ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ವಯೋಮಿತಿ ಅವೈಜ್ಞಾನಿಕ


Team Udayavani, Aug 20, 2018, 5:29 PM IST

20-agust-21.jpg

ಬ್ಯಾಡಗಿ: ಕೇಂದ್ರ ಸರ್ಕಾರ ಕ್ರೀಡಾ ವಸತಿ ನಿಲಯಗಳಲ್ಲಿ ತರಬೇತಿ ಪಡೆಯುವ ವಿದ್ಯಾರ್ಥಿಗಳ ಗರಿಷ್ಟ ವಯೋಮಿತಿ 25ರ ವರೆಗೆ ಹೆಚ್ಚಿಸಬೇಕು. ಅಂದಾಗ ಮಾತ್ರ ವಿದ್ಯಾರ್ಥಿ ಕ್ರೀಡೆಯಲ್ಲಿ ಪರಿಪೂರ್ಣತೆ ಕಂಡುಕೊಳ್ಳಲು ಸಾಧ್ಯ, ಇದೊಂದು ಅವೈಜ್ಞಾನಿಕ ಪದ್ಧತಿಯಾಗಿದ್ದು ಕೂಡಲೇ ಸಂಸದರು, ಕೇಂದ್ರದ ಕ್ರೀಡಾ ಸಚಿವರು ಈ ಕುರಿತು ಗಂಭೀರ ಚರ್ಚೆ ನಡೆಸುವುದು ಅಗತ್ಯ ಎಂದು ಜಿಲ್ಲಾ ದೈಹಿಕ ಶಿಕ್ಷಣ ಸಂಯೋಜಕ ಬಿಎಚ್‌ಎನ್‌ ರಾವಳ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಾವೇರಿ ಜಿಲ್ಲಾ ಅಮೆಚೂರ ಕಬಡ್ಡಿ ಸಂಸ್ಥೆ ಬ್ಯಾಡಗಿ ಹಾಗೂ ತೀರ್ಪುಗಾರರ ಮಂಡಳಿ ಆಶ್ರಯದಲ್ಲಿ ಏರ್ಪಡಿಸಿದ್ದ ಜ್ಯೂನಿಯರ್‌ ಬಾಲಕ-ಬಾಲಕಿಯರ ಆಯ್ಕೆ ಟ್ರಯಲ್ಸ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಿನ ನಿಯಮದಂತೆ 15 ರಿಂದ 19 ವಯೋಮಾನದ ಕ್ರೀಡಾಟುಗಳಿಗೆ ಮಾತ್ರ ಕ್ಷತ್ರಿಯ  ಹಾಸ್ಟೆಲ್‌ಗ‌ಳಲ್ಲಿ ತರಬೇತಿ ಪಡೆಯಲು ಅವಕಾಶವಿದೆ, 15 ನೇ ವಯಸ್ಸಿಗೆ ಕ್ರೀಡಾಪಟು ಇನ್ನೂ ಪ್ರವರ್ಧಮಾನಕ್ಕೆ ಬಂದಿರುವುದಿಲ್ಲ, ಇಂತಹ ಸಂದರ್ಭದಲ್ಲಿ ಆತನ ಶಿಕ್ಷಣ ಎಲ್ಲಿ ಅತಂತ್ರವಾಗುವುದೋ ಎಂಬ ಭಯದಲ್ಲಿ ಬಹುತೇಕ ಪಾಲಕರು ವಸತಿ ಶಾಲೆಗೆ ಸೇರಿಸಲು ಹಿಂಜರಿಯುತ್ತಾರೆ. ಹೀಗಾಗಿ ಇದೊಂದು ಅವೈಜ್ಞಾನಿಕ ಪದ್ಧತಿಯಾಗಿದ್ದು, ಕನಿಷ್ಟ 16 ರಿಂದ ಗರಿಷ್ಟ 25ಕ್ಕೆ ವಯೋಮಿತಿ ಹೆಚ್ಚಿಸುವುದು ಸೂಕ್ತ ಎಂದರು.

ಕಬಡ್ಡಿ ಸಂಸ್ಥೆಯ ಖಜಾಂಚಿ ಗಂಗಣ್ಣ ಎಲಿ ಮಾತನಾಡಿ, 15ನೇ ವಯಸ್ಸಿಗೆ ಕ್ರೀಡಾಪಟು ಇನ್ನೂ 9ನೇ ತರಗತಿ ಅಭ್ಯಾಸದಲ್ಲಿರುತ್ತಾನೆ. ಬಾಲ್ಯಾವಸ್ಥೆಯಿಂದ ಹೊರಬಂದಿರನು. ಇಂತಹ ವಯಸ್ಸಿನಲ್ಲಿ ಕ್ಷತ್ರಿಯ ಹಾಸ್ಟೆಲ್‌ಗೆ ಆಯ್ಕೆಯಾದ ಕ್ರೀಡಾಪಟುವಿನ ಶೈಕ್ಷಣಿಕ ಜೀವನದ ಪ್ರಮುಖ ಘಟ್ಟ 10ನೇ ತರಗತಿ ಫಲಿತಾಂಶದ ಮೇಲೆ ದುಷ್ಪರಿಣಾಮ ಬೀರುವುದು ನಿಶ್ಚಿತ ಎಂದರು.

ಎಲ್‌.ಎಸ್‌.ಹರಳಹಳ್ಳಿ ಮಾತನಾಡಿ, ಕ್ರೀಡಾಪಟುವಿನ ಕನಿಷ್ಟ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ನಿಗದಿಪಡಿಸಿದಲ್ಲಿ 16ನೇ ವಯಸ್ಸಿನ ಬಳಿಕ ಕ್ರೀಡಾಪಟು ತನ್ನದೇ ಆದ ಜವಾಬ್ದಾರಿಗಳನ್ನು ನಿಭಾಯಿಸಿಕೊಳ್ಳಲು ಸಾಧ್ಯ. ಅಲ್ಲದೇ ಕನಿಷ್ಟ 10 ವರ್ಷ ಆತ ಕ್ರೀಡಾ ವಸತಿ ಶಾಲೆಯಲ್ಲಿ ತರಬೇತಿ ಪಡೆದುಕೊಂಡಲ್ಲಿ ಒಬ್ಬ ಪರಿಪೂರ್ಣ ಕ್ರೀಡಾಪಟುವಾಗಿ ಸಾಧನೆ ಮಾಡಬಹುದು. ಅಲ್ಲದೇ ಸರ್ಕಾರ ಮತ್ತು ಪಾಲಕರ ಉದ್ದೇಶವೂ ಕೂಡ ಸಫಲತೆ ಕಾಣಲಿದೆ. ಈ ಎಲ್ಲ ಕಾರಣಗಳಿಂದ ಗರಿಷ್ಟ ವಯೋಮಾನವನ್ನು 25ಕ್ಕೆ ಹೆಚ್ಚಿಸುವುದು ಬಹಳಷ್ಟು ಅವಶ್ಯವಿದೆ ಎಂದರು.

ತೀರ್ಪುಗಾರರ ಮಂಡಳಿ ಅಧ್ಯಕ್ಷ ಸಿ.ಜಿ.ಚಕ್ರಸಾಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಷ್ಟ್ರೀಯ ಕ್ರೀಡಾ ನೀತಿ ಜಾರಿಗೆ ತರುವ ಉದ್ದೇಶದಿಂದ ಸಮರ್ಪಕ ವರದಿ ಅನುಷ್ಠಾನಗೊಳಿಸಲು ಮುಂದಾಗಿರುವ ಕ್ರಮ ಸ್ವಾಗತಾರ್ಹ, ಆದರೆ ರಾಷ್ಟ್ರೀಯ ಕ್ರೀಡಾಪಟುಗಳು ತರಬೇತುದಾರರು, ನಿರ್ಣಾಯಕರು, ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳ ಜೊತೆ ಸಭೆಗಳನ್ನು ನಡೆಸುವುದರಲ್ಲಿಯೇ ಕಾಲಹರಣ ಮಾಡುತ್ತಿರುವುದು ದುರದೃಷ್ಟಕರ, ಎಲ್ಲದರಲ್ಲಿಯೂ ಲೋಪ ದೋಷಗಳಿರುವುದು ಸಹಜ, ನಂತರ ಬದಲಾವಣೆ ಮಾಡಿಕೊಳ್ಳಲು ಸಾಧ್ಯತೆ ಇದ್ದು, ಮೊದಲು ರಾಷ್ಟ್ರೀಯ ಕ್ರೀಡಾ ನೀತಿ ಜಾರಿಗೆ ತರುವಂತೆ ಆಗ್ರಹಿಸಿದರು.

ಆಯ್ಕೆ ಪ್ರಕ್ರಿಯೆಯಲ್ಲಿ ಹಾವೇರಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಒಟ್ಟು 204 ಬಾಲಕರು ಹಾಗೂ 42 ಬಾಲಕಿಯರು ಪಾಲ್ಗೊಂಡಿದ್ದು ಅದರಲ್ಲಿ ಅತ್ಯುತ್ತಮ ತಲಾ 6 ಬಾಲಕ ಬಾಲಕಿಯರನ್ನು ಆಯ್ಕೆ ಮಾಡುವ ಮೂಲಕ ಬೆಂಗಳೂರಿಗೆ ಕಳುಹಿಸಿಕೊಡಲಾಯಿತು. ರಾಷ್ಟ್ರಮಟ್ಟದ ತೀರ್ಪುಗಾರರಾದ ಎಂ.ಆರ್‌. ಕೋಡಿಹಳ್ಳಿ, ಮಹ್ಮದಲಿ ಜಿನ್ನಾ ಹಲಗೇರಿ, ಎಚ್‌ .ಬಿ.ದಾಸರ, ಎ.ಎಸ್‌.ಅಕ್ಕೂರ, ಬಸವರಾಜಪ್ಪ, ಮಂಜುಳ ಭಜಂತ್ರಿ, ರಾಜೇಶ ಮಾಳಗಿ, ಮಾರುತಿ ಜನ್ನು, ನಿಂಗಪ್ಪ ಯಲಿಮಣ್ಣನವರ, ಜಮೀರ ರಿತ್ತಿ, ಹಿರಿಯ ಕ್ರೀಡಾಪಟುಗಳಾದ ಸುಭಾಸ್‌ ಮಾಳಗಿ, ಜುಲ್ಪೀಕರ್‌ ಮೆಡ್ಲೇರಿ, ಸುಭಾಸ್‌ ಗಂಗಮ್ಮನವರ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ರಾಷ್ಟ್ರಮಟ್ಟದ ತೀರ್ಪುಗಾರ ಎ.ಟಿ.ಪೀಠದ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.