ಕೃಷಿ ವಿವಿಯಲ್ಲಿ ಅಗ್ರಿವಾರ್ ರೂಮ್
Team Udayavani, Apr 22, 2020, 1:33 PM IST
ಧಾರವಾಡ: ಕೋವಿಡ್ 19 ಹಿನ್ನೆಲೆಯಲ್ಲಿ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆ ಹಾಗೂ ಸವಾಲುಗಳಿಗೆ ಸ್ಪಂದಿಸುವ ಉದ್ದೇಶದಿಂದ ಏ.14ರಿಂದ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿವಾರ್ ರೂಮ್ ಆರಂಭಿಸಲಾಗಿದೆ.
ಇದರ ಟೋಲ್ ಫ್ರೀ ಸಂಖ್ಯೆ 1800-425-1150 ಆಗಿದ್ದು, ರಾಜ್ಯದ ಯಾವುದೇ ಭಾಗದ ರೈತ ಬಾಂಧವರು ಈ ಸಂಖ್ಯೆಗೆ ಕರೆ ಮಾಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಈ ಕೇಂದ್ರ ಬೆಳಿಗ್ಗೆ 8:00 ರಿಂದ ರಾತ್ರಿ 8:00 ಗಂಟೆವರೆಗೆ ಕಾರ್ಯ ನಿರ್ವಹಿಸುತ್ತದೆ. ಈ ಕೇಂದ್ರದಲ್ಲಿ ಸರದಿಯಂತೆ ಕೃಷಿ ವಿಜ್ಞಾನಿಗಳು ರೈತರ ಸಮಸ್ಯೆಗೆ ಸ್ಪಂದಿಸಲು ಲಭ್ಯವಿರುತ್ತಾರೆ.
ಕೋವಿಡ್ 19 ವೈರಸ್ ಬಗ್ಗೆ ಜಾಗೃತಿ ಮೂಡಿಸುವುದು, ಕೃಷಿ ಸಮಸ್ಯೆಗಳ ಬಗ್ಗೆ ಪರಿಹಾರ ನೀಡುವುದು,ರೈತರ ಬೆಳೆದ ಹಣ್ಣು, ತರಕಾರಿ ಹಾಗೂ ಇತರೆ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಮಾಹಿತಿ ಕೊಡುವುದು ಈ ಕೇಂದ್ರದ ಉದ್ದೇಶವಾಗಿದೆ.
ಕೃಷಿ ವಿವಿ ಕುಲಪತಿ ಡಾ|ಮಹಾದೇವ ಚೆಟ್ಟಿ, ಮಾನ್ಯ ಆಡಳಿತ ಮಂಡಳಿ ಸದಸ್ಯರಾದ ಶಶಿಮೌಳಿ ಕುಲಕರ್ಣಿ ಹಾಗೂ ಸುರೇಶ ಗೊಣಸಗಿ ಅವರು ಈ ಕೇಂದ್ರಕ್ಕೆ ಭೇಟಿ ನೀಡಿ ಕಾರ್ಯ ವೈಖರಿಯನ್ನು ಪರಿಶೀಲಿಸಿದರು. ವಿಸ್ತರಣಾ ನಿರ್ದೇಶಕ ಡಾ|ರಮೇಶ ಬಾಬು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ