ಮಹದಾಯಿಗಾಗಿ ಉ.ಕ ನಾಯಕರ ಒಗ್ಗಟ್ಟು

ಹೊರಟ್ಟಿ ನೇತೃತ್ವದಲ್ಲಿ ಶಾಸಕರು,ಸಂಸದರ ಸಭೆ

Team Udayavani, Jan 5, 2020, 10:24 PM IST

All-party-Meeting-,-Mahadayi-River

ಹುಬ್ಬಳ್ಳಿ: ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆ ವಿಚಾರದಲ್ಲಿ ರಾಜ್ಯದ ಹಿತ ಕಾಯಲು ಕಾನೂನು ತಜ್ಞರ ಸಲಹೆ ಪಡೆದು, ಮುಂದಿನ ಕಾರ್ಯತಂತ್ರದ ಬಗ್ಗೆ ನಿರ್ಧರಿಸಲು ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಶಾಸಕರು, ಸಂಸದರ ಸಭೆ ಒಕ್ಕೊರಲಿನ ನಿರ್ಧಾರ ಕೈಗೊಂಡಿದೆ.

ಭಾನುವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಶಾಸಕರು ಹಾಗೂ ಸಂಸದರ ಸಭೆಯಲ್ಲಿ ಪಕ್ಷಭೇದ ಮರೆತು ಮಹದಾಯಿ ವಿಚಾರದಲ್ಲಿ ನಮ್ಮ ಪಾಲಿನ ನೀರು ಪಡೆಯಲು, ರೈತರು ಹಾಗೂ ರಾಜ್ಯದ ಹಿತ ಕಾಯುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಧ್ವನಿ ಮೊಳಗಿಸಲು ಚರ್ಚಿಸಲಾಗಿದೆ.

ಒಳ್ಳೆಯ ಬೆಳವಣಿಗೆ: ಹೊರಟ್ಟಿ
ಸಭೆಯ ನೇತೃತ್ವ ವಹಿಸಿದ್ದ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ, ವಿಧಾನಪರಿಷತ್ತು ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ ಸೇರಿ ವಿವಿಧ ಶಾಸಕರು ಭಾಗಿಯಾಗಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪತ್ರ ಕಳುಹಿಸಿದ್ದು, ಸಭೆಗೆ ಸಹಮತವಿದೆ. ಸಭೆ ಕೈಗೊಳ್ಳುವ ನಿರ್ಣಯಕ್ಕೆ ಬದ್ಧರಾಗಿರುವುದಾಗಿ ತಿಳಿಸಿದ್ದು, ಇದರಿಂದ ನಮಗೆ ಇನ್ನಷ್ಟು ಬಲ ಬಂದಂತಾಗಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಮುಂದಿನ ಸಭೆಗೆ ಆಹ್ವಾನಿಸಲಾಗುವುದು. ರಾಜಕೀಯ ಟೀಕೆ-ಟಿಪ್ಪಣಿಗಳನ್ನು ಬದಿರಿಗಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಮಹದಾಯಿ ವಿಚಾರವಾಗಿ ತಾರ್ಕಿಕ ಅಂತ್ಯ ಕಾಣಿಸಲು ನಿರ್ಣಯಿಸಿದ್ದೇವೆ ಎಂದರು.

ಪಕ್ಷಾತೀತ ಯತ್ನ: ಜೋಶಿ
ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಇದೊಂದು ಪಕ್ಷಾತೀತ ಯತ್ನವಾಗಿದೆ. ರಾಜ್ಯ ಹಾಗೂ ರೈತರ ಹಿತ ಕಾಯುವ ನಿಟ್ಟಿನಲ್ಲಿ ಏನೆಲ್ಲಾ ಮಾಡಲು ಸಾಧ್ಯ ಎನ್ನುವುದರ ಕುರಿತಾಗಿ ಚರ್ಚಿಸಿದ್ದೇವೆ. ರಾಜಕೀಯ ಆರೋಪ-ಪ್ರತ್ಯಾರೋಪಗಳನ್ನು ಹೊರಗಿಟ್ಟು, ನಮ್ಮ ಪಾಲಿನ ನೀರು ಪಡೆಯುವ ನಿಟ್ಟಿನಲ್ಲಿ ಸಂಘಟಿತರಾಗಿ ಏನು ಮಾಡಬೇಕೆಂಬ ಚರ್ಚೆ ಮಾಡಲಾಗಿದೆ. ನೀರು ಹಂಚಿಕೆ ವಿಚಾರ ಬಂದಾಗ ನಾವು ನಮ್ಮದೇ ಯತ್ನಗಳನ್ನು ಹಿಂದೆಯೂ ಮಾಡಿದ್ದೇವೆ. ಮುಂದೆಯೂ ಮಾಡುತ್ತೇವೆ.

ಈ ಹಿಂದೆ ಕೃಷ್ಣಾ ನದಿ ನೀರು ಹಂಚಿಕೆ ವಿಚಾರದಲ್ಲಿ ತೆಲಂಗಾಣ ಸರ್ಕಾರ ತನ್ನ ಪಾಲು ನೀಡಬೇಕೆಂದು ಬೇಡಿಕೆ ಸಲ್ಲಿಸಿದ್ದಾಗ ಅಂದು ಅನಂತಕುಮಾರ ನೇತೃತ್ವದಲ್ಲಿ ನಾವೆಲ್ಲರೂ ಪಕ್ಷಭೇದ ಮರೆತು ಸುಪ್ರೀಂಕೋರ್ಟ್‌ನಲ್ಲಿ ಬಲವಾದ ಆಕ್ಷೇಪ ಸಲ್ಲಿಸಿದ್ದೆವು. ಹಾಗಾಗಿ, ಕೋರ್ಟ್‌ ಆಂಧ್ರದ ಪಾಲಿನಲ್ಲಿಯೇ ತೆಲಂಗಾಣ ನೀರಿನ ಪಾಲು ಪಡೆಯಬೇಕೆಂದು ಸೂಚಿಸಿತ್ತು ಎಂದರು.

ಗೋವಾದಿಂದ ರಾಜಕಾರಣ:
ಮಹದಾಯಿ ವಿಚಾರದಲ್ಲಿ ಗೋವಾ ತನ್ನ ರಾಜಕಾರಣ ಮಾಡುತ್ತದೆ, ಮಾಡಲಿ, ನಮ್ಮ ವಾದವನ್ನು, ನಮ್ಮ ರಾಜ್ಯದ ಪರವಾದ ನಿಲುವನ್ನು ನಾವು ಸಂಘಟಿತರಾಗಿ ಮಂಡಿಸುತ್ತೇವೆ. ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ನಡೆ ಏನೆಂಬುದರ ಬಗ್ಗೆ ನಿರ್ಣಯಿಸುತ್ತೇವೆ. ಮಹದಾಯಿ ನ್ಯಾಯಾಧಿಕರಣ ತೀರ್ಪು ನೀಡಿದ್ದರೂ, ಯಾವುದಾದರೂ ಒಂದು ರಾಜ್ಯ ಕೋರ್ಟ್‌ ಮೊರೆ ಹೋದರೆ ನೀರು ಹಂಚಿಕೆ ಸಾಧ್ಯವಾಗದು. ಈ ವಿಷಯ ಸುಪ್ರೀಂಕೋರ್ಟ್‌ನಲ್ಲಿರುವುದರಿಂದ ನಾವೇನೂ ಪ್ರತಿಕ್ರಿಯೆ ನೀಡುವಂತಿಲ್ಲ ಎಂದರು.

ಕಗ್ಗಂಟು ಬಿಡಿಸುವ ಯತ್ನ: ಎಸ್‌.ಆರ್‌.ಪಾಟೀಲ
ವಿಧಾನ ಪರಿಷತ್‌ ವಿಪಕ್ಷ ನಾಯಕ ಎಸ್‌.ಆರ್‌.ಪಾಟೀಲ ಮಾತನಾಡಿ, ಮಹದಾಯಿ ಕಗ್ಗಂಟು ಬಿಡಿಸುವ ಯತ್ನ ಇದಾಗಿದೆ. ಕಾವೇರಿ ನದಿ ನೀರಿನ ವಿವಾದ ಬಂದಾಗ ಆ ಭಾಗದ ಜನಪ್ರತಿನಿಧಿಗಳು ಯಾವ ರೀತಿ ಸಂಘಟಿತ ನಿಲುವು ತೋರುತ್ತಾರೋ, ಅದೇ ರೀತಿ ಮಹದಾಯಿ ವಿಚಾರದಲ್ಲಿ ಒಗ್ಗಟ್ಟು ವ್ಯಕ್ತವಾಗಿದೆ. ಇದೊಂದು ದಿಟ್ಟ ಹಾಗೂ ಚಾರಿತ್ರಿಕ ಹೆಜ್ಜೆಯಾಗಿದೆ. ಪಕ್ಷ ಮೀರಿ ನಾವೆಲ್ಲಾ ಮಹದಾಯಿ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಯತ್ನಿಸುತ್ತೇವೆ ಎಂದರು.

ನಮ್ಮ ಶಕ್ತಿ ತೋರಿಸುತ್ತೇವೆ: ಶೆಟ್ಟರ್‌
ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಮಾತನಾಡಿ, ಮಹದಾಯಿ ವಿಚಾರದಲ್ಲಿ ಎಲ್ಲರೂ ಸೇರಿ ಒಗ್ಗಟ್ಟಿನ ನಡೆ ಕುರಿತಾಗಿ ಚರ್ಚಿಸಿದ್ದೇವೆ. ಮಹದಾಯಿ ನ್ಯಾಯಾಧಿಕರಣ ತೀರ್ಪಿನ ನಿಟ್ಟಿನಲ್ಲಿ ನಮ್ಮ ಪಾಲಿನ ನೀರು ಪಡೆಯಲು ನಮ್ಮ ಶಕ್ತಿ ತೋರಿಸುತ್ತೇವೆ. ಎಲ್ಲ ಪಕ್ಷಗಳ ಜನಪ್ರತಿನಿಧಿಗಳ ಪ್ರಥಮ ಸಭೆ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿಯೂ ಈ ರೀತಿ ಸಭೆಗಳನ್ನು ನಡೆಸಲಾಗುವುದು. ಈ ಹಿಂದೆ ಬಸವರಾಜ ಹೊರಟ್ಟಿ ಅವರು ಸಭಾಪತಿ ಆಗಿದ್ದಾಗ, ನಿಮ್ಮ ನೇತೃತ್ವದಲ್ಲೇ ಈ ಭಾಗದ ಜನಪ್ರತಿನಿಧಿಗಳ ಸಭೆ ಕರೆಯಿರಿ ಎಂದು ಸಲಹೆ ನೀಡಿದ್ದೆ. ಅದು ಆಗಿರಲಿಲ್ಲ. ಇದೀಗ ಅವರ ನೇತೃತ್ವದಲ್ಲೇ ಸಭೆ ನಡೆದಿದ್ದು, ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತಾಗಿಯೂ ಪಕ್ಷಾತೀತವಾಗಿ ಜನಪ್ರತಿನಿಧಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದರು.

ವಿಧಾನಸಭೆ ಸದಸ್ಯರಾದ ಪ್ರಸಾದ ಅಬ್ಬಯ್ಯ, ಶಂಕರ ಪಾಟೀಲ ಮುನೇನಕೊಪ್ಪ, ಅಮೃತ ದೇಸಾಯಿ, ಆನಂದ ಮಾಮನಿ, ಅರವಿಂದ ಬೆಲ್ಲದ, ವಿಧಾನ ಪರಿಷತ್‌ ಸದಸ್ಯರಾದ ಶ್ರೀನಿವಾಸ ಮಾನೆ, ಪ್ರದೀಪ ಶೆಟ್ಟರ, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಮಾಜಿ ಶಾಸಕರಾದ ಎನ್‌.ಎಚ್‌.ಕೋನರಡ್ಡಿ, ಎಸ್‌.ಎನ್‌.ಪಾಟೀಲ ಇನ್ನಿತರರಿದ್ದರು.

ಕೋನರಡ್ಡಿ ಉಪಸ್ಥಿತಿಗೆ ಆಕ್ಷೇಪ:
ಸಭೆಯಲ್ಲಿ ಮಾಜಿ ಶಾಸಕ ಎನ್‌.ಎಚ್‌.ಕೋನರಡ್ಡಿ ಅವರ ಭಾಗವಹಿಸುವಿಕೆಗೆ ಬಿಜೆಪಿಯ ಕೆಲವರು ಆಕ್ಷೇಪ ವ್ಯಕ್ತಪಡಿಸಿದರು. ಜನಪ್ರತಿನಿಧಿಗಳ ಸಭೆಗೆ ಮಾಜಿಯಾದವರು ಏಕೆ ಹೋಗಬೇಕು ಎಂದು ಆಕ್ಷೇಪ ಎತ್ತಿದರು. ನಂತರ, ಸಭೆಯಲ್ಲಿದ್ದ ಜನಪ್ರತಿನಿಧಿಗಳು, ಮಹದಾಯಿ ಹೋರಾಟದಲ್ಲಿ ಅವರು ಸಕ್ರಿಯರಾಗಿದ್ದಾರೆ. ಅಲ್ಲದೆ, ಮಾಜಿ ಶಾಸಕರಿಗೆ ಸಭೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ಸಮಜಾಯಿಷಿ ನೀಡಿದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.