ಎಲ್ಲ ಸಮಸ್ಯೆಗೂ ಸರಕಾರದಿಂದಲೇ ಪರಿಹಾರ ನಿರೀಕ್ಷೆ ಸಲ್ಲ


Team Udayavani, Nov 25, 2019, 10:31 AM IST

huballi-tdy-4

ಹುಬ್ಬಳ್ಳಿ: ನಾಗರಿಕರು ಕೈಜೋಡಿಸಿದರೆ ನಗರದ ಜನರು ಎದುರಿಸುತ್ತಿರುವ ಬಹುತೇಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದು ದೇಶಪಾಂಡೆ ಫೌಂಡೇಶನ್‌ ಸಂಸ್ಥಾಪಕ ಡಾ| ಗುರುರಾಜ ದೇಶಪಾಂಡೆ ಹೇಳಿದರು.

ಇಂದಿರಾ ಗಾಜಿನಮನೆಯಲ್ಲಿ ರವಿವಾರ ಸಿಟಿಜನ್ಸ್‌ ಲೀಡ್‌ ಹುಬ್ಬಳ್ಳಿ-ಧಾರವಾಡ ಆಯೋಜಿಸಿದ್ದ ಎಡಬ್ಲ್ಯೂಇ-ಎಚ್‌ಡಿ ಫೆಸ್ಟ್‌ ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲ ಸಮಸ್ಯೆಗಳನ್ನು ಸರಕಾರವೇ ಬಗೆಹರಿಸಬೇಕೆಂದು ನಿರೀಕ್ಷಿಸುವುದುಸರಿಯಲ್ಲ. ನಾಗರಿಕರು ಕೈಜೋಡಿಸಿದರೆ ಎಂಥದೇ ಸಮಸ್ಯೆಗಳಿದ್ದರೂ ಪರಿಹರಿಸಬಹುದಾಗಿದೆ. ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬುದು ಮನವರಿಕೆಯಾಗಬೇಕು ಎಂದರು.

ಅರಣ್ಯ ಇಲಾಖೆ ಅಧಿಕಾರಿ ಮಹೇಶಕುಮಾರ ಮಾತನಾಡಿ, ಸಸಿಗಳ ರಕ್ಷಣೆ ಕೇವಲ ಅರಣ್ಯ ಇಲಾಖೆ ಕೆಲಸವಲ್ಲ, ಪ್ರತಿಯೊಬ್ಬರ ಜವಾಬ್ದಾರಿಯೂ ಹೌದು. ಎಲ್ಲ ಗಿಡ-ಮರಗಳನ್ನು ಸಂರಕ್ಷಣೆ ಮಾಡುವುದು ಅರಣ್ಯ ಸಿಬ್ಬಂದಿಯಿಂದ ಸಾಧ್ಯವಿಲ್ಲ. ಮರಗಳನ್ನು ಕಡಿಯದಂತೆ ನೋಡಿಕೊಳ್ಳಬೇಕು. ಹೆಚ್ಚೆಚ್ಚು ಜನರು ನಗರವನ್ನು ಹಸಿರುಗೊಳಿಸುವ ಕಾರ್ಯದಲ್ಲಿ ಕೈಜೋಡಿಸುವುದು ಅವಶ್ಯಕ ಎಂದು ಹೇಳಿದರು.

ದೇಶಪಾಂಡೆ ಫೌಂಡೇಶನ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿವೇಕ ಪವಾರ ಮಾತನಾಡಿ, ಹುಬ್ಬಳ್ಳಿ ನಗರವನ್ನು ಮಾದರಿ ದ್ವಿತೀಯ ಸ್ತರದ ನಗರವನ್ನಾಗಿ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಮರ್ಪಕವಾಗಿ ಉಸಿರಾಡಲು, ವಾತಾವರಣ ಉತ್ತಮವಾಗಿರಲು ಪ್ರತಿಯೊಬ್ಬ ವ್ಯಕ್ತಿಗೆ 40 ಗಿಡಗಳಾದರೂ ಇರಬೇಕು. ಆದರೆ ಸದ್ಯ ಅವಳಿ ನಗರದಲ್ಲಿ ಪ್ರತಿ ವ್ಯಕ್ತಿಗೆ 28 ಗಿಡಗಳಿವೆ. ವರ್ಷಕ್ಕೆ 2 ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸುವುದು ಅತ್ಯವಶ್ಯಕ ಎಂದರು. ಅವಳಿನಗರದಲ್ಲಿ ಸಹಸ್ರಾರು ಸಸಿಗಳನ್ನು ನೆಟ್ಟು ಪೋಷಿಸುತ್ತಿರುವ ಡಾ| ಮಹಾಂತೇಶ ತಪಶೆಟ್ಟಿ ಅವರಿಗೆ ಜೀವನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ವಿಜೇತರು: ಫೆಸ್ಟ್‌ ನಿಮಿತ್ತ ಇಕೋ ಮಾಡೆಲ್‌ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಯಿತು. ಕೆಎಲ್‌ಇ ಎಂ.ಆರ್‌. ಸಾಖರೆ ಸಿಬಿಎಸ್‌ಇ ಶಾಲೆಯ ಪ್ರಣಿತಾ ಹಾಗೂ ಗೌರಿ ಪ್ರಥಮ; ಬೆಂಗೇರಿ ರೋಟರಿ ಪ್ರಾಥಮಿಕ ಶಾಲೆಯ ರತನ್‌ ಗೌಡ ಹಾಗೂ ಪ್ರಥಮ ಅವಾಜಿ ದ್ವಿತೀಯ; ಚಿನ್ಮಯ ಇಂಗ್ಲಿಷ್‌ ಮೀಡಿಯಂ ಸ್ಕೂಲ್‌ನ ಭರತ್‌ ನಾಯ್ಕ ಹಾಗೂ ಸುಜನ್‌ರಾಜ್‌ ತೃತೀಯ ಸ್ಥಾನ ಪಡೆದರು. ವಾಸುಕಿ ಜಿ.ಎಸ್‌., ಜಯಶ್ರೀ ದೇಶಪಾಂಡೆ, ತಿಲಕ್‌ ವಿಕಂಶಿ, ಪಿ.ವಿ. ಹಿರೇಮಠ, ಡಾ| ಬಬಿತಾ ಆರ್‌., ಡಾ| ಸತೀಶ ಇರಕಲ್‌, ಡಾ| ಚೇತನ್‌, ಪ್ರಕಾಶ ಕರಿಗೌಡರ ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.