ಲಿ ತರಬೇತಿ ಪಡೆದುಕೊಂಡಲ್ಲಿ ಒಬ್ಬ ಪರಿಪೂರ್ಣ ಕ್ರೀಡಾಪಟುವಾಗಿ ಸಾಧನೆ ಮಾಡಬಹುದು. ಅಲ್ಲದೇ ಸರ್ಕಾರ ಮತ್ತು ಪಾಲಕರ ಉದ್ದೇಶವೂ ಕೂಡ ಸಫಲತೆ ಕಾಣಲಿದೆ. ಈ ಎಲ್ಲ ಕಾರಣಗಳಿಂದ ಗರಿಷ್ಟ ವಯೋಮಾನವನ್ನು 25ಕ್ಕೆ ಹೆಚ್ಚಿಸುವುದು ಬಹಳಷ್ಟು ಅವಶ್ಯವಿದೆ ಎಂದರು.
ತೀರ್ಪುಗಾರರ ಮಂಡಳಿ ಅಧ್ಯಕ್ಷ ಸಿ.ಜಿ.ಚಕ್ರಸಾಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಷ್ಟ್ರೀಯ ಕ್ರೀಡಾ ನೀತಿ ಜಾರಿಗೆ ತರುವ ಉದ್ದೇಶದಿಂದ ಸಮರ್ಪಕ ವರದಿ ಅನುಷ್ಠಾನಗೊಳಿಸಲು ಮುಂದಾಗಿರುವ ಕ್ರಮ ಸ್ವಾಗತಾರ್ಹ, ಆದರೆ ರಾಷ್ಟ್ರೀಯ ಕ್ರೀಡಾಪಟುಗಳು ತರಬೇತುದಾರರು, ನಿರ್ಣಾಯಕರು, ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳ ಜೊತೆ ಸಭೆಗಳನ್ನು ನಡೆಸುವುದರಲ್ಲಿಯೇ ಕಾಲಹರಣ ಮಾಡುತ್ತಿರುವುದು ದುರದೃಷ್ಟಕರ, ಎಲ್ಲದರಲ್ಲಿಯೂ ಲೋಪ ದೋಷಗಳಿರುವುದು ಸಹಜ, ನಂತರ ಬದಲಾವಣೆ ಮಾಡಿಕೊಳ್ಳಲು ಸಾಧ್ಯತೆ ಇದ್ದು, ಮೊದಲು ರಾಷ್ಟ್ರೀಯ ಕ್ರೀಡಾ ನೀತಿ ಜಾರಿಗೆ ತರುವಂತೆ ಆಗ್ರಹಿಸಿದರು.
ಆಯ್ಕೆ ಪ್ರಕ್ರಿಯೆಯಲ್ಲಿ ಹಾವೇರಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಒಟ್ಟು 204 ಬಾಲಕರು ಹಾಗೂ 42 ಬಾಲಕಿಯರು ಪಾಲ್ಗೊಂಡಿದ್ದು ಅದರಲ್ಲಿ ಅತ್ಯುತ್ತಮ ತಲಾ 6 ಬಾಲಕ ಬಾಲಕಿಯರನ್ನು ಆಯ್ಕೆ ಮಾಡುವ ಮೂಲಕ ಬೆಂಗಳೂರಿಗೆ ಕಳುಹಿಸಿಕೊಡಲಾಯಿತು. ರಾಷ್ಟ್ರಮಟ್ಟದ ತೀರ್ಪುಗಾರರಾದ ಎಂ.ಆರ್. ಕೋಡಿಹಳ್ಳಿ, ಮಹ್ಮದಲಿ ಜಿನ್ನಾ ಹಲಗೇರಿ, ಎಚ್ .ಬಿ.ದಾಸರ, ಎ.ಎಸ್.ಅಕ್ಕೂರ, ಬಸವರಾಜಪ್ಪ, ಮಂಜುಳ ಭಜಂತ್ರಿ, ರಾಜೇಶ ಮಾಳಗಿ, ಮಾರುತಿ ಜನ್ನು, ನಿಂಗಪ್ಪ ಯಲಿಮಣ್ಣನವರ, ಜಮೀರ ರಿತ್ತಿ, ಹಿರಿಯ ಕ್ರೀಡಾಪಟುಗಳಾದ ಸುಭಾಸ್ ಮಾಳಗಿ, ಜುಲ್ಪೀಕರ್ ಮೆಡ್ಲೇರಿ, ಸುಭಾಸ್ ಗಂಗಮ್ಮನವರ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ರಾಷ್ಟ್ರಮಟ್ಟದ ತೀರ್ಪುಗಾರ ಎ.ಟಿ.ಪೀಠದ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.