ಹರಿದು ಬಂದ ನೆರವಿನ ಮಹಾಪೂರ

•ಹಳ್ಳಿಗಳಿಂದಲೂ ಬಂದವು ರೊಟ್ಟಿ•ಸಂತ್ರಸ್ತರಿನ್ನು ಗಟ್ಟಿ•ಕೆಲವು ಕಡೆ ರಾಜಕಾರಣಿಗಳ ಭೇಟಿ

Team Udayavani, Aug 11, 2019, 10:53 AM IST

hubali-tdy-3

ಧಾರವಾಡ: ಮುಗದುಮ್ಮ ಕಲ್ಯಾಣ ಮಂಟಪದ ಸಂತ್ರಸ್ತರಿಗೆ ಮನೆಗೆ ಕೊಂಡೊಯ್ಯಲು ನೀಡಿರುವ ಅಗತ್ಯ ವಸ್ತುಗಳು.

ಧಾರವಾಡ: ಅವರು ಚಹಾ ಕೇಳಿದರೆ ಜನರು ಹಾಲು ಕೊಡುತ್ತಿದ್ದಾರೆ, ಅವರು ಅನ್ನ ಕೇಳಿದರೆ ಜನ ಬಿರಿಯಾನಿ ಕೊಡುತ್ತಿದ್ದಾರೆ, ಅವರು ನೀರು ಎಂದರೆ ಸಾಕು ಬಿಸ್ಲೆರಿ ಬಾಟಲ್ಗಳನ್ನು ಮಡಿಲಿಗೆ ಹಾಕುತ್ತಿದ್ದಾರೆ, ಕೆಮ್ಮಿದರೆ ಔಷಧಿಯ ಕಿಟ್ ಅವರ ತೊಡೆ ಮೇಲಿರುತ್ತದೆ, ಉಂಡು ಮನೆಗೆ ಕಟ್ಟಿಕೊಳ್ಳಲು ಬೇಕಾಗುವಷ್ಟು ಅಗತ್ಯ ವಸ್ತುಗಳು ಬಂದು ಬೀಳುತ್ತಿವೆ.

ಜಿಲ್ಲೆಯ ನೆರೆ ಸಂತ್ರಸ್ತರಿಗೆ ಒಂದೇ ದಿನದಲ್ಲಿ ಜಿಲ್ಲೆಯ ಜನರು ಸ್ಪಂದಿಸಿದ ಪರಿ ಇದು. ಇಲ್ಲಿನ ಮುಗದುಮ್ಮ ಕಲ್ಯಾಣ ಮಂಟಪದಲ್ಲಿ ಅಳ್ನಾವರ ಪಟ್ಟಣದಿಂದ ಸ್ಥಳಾಂತರ ಮಾಡಿರುವ ಸಾವಿರಕ್ಕೂ ಅಧಿಕ ನಿರಾಶ್ರಿತರಿಗೆ ಕಳೆದ ಎರಡು ದಿನಗಳಿಂದ ಅಗತ್ಯ ವಸ್ತುಗಳನ್ನು ಸಂಘ-ಸಂಸ್ಥೆಗಳು ಮತ್ತು ಜನ ಸಾಮಾನ್ಯರೇ ಸ್ವಯಂಪ್ರೇರಣೆಯಿಂದ ತಂದು ಕೊಡುತ್ತಿದ್ದಾರೆ.

ಇನ್ನು ಧಾರವಾಡ ತಾಲೂಕಿನ ದೇವರಹುಬ್ಬಳ್ಳಿ, ನಿಗದಿ ಗ್ರಾಮಗಳು ಸೇರಿದಂತೆ ಅನೇಕ ಗ್ರಾಮಸ್ಥರು ಸ್ವಯಂಪ್ರೇರಣೆಯಿಂದ ತಮ್ಮೂರುಗಳಲ್ಲಿ ಶನಿವಾರ ರೊಟ್ಟಿ ಸಂಗ್ರಹಿಸಿ ಅವುಗಳನ್ನು ಸಂತ್ರಸ್ತರಿಗೆ ತಲುಪಿಸಿದರು.

ನಿರಾಶ್ರಿತರು ಇಲ್ಲಿಗೆ ಬಂದುಳಿದ 24 ಗಂಟೆಯಲ್ಲಿ ಎರಡು ಲಾರಿಯಷ್ಟು ಅಗತ್ಯ ವಸ್ತುಗಳು ಜಮಾವಣೆಯಾಗಿವೆ. ಅಕ್ಕಿ, ಬೇಳೆ, ತುಪ್ಪ, ಎಣ್ಣೆ ಸೇರಿದಂತೆ ದಿನಸಿ ವಸ್ತುಗಳನ್ನು ಸಾರ್ವಜನಿಕರು ನೆರೆ ಸಂತ್ರಸ್ತರಿಗೆ ತಂದು ಒಪ್ಪಿಸುತ್ತಿದ್ದಾರೆ. ಈ ಕೇಂದ್ರದ ಉಸ್ತುವಾರಿಯನ್ನು ಧಾರವಾಡ ಉಪ ವಿಭಾಗಾಧಿಕಾರಿ ಮಹ್ಮದ್‌ ಜುಬೇದ್‌ ನಿರ್ವಹಿಸುತ್ತಿದ್ದು, ಶನಿವಾರ ರಾತ್ರಿ ಇಲ್ಲಿಂದ ಕೆಲವಷ್ಟು ಜನರನ್ನು ಮರಳಿ ಅವರ ಊರುಗಳಿಗೆ ಸ್ಥಳಾಂತರಿಸುವುದಾಗಿ ‘ಉದಯವಾಣಿ’ಗೆ ತಿಳಿಸಿದರು.

ನಟ ಯಶ್‌ ಸಹಾಯಹಸ್ತ: ಜಿಲ್ಲೆಯ ನೆರೆ ಸಂತ್ರಸ್ತರಿಗೆ ಅವಶ್ಯಕ ವಸ್ತುಗಳ ದೇಣಿಗೆ ಸ್ವೀಕಾರಕ್ಕಾಗಿ ಜಿಲ್ಲಾಡಳಿತವು ಅಕ್ಕನ ಬಳಗದ ಕಲ್ಯಾಣಮಂಟಪದಲ್ಲಿ ಆರಂಭಿಸಿರುವ ಕೇಂದ್ರಕ್ಕೆ ಅಗತ್ಯ ವಸ್ತುಗಳು ಹರಿದು ಬರುತ್ತಿದೆ.

ನಟ ಯಶ್‌ ಅವರ ಯಶೋಮಾರ್ಗ ಫೌಂಡೇಶನ್‌ದಿಂದ ಅಕ್ಕಿ, ಎಣ್ಣೆ, ಬ್ಲಾಂಕೇಟ್, ಚಾಪೆ, ಚಾದರ, ಸ್ಯಾನೆಟರಿ ನ್ಯಾಪ್ಕಿನ್‌, ಗೋಧಿ ಹಿಟ್ಟು ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳು ಎರಡು ಲಾರಿಗಳಲ್ಲಿ ಬಂದಿದ್ದು, ಅವುಗಳನ್ನು ಕೇಂದ್ರಕ್ಕೆ ಹಸ್ತಾಂತರ ಮಾಡಲಾಯಿತು. ಶ್ರೀ ಬಾಲಾಜಿ ಟ್ರೇಡಿಂಗ್‌ ಕಂಪನಿ ಮಾಲೀಕ ಮಂಜುನಾಥ ಹರ್ಲಾಪುರ ಅವರು ಐದು ಲಕ್ಷ ಮೊತ್ತದ ದಿನಸಿ, ಕಾಳುಕಡಿ ಸೇರಿದಂತೆ ವಿವಿಧ ಅಗತ್ಯ ವಸ್ತುಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದಾರೆ. ಇದೇ ರೀತಿ ಮನಸೂರ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಿಂದ ಯುವಕ ಮಂಡಳ, ಸಂಘ-ಸಂಸ್ಥೆಗಳು ಅಗತ್ಯ ವಸ್ತುಗಳನ್ನು ತಂದು ಕೇಂದ್ರಕ್ಕೆ ಹಸ್ತಾಂತರ ಮಾಡುತ್ತಿದ್ದಾರೆ.

ರೋಟರಿ ಕ್ಲಬ್‌ ಧಾರವಾಡ ಸೆಂಟ್ರಲ್ ಹಾಗೂ ಧಾರವಾಡ ಬಾಂಡ್ಸ್‌ನೊಂದಿಗೆ ತಾಲೂಕಿನ ಹಾರೋಬೆಳವಡಿ ಗ್ರಾಮಕ್ಕೆ ತೆರಳಿ ಅಗತ್ಯ ವಸ್ತು ಪೂರೈಸುವುದರ ಜೊತೆಗೆ ಗ್ರಾಮಸ್ಥರ ಆರೋಗ್ಯ ಹಿತದೃಷ್ಟಿಯಿಂದ ರೆಡ್‌ ಕ್ರಾಸ್‌ ವತಿಯಿಂದ ಜಾಗೃತಿ ಹಾಗೂ ಆರೋಗ್ಯ ತಪಾಸಣೆ ನಡೆಸಲಾಗಿದೆ. ಇದಲ್ಲದೇ ಗಾಂಧೀಚೌಕ ಗಜಾನನ ಉತ್ಸವ ಸಮಿತಿ ವತಿಯಿಂದ ಹಾರೋಬೆಳವಡಿ ಗ್ರಾಮಸ್ಥರಿಗೆ ಚಾಪೆ ಹಾಗೂ ಬ್ಲಾಂಕೆಟ್‌ಗಳನ್ನು ವಿತರಿಸಲಾಯಿತು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.