ಅಕ್ಷರ ದಾಸೋಹ ಕಾರ್ಮಿಕರ ಪ್ರತಿಭಟನೆ
Team Udayavani, Nov 28, 2019, 12:04 PM IST
ಧಾರವಾಡ: ಜಿಲ್ಲೆಯಲ್ಲಿ 3-4 ತಿಂಗಳ ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಲು ಆಗ್ರಹಿಸಿ ಎಐಯುಟಿಯುಸಿ ವತಿಯಿಂದ ಅಕ್ಷರ ದಾಸೋಹ ಕಾರ್ಮಿಕರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಕಲಾಭವನ ಮೈದಾನದಿಂದ ಜಿಪಂ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡು, ಜಿಪಂ ಸಿಇಒ ಅವರಿಗೆ ಮನವಿ ಸಲ್ಲಿಸಲಾಯಿತು. ಎಐಯುಟಿಯುಸಿಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ವತಿಯಿಂದ ಜಿಲ್ಲೆಯಲ್ಲಿ ಅಕ್ಷರ ದಾಸೋಹ ಕಾರ್ಮಿಕರ 3-4 ತಿಂಗಳ ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಬೇಕು. ವರ್ಷಕ್ಕೆ 2 ಸಮವಸ್ತ್ರ, ಅಧಿಕೃತ ಗುರುತಿನ ಪತ್ರ ಕೊಡುವುದರ ಜೊತೆಗೆ ಕಾರ್ಮಿಕೆಂದು ಪರಿಗಣಿಸಿ ಕನಿಷ್ಠ ವೇತನ, ಪಿಎಫ್, ಇಎಸ್ಐ, ಪಿಂಚಣಿ ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಯಿತು.
ಎಐಯುಟಿಯುಸಿ ಜಿಲ್ಲಾ ಸಂಚಾಲಕರಾದ ಗಂಗಾಧರ ಬಡಿಗೇರ, ಸಂಘಟನೆಯ ಮುಖಂಡರಾದ ಭುವನಾ ಹಾಗೂ ರಮೇಶ ಹೊಸಮನಿ ಮಾತನಾಡಿ, ಜಿಲ್ಲೆಯಲ್ಲಿ ಎಲ್ಲಾ ಅಕ್ಷರ ದಾಸೋಹ ಕಾರ್ಮಿಕರಿಗೆ 3-4 ತಿಂಗಳುಗಳ ಬಾಕಿಯಿರುವ ವೇತನವನ್ನು ಈ ಕೂಡಲೇ ಒಂದೇ ಬಾರಿಗೆ ಪಾವತಿಸಬೇಕು. ಅಧಿಕೃತ ಗುರುತಿನ ಪತ್ರ ಒದಗಿಸಬೇಕು. ವರ್ಷಕ್ಕೆ 2 ಜೊತೆ ಸಮವಸ್ತ್ರ, ಅಗತ್ಯ ಎಪ್ರಾನ್, ಕೈಗವಸು ಕೊಡಬೇಕು.
ಇವರನ್ನು ಕಾರ್ಮಿಕರೆಂದು ಪರಿಗಣಿಸಿ, ಸೇವಾಭದ್ರತೆ ನೀಡಿ, ಕನಿಷ್ಟ ವೇತನ ಜಾರಿಗೊಳಿಸಬೇಕು. ಆರೋಗ್ಯ ಹಾಗೂ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿ ಹಾಗೂ ಎರಡೂ ಕಡೆಯ ಬಾಬತ್ತನ್ನು ಸರ್ಕಾರವೇ ಭರಿಸಬೇಕು ಎಂದು ಆಗ್ರಹಿಸಿದರು. ಮನವಿ ಸ್ವೀಕರಿಸಿದ ಜಿಪಂ ಸಿಇಒ ಡಾ| ಬಿ.ಸಿ. ಸತೀಶ್ ಮಾತನಾಡಿ, ಎರಡು ದಿನಗಳಲ್ಲಿ ಬಾಕಿ ಇರುವ ವೇತನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಗುರುತಿನ ಪತ್ರ,ಸಮವಸ್ತ್ರಗಳ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಜ್ಯೋತಿ ಆಟದ, ಶೋಭಾ ಕೊಟಬಾಗಿ, ರೇಣುಕಾ ಕರಿಗಾರ, ಸುನಿತಾ ಹೊಂಗಲ್, ದಿಲ್ಶಾದ್, ಮಂಜುಳಾ, ಅನುಸೂಯ, ರತ್ನ, ರೇಣುಕಾ ಲಮಾಣಿ, ಲಕ್ಷ್ಮೀ ಮುತ್ತಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ