ಕೃಷಿ ಒತ್ತಡಗಳಿಗೆ ಸುಸ್ಥಿರ ಮಾದರಿ ಪರಿಹಾರ


Team Udayavani, Feb 28, 2021, 3:32 PM IST

ಕೃಷಿ ಒತ್ತಡಗಳಿಗೆ ಸುಸ್ಥಿರ ಮಾದರಿ ಪರಿಹಾರ

ಧಾರವಾಡ: ಕುಸಿಯುತ್ತಿರುವ ಅಂತರ್ಜಲ,ಮಣ್ಣಿನ ಸವಕಳಿ ಹಾಗೂ ಹವಾಮಾನ ವೈಪರಿತ್ಯದಂತಹ ಸವಾಲುಗಳು ಕೃಷಿ ಕ್ಷೇತ್ರವನ್ನೇ ಒತ್ತಡಕ್ಕೆ ನೂಕಿದ್ದು, ಸುಸ್ಥಿರ ಕೃಷಿ ಮಾರ್ಪಾಡುಗಳಿಂದ ಮಾತ್ರ ಸಮಸ್ಯೆಗೆ ಪರಿಹಾರ ಸಾಧ್ಯ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಪ್ರೊ| ಅಶುತೋಷ ಶರ್ಮಾ ಹೇಳಿದರು.

ಇಲ್ಲಿನ ಕೃಷಿ ವಿವಿಯ 33ನೇ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿಆನ್‌ಲೈನ್‌ ಮೂಲಕ ಘಟಿಕೋತ್ಸವಭಾಷಣ ಮಾಡಿದ ಅವರು, ಕೃಷಿಯಲ್ಲಿಸಾಕಷ್ಟು ಮಾರ್ಪಾಟುಗಳಾಗಲುಅಂತರ್ಜಲ ಮಟ್ಟ ಕಾಪಾಡುವುದು, ನೀರಾವರಿಯಲ್ಲಿ ಅಧಿಕ ನೀರು ಬಳಕೆ ಕಡಿಮೆ ಮಾಡುವುದು, ಅತ್ಯಧಿಕ ರಸಾಯನಿಕಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳಿಗೆ ಕಡಿವಾಣ ಹಾಕಬೇಕಿದೆ. ಅಲ್ಲದೇ ಜಾಗತಿಕ ತಾಪಮಾನ ಬದಲಾವಣೆ ಹಾಗೂ ಹಸಿರುಮನೆ ಪರಿಣಾಮಗಳಿಂದ ಕೃಷಿಗೆ ತೀವ್ರ ಹಿನ್ನೆಡೆಯುಂಟಾಗುವಸಾಧ್ಯತೆ ಇದ್ದು, ಇದಕ್ಕೆ ಸುಸ್ಥಿರ ಪರಿಹಾರ ಕಂಡುಕೊಳ್ಳಲೇಬೇಕಾದ ಅನಿವಾರ್ಯತೆ ಇದೆ ಎಂದರು.

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಸಾಧಿಸಲು ಹಸಿರು, ನೀಲಿ, ಶ್ವೇತ ಹಾಗೂಹಳದಿ ಕ್ರಾಂತಿಗಳು ಕಾರಣವಾಗಿವೆ. ರೈತನ ಆದಾಯ ದ್ವಿಗುಣಗೊಳಿಸಲುಕೊಯ್ಲೋತ್ತರ ನಿರ್ವಹಣೆಯ ತಂತ್ರಜ್ಞಾನಅಳವಡಿಕೆಗೆ ಹೆಚ್ಚು ಒತ್ತು ನೀಡಬೇಕು.ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ,ಪ್ರಧಾನಮಂತ್ರಿ ಫಸಲ್‌ ವಿಮಾಯೋಜನೆಗಳ ಲಾಭ ಪಡೆಯಲು ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಪ್ರೊ| ಶರ್ಮಾ ಹೇಳಿದರು.

ರೈತನ ಮಕ್ಕಳಿಗೆ ಶೇ.50 ಮೀಸಲು: ಘಟಿಕೋತ್ಸವದಲ್ಲಿ ಪದವಿಗಳನ್ನು ಪ್ರದಾನ ಮಾಡಿ ಪ್ರತಿಜ್ಞಾವಿಧಿ ಬೋಧಿಸಿದ ಕೃಷಿ ಸಚಿವರು ಹಾಗೂ ವಿವಿ ಸಹಕುಲಾಧಿಪತಿಗಳು ಆಗಿರುವ ಬಿ.ಸಿ. ಪಾಟೀಲ ಮಾತನಾಡಿ, ರಾಜ್ಯದಕೃಷಿ ವಿಶ್ವವಿದ್ಯಾಲಯದಲ್ಲಿ ಓದಲುಬರುವ ರೈತರ ಮಕ್ಕಳಿಗೆ ಮೀಸಲಿರುವ ಶೇ.40 ಸೀಟುಗಳನ್ನು ಶೇ.50ಕ್ಕೆಹೆಚ್ಚಿಸುವ ಕುರಿತು ಮುಖ್ಯಮಂತ್ರಿಗೆಮನವಿ ಮಾಡಿಕೊಳ್ಳಲಾಗಿದೆ. ಇದನ್ನುಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಈಡೇರಿಸುವ ಭರವಸೆ ಇದೆ ಎಂದರು.

ಕೊಪ್ಪಳ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ನಡೆಸಿರುವ ರೈತರ ಹೊಲದಲ್ಲಿನ ಮಣ್ಣು ಪರೀಕ್ಷೆ ಮಾಡುವ ಕೃಷಿ ಸಂಜೀವಿನಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ಯೋಚನೆ ಇದೆ. ಇನ್ನು ರೈತರಿಗೆ ಸ್ವಾಭಿಮಾನಿ ಗುರುತಿನ ಚೀಟಿಯನ್ನು ಕೂಡವಿತರಿಸುವ ಯೋಜನೆಯನ್ನು ರಾಜ್ಯವ್ಯಾಪಿವಿಸ್ತರಿಸಲಾಗುವುದು ಎಂದು ತಿಳಿಸಿದರು.

ಕೃಷಿಯಲ್ಲಿ ನವೋದ್ಯಮಕ್ಕೆ ಒತ್ತು ನೀಡಲಾಗುತ್ತಿದ್ದು, ಮಹಿಳಾ ಉದ್ದಿಮೆದಾರರ ಪ್ರಮಾಣ ಶೇ.14 ಹಾಗೂ ಮಹಿಳಾ ಉದ್ಯೋಗಿಗಳ ಪ್ರಮಾಣ ಶೇ.25 ಮಾತ್ರ ಇದೆ. ಆಹಾರ ಸಂಸ್ಕರಣೆಕೇವಲ ಶೇ.2ರಷ್ಟಿದೆ. ಕೃಷಿ ಉತ್ಪನ್ನಗಳಮೌಲ್ಯವರ್ಧನೆಗೆ ಒತ್ತು ನೀಡದ ಹೊರತುಕೃಷಿ ಅಭಿವೃದ್ಧಿ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳುಸಾವಿರಾರು ಕೋಟಿ ರೂ. ಅನುದಾನವನ್ನುರೈತರಿಗೆ ನೀಡುತ್ತಿದ್ದು, ರೈತರಲ್ಲೂ ಹೊಸ ಕೃಷಿ ಮಾದರಿ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಸಚಿವ ಪಾಟೀಲ ಹೇಳಿದರು.

ಕುಲಪತಿ ಡಾ| ಮಹದೇವ ಬ. ಚೆಟ್ಟಿ ವಿಶ್ವವಿದ್ಯಾಲಯದ ಸಂಕ್ಷಿಪ್ತ ವಾರ್ಷಿಕ ವರದಿ ನೀಡಿದರು. ರಮೇಶ ದೇಸಾಯಿ ಸೇರಿದಂತೆ ವಿವಿಧ ನಿಕಾಯಗಳ ಡೀನ್‌ಗರು, ವಿದ್ಯಾ ವಿಷಯಕ ಪರಿಷತ್‌ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ರಾಜ್ಯದ ಕೃಷಿಯಲ್ಲಿ ವೈಜ್ಞಾನಿಕತೆ ಅಳವಡಿಸಿ ಕೃಷಿಕರನ್ನು ಕೃಷಿ ಉದ್ಯಮಿಗಳನ್ನಾಗಿ ಪರಿವರ್ತಿಸಲು ಸಮಗ್ರ ಕೃಷಿ ನೀತಿ ರೂಪಿಸಲು ಸಮಿತಿ ರಚಿಸಲಾಗಿದೆ. 60 ಸಾವಿರನವೋದ್ಯಮಗಳಲ್ಲಿ 500 ಕೃಷಿ ನವೋದ್ಯಮಗಳಿದ್ದು, ಇವುಗಳ ಪ್ರೇರೇಪಿಸಿ, ಕೃಷಿ ನವೋದ್ಯಮ ನೀತಿ ಜಾರಿಗೆ ತರಲಾಗುವುದು. – ಬಿ.ಸಿ. ಪಾಟೀಲ, ಕೃಷಿ ಸಚಿವ

ಕೃಷಿಗೆ ನೀರಿನ ಲಭ್ಯತೆ ಮುಂದಿನ ದಿನಗಳಲ್ಲಿ ತೀವ್ರವಾಗಿ ಕುಸಿತ ಕಾಣಲಿದ್ದು, ಶೇ.83ರಿಂದ 70ಕ್ಕೆ ಇಳಿಯಲಿದೆ. ಕೃಷಿ ವಿದ್ಯುತ್‌ ಬಳಕೆ ಕಡಿಮೆ ಮಾಡಬೇಕಾಗಿದೆ. ಪಂಜಾಬ, ಹರಿಯಾಣದಲ್ಲಿ ಬೆಳೆಯ ನಂತರ ಉಳಿವ ಮೇವು ಮತ್ತು ಹೊಟ್ಟನ್ನು ಸುಟ್ಟು ಹಾಕುವ ಬದಲು ಅದನ್ನು ಶಕ್ತಿಯಾಗಿ ಕೃಷಿಗೆ ಬಳಸಿಕೊಳ್ಳಬೇಕಿದೆ. – ಪ್ರೊ| ಅಶುತೋಷ ಶರ್ಮಾ, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.