Agriculture: ಸಾವಯವ ಕೃಷಿ ಮಾಡಿ ಕಳಸಪ್ರಾಯವಾದ ಸಹೋದರರು

ಬರದ ಕರಿನೆರಳಲ್ಲೂ ರೈತರ ಮೊಗದಲ್ಲಿ ಹೊನಲು, ಮಿಶ್ರ ಬೆಳೆಯೊಂದಿಗೆ ಹೊಲದಲ್ಲಿ ಡ್ರ್ಯಾಗನ್‌ ಸದ್ದು

Team Udayavani, Nov 4, 2023, 8:58 AM IST

3-agri

ಕುಂದಗೋಳ: ಬರಗಾಲದಲ್ಲಿ ಕೃಷಿ ಬದುಕೇ ಭಾರವಾಗಿದ್ದು, ಸಾವಯವ ಕೃಷಿ ಅಳವಡಿಸಿಕೊಂಡು ಮಿಶ್ರ ಬೆಳೆಯೊಂದಿಗೆ ಡ್ರ್ಯಾಗನ್‌ ಹಣ್ಣು ಬೆಳೆದು ಸಿದ್ದನಗೌಡ್ರ ಸಹೋದರರು ಮಾದರಿಯಾಗಿದ್ದಾರೆ.

ತಾಲೂಕಿನ ಕಡೇ ಗ್ರಾಮವಾದ ಗುರುಗೋವಿಂದ ಭಟ್ಟರ ಜನ್ಮಭೂಮಿ ಕಳಸ ಗ್ರಾಮದ ಜಗದೀಶಗೌಡ ಸಿದ್ದನಗೌಡ್ರ ಹಾಗೂ ಮಂಜುನಾಥಗೌಡ ಸಿದ್ದನಗೌಡ್ರ ಕೇವಲ 2 ಎಕರೆ ಜಮೀನಿನಲ್ಲಿ ಕಳೆದ 10 ವರ್ಷಗಳಿಂದ ರಾಸಾಯನಿಕ ಮುಕ್ತ ಕೃಷಿ ಮಾಡುತ್ತ ಬಂದಿದ್ದಾರೆ. ಸ್ವತಃ ಜೀವಾಮೃತ ತಯಾರಿಸಿಕೊಂಡು, ಬೀಜೋಪಚಾರ ಮಾಡಿಕೊಂಡು ಉತ್ತಮ ಬೆಳೆ ತೆಗೆಯುತ್ತಿದ್ದಾರೆ.

ಮಂಜುನಾಥ ಅವರು ವಿದ್ಯೆ ತಲೆಗೆ ಹತ್ತಲಿಲ್ಲವೆಂದು ತಂದೆಯ ಜೊತೆಗೆ ಕೃಷಿಯಲ್ಲಿಯೇ ತೊಡಗಿಕೊಂಡರು. ಪ್ರತಿವರ್ಷ ಒಂದಿಲ್ಲೊಂದು ಕಾರಣಕ್ಕೆ ಹಾಕಿದ ಬೆಳೆ ಕೈಗೆ ಬಾರದೇ ಮಾಡಿದ ಸಾಲ ತೀರಿಸಲಾಗದೆ ಕೃಷಿ ಬದುಕೇ ಬಿಟ್ಟು ಹೋಗಬೇಕೆಂಬ ಚಿಂತೆಯಲ್ಲಿದ್ದರು. ಆಗ ಅವರಿಗೆ ಹೊಳೆದಿದ್ದು ಸಾವಯವ ಕೃಷಿ. ಅದರತ್ತ ಮುಖ ಮಾಡಿದ ಬಳಿಕ ಕಳೆದ 10 ವರ್ಷದಲ್ಲಿ ಹಂತ ಹಂತವಾಗಿ ಉತ್ತಮ ಬೆಳೆ ಬರುತ್ತಿರುವುದರಿಂದ ಈಗ ಹೊಸ ಮಾದರಿಯ ಹಣ್ಣು ಬೆಳೆಯಲು ಸಹ ಮುಂದಾಗಿ ಸೈ ಎನಿಸಿಕೊಂಡಿದ್ದಾರೆ.

ಸಾವಯವ ಕೃಷಿ ರುಚಿ: ಈ ಭಾಗದಲ್ಲಿ ಬಾಳೆ, ಪೇರಲ,ಚಿಕ್ಕು, ಮಾವಿನಹಣ್ಣು ಬೆಳೆಯುವುದು ಸಾಮಾನ್ಯ. ಆದರೆ ಇವರು ವಿಶೇಷ ರೀತಿಯಲ್ಲಿ ಆರೋಗ್ಯಕ್ಕೂ ಉತ್ತಮ ಬೇಡಿಕೆಯಲ್ಲಿರುವ ಡ್ರಾÂಗನ್‌ ಹಣ್ಣು ಬೆಳೆಯಲು ಮುಂದಾದರು. ಆರಂಭಿಕ ಹಂತದಲ್ಲಿ 15 ಗುಂಟೆಯಲ್ಲಿ ಡ್ರ್ಯಾಗನ್‌ ಹಣ್ಣುಗಳನ್ನು ಬೆಳೆಯಲು ಕಳೆದ ಡಿಸೆಂಬರ್‌ನಲ್ಲಿ ಆರಂಭಿಸಿದ್ದು, ಈಗಾಗಲೇ ಎರಡು ಬಾರಿ ಹಣ್ಣು ಕಟಾವು ಮಾಡಿದ್ದಾರೆ. ಮೊದಲಿಗೆ ಬಂದ ಹಣ್ಣನ್ನು ಗ್ರಾಮದ ಎಲ್ಲ ದೇವರ ಗುಡಿಗಳಿಗೆ ಅರ್ಪಿಸಿದರೆ, ಎರಡನೆ ಹಂತದ ಬೆಳೆಯನ್ನು ಸಹ ಮಾರಾಟ ಮಾಡದೆ ಗ್ರಾಮದ ಮನೆಗಳಿಗೆ ಉಚಿತವಾಗಿ ವಿತರಿಸಿ ಸಾವಯವ ಕೃಷಿಯ ಹಣ್ಣಿನ ರುಚಿ ಹಂಚಿದ್ದಾರೆ.

ಕೈ ಹಿಡಿದ ಮಿಶ್ರಬೆಳೆ: 15 ಗುಂಟೆಯಲ್ಲಿ ಈ ಬೆಳೆ ಬೆಳೆಯಲು 1.50 ಲಕ್ಷ ರೂ. ಖರ್ಚು ಮಾಡಿದ್ದು, ಇದೀಗ ಒಂದೊಂದು ಗಿಡವು ಉತ್ತಮ ರೀತಿಯಲ್ಲಿ ಹಣ್ಣು ನೀಡುತ್ತಿದೆ ಎಂದು ಮಂಜುನಾಥ ಹರ್ಷ ವ್ಯಕ್ತಪಡಿಸಿದರು. ಜಗದೀಶಗೌಡ್ರ ಮಾತನಾಡಿ, ಎರಡು ಎಕರೆಯಲ್ಲಿ 20 ಗುಂಟೆಯಲ್ಲಿ ಮಲ್ಲಿಗೆ ಹಾಗೂ ಗಲಾಟೆ ಹೂ ಬೆಳೆಯುತ್ತಿದ್ದು, 4 ಗುಂಟೆಯಲ್ಲಿ ಸವತೆಕಾಯಿ, ಬೆಂಡೆಕಾಯಿ ಹಾಗೂ 5 ಗುಂಟೆಯಲ್ಲಿ ಮೆಣಸಿನಕಾಯಿ, ಉಳಿದ ಜಮೀನಿನಲ್ಲಿ ಶೇಂಗಾ ಬೆಳೆಯುತ್ತಿದ್ದೇವೆ. ಮಿಶ್ರ ಬೆಳೆ ಬೆಳೆಯುವುದರಿಂದ ವಾರದ ಖರ್ಚಿಗೆ ಅನುಕೂಲವಾಗುತ್ತಿದೆ ಎಂದರು.

ಅನೇಕ ರೈತರು ರಾಸಾಯನಿಕ ಕೃಷಿ ಮಾಡುತ್ತಿದ್ದಾರೆ. ಅತಿವೃಷ್ಟಿ-ಅನಾವೃಷ್ಟಿಯಿಂದಾಗಿ ಸಾಲಸೋಲ ಹೆಚ್ಚಿದೆ. ದುಬಾರಿ ಬೀಜ-ಗೊಬ್ಬರಕ್ಕೆ ಹಣ ಸುರಿದರೂ ಬೆಳೆ ಕೈಗೆ ದೊರೆಯದೆ ಕೃಷಿ ಬದುಕು ಭಾರವಾಗಿದೆ. ಆದರೆ ಕಳಸ ಗ್ರಾಮದ ಈ ಸಹೋದರರು ಎರಡು ಎಕರೆ ಭೂಮಿಯಲ್ಲಿ ಸಾವಯವ ಪದ್ಧತಿಯಲ್ಲಿ ಉತ್ತಮ ಬೆಳೆ ಬೆಳೆದು ಸುತ್ತಮುತ್ತಲಿನ ರೈತರಲ್ಲಿ ಸೈ ಎನಿಸಿಕೊಳ್ಳುತ್ತಿದ್ದಾರೆ.

ನಾನು ವೃತ್ತಿಯಲ್ಲಿ ಲಾರಿ ಚಾಲಕ. ಬೇರೆ ಬೇರೆ ರಾಜ್ಯದಲ್ಲಿನ ತೋಟಗಾರಿಕೆ ಬೆಳೆಗಳನ್ನು ನೋಡಿ, ಸಹೋದರರೊಂದಿಗೆ ಬೆಳೆಗಳ ಬಗ್ಗೆ ಚರ್ಚಿಸಿ ಬೆಳೆ ಬೆಳೆಯುತ್ತಿದ್ದೇವೆ. ಸಾವಯವ ಕೃಷಿಯತ್ತ ಹುಮ್ಮಸ್ಸು ಹೆಚ್ಚಿದೆ. ಮೊದಲು ರಾಸಾಯನಿಕ ವ್ಯವಸಾಯದಿಂದ ಇಳುವರಿಗಿಂತ ಖರ್ಚು ಹೆಚ್ಚಾಗುತ್ತಿತ್ತು. ಈಗ ನಾವೇ ಬೀಜೋಪಚಾರ ಮಾಡಿ ಯಾವುದೇ ಖರ್ಚಿಲ್ಲದೆ ಬೆಳೆಗಳನ್ನು ತೆಗೆಯುತ್ತಿದ್ದೇವೆ. –ಜಗದೀಶಗೌಡ ಸಿದ್ದನಗೌಡ್ರ, ಕಳಸ ಗ್ರಾಮದ ಕೃಷಿಕರು

 -ಶೀತಲ್‌ ಎಸ್‌.ಎಂ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.