ಅಳ್ನಾವರ ಪಪಂ ಅತಂತ್ರ; ಕಾಂಗ್ರೆಸ್ಗೆ ಹೆಚ್ಚು ಸ್ಥಾನ
Team Udayavani, Jun 1, 2019, 11:55 AM IST
ಅಳ್ನಾವರ: ಪಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದವರ ಸಂಭ್ರಮ.
ಅಳ್ನಾವರ: ತಾಲೂಕು ಕೇಂದ್ರವಾಗಿ ರಚನೆಯಾದ ನಂತರ ಸ್ಥಳೀಯ ಪಪಂಗೆ ನಡೆದ ಪ್ರಥಮ ಚುನಾವಣೆ ಫಲಿತಾಂಶ ಶುಕ್ರವಾರ ಘೋಷಣೆಯಾಗಿದ್ದು, 18 ಸ್ಥಾನಗಳ ಪೈಕಿ ಕಾಂಗ್ರೆಸ್8, ಜೆಡಿಎಸ್ 6, ಬಿಜೆಪಿ 3 ಸ್ಥಾನ ಗಳಿಸಿದ್ದು, ಪಕ್ಷೇತರರು ಒಂದು ಸ್ಥಾನ ಗೆದ್ದಿದ್ದಾರೆ. ವಿಜೇತ ಅಭ್ಯರ್ಥಿಗಳು ಮತ್ತು ಆಯಾ ಪಕ್ಷದ ಕಾರ್ಯಕರ್ತರು ಪಟ್ಟಣದೆಲ್ಲೆಡೆ ಪಟಾಕ್ಷಿ ಸಿಡಿಸಿ, ಬಣ್ಣ ಎರಚಾಡುವ ಮೂಲಕ ವಿಜಯೋತ್ಸವ ಆಚರಿಸಿದರು.
ಹಿಂದಿನ ಅವಧಿಯಲ್ಲಿ 15 ವಾರ್ಡ್ ಹೊಂದಿದ್ದ ಪಟ್ಟಣದಲ್ಲಿ ಈ ಸಲ 18 ವಾರ್ಡ್ಗಳು ಅಸ್ತಿತ್ವಕ್ಕೆ ಬಂದಿದ್ದು, ಯಾವ ಪಕ್ಷವೂ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಸರಳ ಬಹುಮತಕ್ಕೆ 10 ಸ್ಥಾನ ಬೇಕಿದ್ದು, ರಾಜ್ಯದಂತೆ ಇಲ್ಲಿಯೂ ಕೈ-ದಳ ಮೈತ್ರಿ ಆಡಳಿತ ರಚನೆಯಾಗಬಹುದು. ಆದರೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಮೀಸಲಾತಿ ಅವಲಂಬಿಸಿದೆ.
ಹಿಂದಿನ ಆಡಳಿತದಲ್ಲಿ ಕಾಂಗ್ರೆಸ್ 9 ಸದಸ್ಯರನ್ನು ಹೊಂದಿತ್ತು. ಆದರೆ ಈ ಸಲ ಒಂದು ಸ್ಥಾನ ಕಳೆದುಕೊಂಡಿದೆ. 3 ಸದಸ್ಯರನ್ನು ಹೊಂದಿದ್ದ ಜೆಡಿಎಸ್ ಈ ಸಲ ಆರು ಸ್ಥಾನಕ್ಕೆ ಏರಿದೆ. 2 ಸ್ಥಾನ ಹೊಂದಿದ್ದ ಬಿಜೆಪಿ ಈ ಸಲ ಒಂದು ಸ್ಥಾನ ಹೆಚ್ಚಿಗೆ ಗಳಿಸಿ ಮೂರಕ್ಕೇರಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳನ್ನು ನೀಡಿದ್ದ ಅಳ್ನಾವರ ಪಟ್ಟಣದ ಜನರು ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿಸಿರುವುದನ್ನು ಗಮನಿಸಿದರೆ ಗೆಲುವಿಗೆ ಪಕ್ಷಕ್ಕಿಂತ ವೈಯಕ್ತಿಕ ವರ್ಚಸ್ಸು ಕಾರಣ ಎನ್ನುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…