ಕೊರೊನಾ ಕೊಡವಿ ಮೇಲೆದ್ದ ಅನ್ನದಾತರು


Team Udayavani, Jun 7, 2021, 6:13 PM IST

6hub-dwd1

ವರದಿ: ಬಸವರಾಜ ಹೊಂಗಲ್‌

ಧಾರವಾಡ: ತಿಂಗಳ ಹಿಂದೆ ಮನೆಗೊಬ್ಬರಿಗೆ ಕೊರೊನಾ ಸೋಂಕು, ಓಣಿಯಲ್ಲಿ ದಿನಕ್ಕೊಂದು ಹೆಣ, ಎಲ್ಲೆಡೆ ಆತಂಕ, ನಿರ್ಲಕ್ಷéಕ್ಕೆ ತಕ್ಕ ಶಾಸ್ತಿ ಅನುಭವಿಸಿ ಕಡೆಗೂ ಜಿಲ್ಲೆಯ ಅನ್ನದಾತರು ಮೈ ಕೊಡವಿ ಎದ್ದು ಇದೀಗ ಖುಷಿಯಿಂದ ಬಿತ್ತನೆ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಕೊರೊನಾ ಕಾಟಕ್ಕೆ ಬೇಜಾರಾದರೂ ಮುಂಗಾರು ಪೂರ್ವ ಮಳೆಗಳು ಕೈ ಹಿಡಿದಿದ್ದರಿಂದ ಬಿತ್ತನೆ ಜೋರು ಮಾಡಿದ್ದಾರೆ.

ಹೌದು. ಮಾನ್ಸೂನ್‌ ಮಳೆ ಜಿಲ್ಲೆಯಲ್ಲಿ ತನ್ನ ತುಂತುರು ಕಲರವ ಆರಂಭಿಸುವುದಕ್ಕೂ ಮುನ್ನವೇ ಜಿಲ್ಲೆಯ 2 ಲಕ್ಷ ಹೆಕ್ಟೇರ್‌ ಭೂಮಿ ಮುಂಗಾರು ಪೂರ್ವ ಮಳೆಯ ಕೃಪೆಯಿಂದ ಬಿತ್ತನೆಗೆ ಹದವಾಗಿತ್ತು. ಮೇ ತಿಂಗಳಾಂತ್ಯಕ್ಕೆ ಜಿಲ್ಲೆಯಲ್ಲಿ ಸುರಿದ ಮಳೆಗಳಿಗೆ ಭರಪೂರ ಹದ ಸಿಕ್ಕು ಹಂಗಾಮು ಗರಿಗೆದರಿ ಇದೀಗಲೇ ಅರೆಮಲೆನಾಡು ಸಂಪೂರ್ಣ ಬಿತ್ತನೆ ಕಾರ್ಯ ಮುಗಿಸಿ ಹೊರ ಬರುತ್ತಿದೆ. ಆದರೆ ಬೆಳವಲದ ಬಯಲು ಸೀಮೆಯ ತಾಲೂಕುಗಳಲ್ಲಿ ಮಾತ್ರ ಭೂಮಿ ಹದವಾಗಿ ತಿಂಗಳಾದರೂ ಬಿತ್ತನೆಗೆ ಮಳೆ ಕೊರತೆ ಎದುರಾಗಿತ್ತು. ಆದರೆ ಕಳೆದ ನಾಲ್ಕು ದಿನಗಳಿಂದ ಅಲ್ಲಲ್ಲಿ ಸುರಿಯುತ್ತಿರುವ ಭರಪೂರ ಮಳೆ ಮತ್ತು ಪೂರಕ ವಾತಾವರಣವಿದ್ದು ರೈತರು ಬಿತ್ತನೆ ಕಾರ್ಯ ಮುಗಿಸುತ್ತಿದ್ದಾರೆ.

ಕೊರೊನಾ ಕೊಡವಿ ಎದ್ದ ರೈತ: ಸರಿಯಾಗಿ ಒಂದು ತಿಂಗಳ ಹಿಂದೆ ಹಳ್ಳಿಗಳಲ್ಲಿ ಕೊರೊನಾ 2ನೇ ಅಲೆ ಸೃಷ್ಟಿಸಿದ ಆತಂಕ ಮತ್ತು ಕಠಿಣ ಸ್ಥಿತಿ ರೈತ ಸಂಕುಲವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿತ್ತು. ಪ್ರತಿದಿನ ಸಣ್ಣ ಹಳ್ಳಿಗಳಲ್ಲಿ ಕೂಡ ಇಬ್ಬರು, ಮೂವರು ಮರಣ ಹೊಂದುವ ದೃಶ್ಯ ಸಾಮಾನ್ಯವಾಗಿ ಹೋಗಿತ್ತು. ಆದರೆ ಇದೀಗ ಹಳ್ಳಿಗಳಲ್ಲಿ ಕೊರೊನಾ ಕೊಂಚ ಕಡಿಮೆಯಾಗಿದ್ದು, ರೈತರು ಗಟ್ಟಿಯಾಗಿ ಮೇಲೆದ್ದು ಹೊಲದ ದಾರಿ ಹಿಡಿದಿದ್ದಾರೆ. ಅದಲ್ಲದೇ ಹಳ್ಳಿಗಳಲ್ಲಿ 58ಕ್ಕೂ ಅಧಿಕ ಕೋವಿಡ್‌ ಚಿಕಿತ್ಸಾ ಕೇಂದ್ರಗಳು ತಲೆ ಎತ್ತಿದ್ದರಿಂದ ಜನರಿಗೆ ಸ್ಥಳೀಯವಾಗಿ ಉತ್ತಮ ಚಿಕಿತ್ಸೆ ಲಭಿಸುತ್ತಿದ್ದು, ಅನ್ನದಾತರು ಸ್ವಯಂಸ್ಫೂರ್ತಿಯಿಂದ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೈನ್‌ ಕೇಂದ್ರಗಳಲ್ಲಿ ಉಳಿದು ಗುಣಮುಖರಾಗುತ್ತಿದ್ದಾರೆ.

ಸರಿಯಾಗಿ ಬಿತ್ತುವ ಸಮಯ ಆರಂಭಗೊಂಡಿದ್ದು, ಮುಂಗಾರು ಹಂಗಾಮು ಹದಭರಿತವಾಗಿ ಸಾಗಿದ್ದು, ಇನ್ನೆರಡು ದಿನಗಳಲ್ಲಿ ಹೆಚ್ಚು ಕಡಿಮೆ ಬಿತ್ತನೆ ಕಾರ್ಯ ಮುಗಿಯಲಿದೆ. ಬಿತ್ತನೆ ಸಂದರ್ಭದಲ್ಲಿ ಗೊಬ್ಬರ-ಬೀಜ ಪಡೆಯಲು ಕೋವಿಡ್‌ ಲಾಕ್‌ಡೌನ್‌ ನಿಯಮಗಳು ರೈತರನ್ನು ತೀವ್ರ ಸಂಕಷ್ಟಕ್ಕೆ ಗುರಿ ಮಾಡಿದ್ದವು. ಆಧಾರ್‌ ಕಾರ್ಡ್‌ ಮತ್ತು ಗ್ರಾಪಂಗಳಿಂದ ಪರವಾನಗಿ ಪತ್ರ ತರುವುದನ್ನು ಕಡ್ಡಾಯ ಮಾಡಿದ್ದಕ್ಕೆ ರೈತರು ಕಿರಿಕಿರಿ ಅನುಭವಿಸಿದರು. ಆದರೆ ಕೋವಿಡ್‌ ನಿಯಂತ್ರಣಕ್ಕೆ ಇದು ಅನಿವಾರ್ಯ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿತು.

ಯಾವ ಬೆಳೆ ಎಷ್ಟು?: ಮುಂಗಾರು ಹಂಗಾಮಿನಲ್ಲಿ ಅರೆ ಮಲೆನಾಡು ಮತ್ತು ಬಯಲು ಸೀಮೆಯ ಬೆಳವಲದ ಹಳ್ಳಿಗಳಲ್ಲಿ 2021ನೇ ಸಾಲಿನ ಮುಂಗಾರು ಬಿತ್ತನೆ ಕಾರ್ಯ ತೀವ್ರವಾಗಿದ್ದು ಸೋಯಾ ಅವರೆ 50 ಸಾವಿರ ಹೆಕ್ಟೇರ್‌ ಬಿತ್ತನೆಯಾಗುವ ನಿರೀಕ್ಷೆ ಇದೆ. ಈ ಪೈಕಿ ಅರ್ಧದಷ್ಟು ಬಿತ್ತನೆ ಕಾರ್ಯ ಕೂಡ ಮುಗಿದಿದೆ. ಸೋಯಾ ಅವರೆ ಕಳೆದ ವರ್ಷಕ್ಕಿಂತ ಹೆಚ್ಚು ಬಿತ್ತನೆಯಾಗುತ್ತಿದ್ದು, ಈ ವರ್ಷ 30 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹತ್ತಿ -50 ಸಾವಿರ್‌ ಹೆಕ್ಟೇರ್‌ ಬಿತ್ತನೆಯಾಗುವ ನಿರೀಕ್ಷೆ ಇದೆ. ಮೆಕ್ಕೆಜೋಳಕ್ಕೂ ಪ್ರಾಧಾನ್ಯತೆ ಸಿಕ್ಕಿದ್ದು, ರೈತರು ಬೀಜ ಸಂಗ್ರಹ ಮಾಡಿಕೊಂಡಿದ್ದಾರೆ.

ಈ ಎರಡೂ ಬೆಳೆಗಳ ಬಿತ್ತನೆಗೆ ಇನ್ನು ತಿಂಗಳ ಸಮಯವಿದೆ. ಹೆಸರು, ಶೇಂಗಾ, ಉದ್ದು, ಮೆಕ್ಕೆಜೋಳ ಸೇರಿ 50 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಆರಂಭಗೊಂಡಿದೆ. ಈ ಪೈಕಿ ಕಳೆದ ನಾಲ್ಕು ದಿನಗಳಲ್ಲಿ ಶೇ.60 ಬಿತ್ತನೆ ಕಾರ್ಯ ಕೂಡ ಮುಗಿದಿದೆ. ಜಿಲ್ಲೆಯಲ್ಲಿ ಎಂದಿನಂತೆ ಕಬ್ಬು ತನ್ನ ಅಸ್ತಿತ್ವವನ್ನು ವರ್ಷದಿಂದ ವರ್ಷಕ್ಕೆ ಅಧಿಕಗೊಳಿಸುತ್ತಲೇ ಸಾಗಿದೆ.

ಭತ್ತ 12 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿ ಈಗಾಗಲೇ ನೆಲ ಬಿಟ್ಟು ಮೇಲೆದ್ದು ನಿಂತಿದೆ. ಧಾರವಾಡ, ಕಲಘಟಗಿ, ಅಳ್ನಾವರ ತಾಲೂಕು ಈ ಬಾರಿ ಕಬ್ಬು ಅಧಿಕವಾಗಿದ್ದು, 70 ರಿಂದ 80 ಸಾವಿರ ಹೆಕ್ಟೇರ್‌ ಪ್ರದೇಶವನ್ನು ವ್ಯಾಪಿಸಿದೆ. ಹತ್ತಿಗೆ ಒತ್ತು ನೀಡುತ್ತಿದ್ದ ಅಣ್ಣಿಗೇರಿಯಲ್ಲಿ ಈ ಬಾರಿ ಮುಂಗಾರು ಬೇಗ ಚುರುಕಾಗಿ ಮಳೆ ಸುರಿದಿದ್ದು, ಹೆಸರು ಬೀಜ ಬಿತ್ತನೆ ಟ್ರೆಂಡ್‌ ಆರಂಭಗೊಂಡಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.