ಮೈತ್ರಿ ಸರ್ಕಾರ ಸಿಎಂ ರೆಸಾರ್ಟ್ನಲ್ಲಿ ಗಾಢ ನಿದ್ರೆ
Team Udayavani, May 11, 2019, 9:46 AM IST
ಕುಂದಗೋಳ: ಕುಂದಗೋಳ, ಶಿರೂರು, ಪಶುಪತಿಹಾಳ, ಹಿರೇಗುಂಜಳ, ಬರದ್ವಾಡ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ್ರ ಪರ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಮತಯಾಚಿಸಿದರು.c
ಕುಂದಗೋಳ: ಜನರ ವಿಶ್ವಾಸ ಕಳೆದುಕೊಂಡ ಮೈತ್ರಿ ಸರ್ಕಾರದ ಸಿಎಂ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿ ಪರ ಮತಕೇಳಿ ಸುಸ್ತಾಗಿ ರೆಸಾರ್ಟ್ನಲ್ಲಿ ಗಾಢ ನಿದ್ರೆಗೆ ಜಾರಿದ್ದು, ಮುಂಬರುವ ದಿನಗಳಲ್ಲಿ ಮೈತ್ರಿ ಸರ್ಕಾರ ಪತನವಾಗುವುದು ಗ್ಯಾರಂಟಿ ಎಂದು ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ್ರ ಪರ ಶುಕ್ರವಾರ ಕುಂದಗೋಳ, ಶಿರೂರು, ಪಶುಪತಿಹಾಳ, ಹಿರೇಗುಂಜಳ ಮತ್ತು ಬರದ್ವಾಡ ಗ್ರಾಮಗಳಲ್ಲಿ ಮತಯಾಚಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ ಹುಬ್ಬಳ್ಳಿಯಲ್ಲಿ ಮನೆ ಮಾಡಿ ಮತಬ್ಯಾಂಕ್ಗೆ ಕೈ ಹಾಕಿದರೋ ಅಥವಾ ಇಲ್ಲಿನ ಜನರ ನೋವಿಗಾಗಿ ಮಾಡಿದರೋ ಅದು ಸ್ಪಷ್ಟವಾಗಲಿಲ್ಲ. ಚುನಾವಣೆ ಸಂದರ್ಭದಲ್ಲಿ ಇಲ್ಲಿನ ಜನ ಮತ ನೀಡಲಿಲ್ಲ ಎಂದು ಇಲ್ಲಿ ನಿರ್ಲಕ್ಷ್ಯ ವಹಿಸಿದರು. ಆದರೆ ಮಂಡ್ಯ, ಮೈಸೂರು, ತುಮಕೂರು, ಹಾಸನ ಜಿಲ್ಲೆಗೆ ಮಾತ್ರ ಸಿಎಂ ಆಗಿ ಕಾರ್ಯ ಮಾಡುತ್ತಿದ್ದಾರೆ ಎಂದರು.
ಮಲ್ಲಿಕಾರ್ಜುನ ಕಿರೇಸೂರ, ಪ್ರಕಾಶ ಶಟ್ಟಿ, ರುದ್ರಣ್ಣ ಗಾಣಿಗೇರ, ರಾಘವೇಮದ್ರ ಮಿರೇಜಕರ, ಈಶ್ವರ ಗಂಗಾಯಿ, ಶಂಕ್ರಣ್ಣ ಒಡಕಣ್ಣವರ, ಸಿದ್ದು ನಾಗರಳ್ಳಿ, ಇದ್ದರು.
ಇದೇ ವೇಳೆ ಹಿರೇಹರಕುಣಿ ಗ್ರಾಮದಲ್ಲೂ ಪ್ರಚಾರ ನಡೆಸಿ ಮತಯಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ