ವಿದ್ಯಾಗಿರಿಯಲ್ಲಿ ಅಕ್ಷರ ದಾಸೋಹ


Team Udayavani, Dec 30, 2019, 11:06 AM IST

huballi-tdy-2

ಧಾರವಾಡ: ವಿದ್ಯಾಕಾಶಿ ಖ್ಯಾತಿಯ ಧಾರವಾಡಕ್ಕೂ ಉಡುಪಿಯ ಪೇಜಾವರದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರಿಗೂ ಅವಿನಾಭಾವ ಸಂಬಂಧ ಇತ್ತು.

ಧಾರವಾಡ ವಿದ್ಯಾಕಾಶಿ ಎಂಬ ಹೆಗ್ಗಳಿಕೆ ಪಡೆಯಲು ಶ್ರೀಗಳ ಕೊಡುಗೆ ಅಪಾರವಾಗಿದೆ. ಪೇಜಾವರ ಶ್ರೀ ಹಾಗೂ ಕಾರ್ಯಾಧ್ಯಕ್ಷರಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜನತಾ ಶಿಕ್ಷಣ ಸಮಿತಿ ಈ ಭಾಗದಲ್ಲಿ ಹೆಮ್ಮರವಾಗಿ ಬೆಳೆದಿದೆ.  ಹಾಳುಕೊಂಪೆಯಾಗಿದ್ದ ವಿದ್ಯಾಗಿರಿಯ ಗುಡ್ಡದಲ್ಲಿ ವಿದ್ಯೆಯ ಬೀಜ ಬಿತ್ತುವ ಮೂಲಕ ನಿಜಕ್ಕೂ “ವಿದ್ಯಾಗಿರಿ’ಯನ್ನಾಗಿ ಮಾಡಿದ್ದಾರೆ.

ಜೆಎಸ್‌ಎಸ್‌ಗೆ ಮರುಜೀವ: 1944ರಲ್ಲಿ ರಾಮರಾವ್‌ ಹುಕ್ಕೇರಿಕರ ಅವರಿಂದ ಸ್ಥಾಪನೆಯಾದ ಜನತಾ ಶಿಕ್ಷಣ ಸಮಿತಿ 1963ರ ಸಮಯದಲ್ಲಿ ಆರ್ಥಿಕ ಮುಗ್ಗಟ್ಟಿನಲ್ಲಿತ್ತು. ಆಗ ಹುಕ್ಕೇರಿಕರ ಅವರು ಶ್ರೀಗಳಲ್ಲಿ ಈ ಸಮಿತಿ ಮುನ್ನಡೆಸುವಂತೆ ಮನವಿ ಮಾಡಿದ್ದರು. ಆ  ಬಳಿಕ ಶ್ರೀಗಳು ಧರ್ಮಸ್ಥಳ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಈ ಸಮಿತಿ ಮುನ್ನಡೆಸುವಂತೆ ಮನವಿ ಮಾಡಿಕೊಂಡಾಗ ಶ್ರೀಗಳ ಇಚ್ಛೆಯಂತೆ ಸಮಿತಿ ಜವಾಬ್ದಾರಿ ವಹಿಸಿಕೊಂಡರು.

ಆಗ ಸಮಿತಿ ಕಾರ್ಯಾಧ್ಯಕ್ಷ ಸ್ಥಾನವನ್ನು ಡಾ|ಹೆಗ್ಗಡೆ ಅವರು ವಹಿಸಿಕೊಂಡರೆ, ಪೇಜಾವರ ಶ್ರೀಗಳು 1973ರಲ್ಲಿ ಅಕ್ಟೋಬರ್‌ 18ರಂದು ಅಧ್ಯಕ್ಷರಾದರು. ಆಗ 300 ವಿದ್ಯಾರ್ಥಿಗಳನ್ನು ಹೊಂದಿದ್ದ ಈ ಸಮಿತಿ ಅಡಿಯಲ್ಲಿ ಈಗ 22 ಅಂಗ ಶಿಕ್ಷಣ ಸಂಸ್ಥೆಗಳಿದ್ದು, 22,500 ವಿದ್ಯಾರ್ಥಿಗಳಿದ್ದಾರೆ. ಎಲ್‌ಕೆಜಿಯಿಂದ ಹಿಡಿದು ಪಿಜಿ, ಪಿಎಚ್‌ಡಿವರೆಗೂ ವಿದ್ಯಾರ್ಥಿಗಳಿದ್ದಾರೆ.

ಪ್ರಹ್ಲಾದ ನಿಲಯ ಸ್ಥಾಪನೆ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸ್ಥಾಪಿಸಿದ ಮೊದಲ ಸಂಸ್ಥೆ ಧಾರವಾಡದ ಪ್ರಹ್ಲಾದ ವಿದ್ಯಾರ್ಥಿ ನಿಲಯ. 1955ರಲ್ಲಿ ಪ್ರಹ್ಲಾದ ವಿದ್ಯಾರ್ಥಿ ನಿಲಯ ಸ್ಥಾಪಿಸುವ ನಿರ್ಣಯ ಶ್ರೀಗಳು ಕೈಗೊಂಡಾಗ ಅವರಿಗೆ ಕೇವಲ 24 ವರ್ಷವಾಗಿತ್ತು. ಶ್ರೀಗಳ ಸಂಕಲ್ಪದಿಂದ ನಿಲಯ ಸ್ಥಾಪನೆಗೊಂಡು 2018 ರಲ್ಲಿ ವಜ್ರ ಮಹೋತ್ಸವ ಆಚರಿಸಿಕೊಂಡಿದೆ. ಈ ನಿಲಯದಲ್ಲಿ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಳಿದುಕೊಂಡು ವಿದ್ಯೆಯನ್ನು ಪಡೆದಿದ್ದಾರೆ.

ಪ್ರಭಂಜನಾಚಾರ್ಯ ವ್ಯಾಸನಕೆರೆ, ಪಂ| ನಾರಾಯಣಾಚಾರ್ಯ ಧೂಳಖೇಡ ಸೇರಿದಂತೆ ಮೊದಲಾದ ಶ್ರೇಷ್ಠರು ಈ ನಿಲಯದ ವಿದ್ಯಾರ್ಥಿಗಳಾಗಿದ್ದರು ಎಂಬುದು ಹೆಮ್ಮೆಯ ವಿಷಯ. ಈ ಪ್ರಹ್ಲಾದ ವಿದ್ಯಾರ್ಥಿ ನಿಲಯದಲ್ಲಿ ಓದಿ ದೇಶ-ವಿದೇಶಗಳಲ್ಲಿ ನೆಲೆಸಿರುವ ಹಿಂದಿನ ವಿದ್ಯಾರ್ಥಿಗಳಲ್ಲಿ ಕೆಲವರು ಕೂಡಿಕೊಂಡು 15 ವರ್ಷದ ಹಿಂದೆ “ನಿಲಯ ಫೌಂಡೇಶನ್‌’ ಎಂಬ ಸಂಸ್ಥೆಯನ್ನೂ ಹುಟ್ಟು ಹಾಕಿದ್ದಾರೆ. ಶ್ರೀ ಪ್ರಹ್ಲಾದ ವಿದ್ಯಾರ್ಥಿ ನಿಲಯ ಪ್ರತಿಷ್ಠಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷರಾಗಿರುವ ಪೇಜಾವರ ಶ್ರೀಗಳ ಮಾರ್ಗದರ್ಶನದಲ್ಲಿ ಈಗಲೂ ಈ ನಿಲಯ ಮುನ್ನಡೆದಿದೆ.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.