ಬೇಂದ್ರೆ ಸಾರಿಗೆಗೆ ಪರ್ಯಾಯ ಮಾರ್ಗ| ಲಾಭದ ಮಾರ್ಗ ನೀಡಿದ ಆರೋಪ

ಬಿಆರ್‌ಟಿಎಸ್‌ ಯಶಸ್ಸಿಗೆ ಸರಕಾರದ ಕ್ರಮ | ಲಾಭದ ಮಾರ್ಗ ನೀಡಿದ ಆರೋಪ | ಖಾಸಗೀಕರಣದ ಮೊದಲ ಹೆಜ್ಜೆ

Team Udayavani, Aug 2, 2021, 1:13 PM IST

uo

­ವರದಿ: ಹೇಮರಡ್ಡಿ ಸೈದಾಪುರ

ಹುಬ್ಬಳ್ಳಿ: ರಾಜ್ಯದ ಏಕೈಕ ತ್ವರಿತ ಬಸ್‌ (ಬಿಆರ್‌ಟಿಎಸ್‌) ಸೇವೆಗೆ ತೊಡಕಾಗಿದ್ದ ಬೇಂದ್ರೆ ನಗರ ಸಾರಿಗೆಯ ಅವಳಿನಗರದ ಸಂಚಾರಕ್ಕೆ ಬ್ರೇಕ್‌ ಬೀಳಲಿದ್ದು, ಹು-ಧಾ ನಡುವೆ ಬದಲು ಇತರೆ ಮಾರ್ಗಗಳನ್ನು ಗುರುತಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ. ಆದರೆ ಖಾಸಗಿ ಲಾಬಿಗೆ ಮಣಿದು ಹೆಚ್ಚಿನ ಆದಾಯವಿರುವ ಮಾರ್ಗಗಳನ್ನು ನೀಡಲಾಗಿದೆ ಎನ್ನುವ ಗಂಭೀರ ಆರೋಪ ವ್ಯಕ್ತವಾಗಿದೆ.

ಹು-ಧಾ ಬಿಆರ್‌ಟಿಎಸ್‌ಗೆ ಪರ್ಯಾಯವಾಗಿ ಇತರೆ ಸಾರಿಗೆ ಸೇವೆ ಇರಬಾರದು ಎನ್ನುವುದು ಮೂಲ ಉದ್ದೇಶವಾಗಿತ್ತು. ಆದರೆ ಕಳೆದ 18 ವರ್ಷಗಳಿಂದ ಸಾರಿಗೆ ಸೇವೆ ನೀಡುತ್ತಿರುವ ಬೇಂದ್ರೆ ಸಾರಿಗೆ ಇದಕ್ಕೆ ಪೈಪೋಟಿ ನಡೆಸುತ್ತಿರುವ ವಾಯವ್ಯ ಸಾರಿಗೆ ಸಂಸ್ಥೆ ಬಸ್‌ಗಳ ಸಂಚಾರ ತೊಡಕಾಗಿತ್ತು. ಬೇಂದ್ರೆ ಸಾರಿಗೆ ಸೇವೆಗೆ ಕಡಿವಾಣ ಅಥವಾ ಇತರೆ ಪರ್ಯಾಯ ಮಾರ್ಗ ನೀಡುವ ಚರ್ಚೆಗಳಿದ್ದವು. ಹೀಗಾಗಿ 2019ರ ಕರಡು ಅಧಿಸೂಚನೆ ಪ್ರಕಾರ ಹಿಂದಿನ ಜಿಲ್ಲಾಧಿಕಾರಿ ದೀಪಾ ಚೋಳನ್‌ ರಹದಾರಿ ಪರವಾನಗಿ ನವೀಕರಣ ಮಾಡಿರಲಿಲ್ಲ. ಇದೀಗ ಸರಕಾರ ಬೇಂದ್ರೆ ಸಾರಿಗೆಗೆ ಪರ್ಯಾಯ ಮಾರ್ಗಗಳನ್ನು ನೀಡಿದ್ದು, ಅಂದುಕೊಂಡಂತೆ ಬೇರೆಡೆಗೆ ಸ್ಥಳಾಂತರಗೊಂಡರೆ ಬಿಆರ್‌ಟಿಎಸ್‌ ಮಿಶ್ರಪಥ ಸಾರಿಗೆ ಸುಗಮವಾಗಲಿದೆ.

ಪರ್ಯಾಯ ಮಾರ್ಗ: ಹು-ಧಾ ಅವಳಿ ನಗರದ ಸೇವೆಗೆ ಪರ್ಯಾಯವಾಗಿ ಇದೀಗ ಸರಕಾರವೇ ಬೇಂದ್ರೆ ಸಾರಿಗೆಯ 41 ರಹದಾರಿ ಪರವಾನಗಿಗಳನ್ನು ಹುಬ್ಬಳ್ಳಿ-ಗದಗ (11), ಹುಬ್ಬಳ್ಳಿ-ಬಾಗಲಕೋಟೆ-ವಿಜಯಪುರ (15), ಬೆಳಗಾವಿ-ಅಥಣಿ-ವಿಜಯಪುರ (15) ಹಂಚಿಕೆ ಮಾಡಿ ಕೂಡಲೇ ರಾಜ್ಯ ಸಾರಿಗೆ ಪ್ರಾಧಿಕಾರ ರಹದಾರಿ ನೀಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ಬಿಆರ್‌ಟಿಎಸ್‌ ಯೋಜನೆ ಮೂಲ ಉದ್ದೇಶಕ್ಕೆ ತೊಡಕಾಗಿದ್ದ ಬೇಂದ್ರೆ ಸಾರಿಗೆಗೆ ಪರ್ಯಾಯ ಮಾರ್ಗಗಳನ್ನು ನೀಡಿ ಇಲ್ಲಿಂದ ವಿಮುಖಗೊಳಿಸಿದ್ದು, ಮಾಲೀಕರು, ಕಾರ್ಮಿಕರಲ್ಲಿ ಸಂತಸ ಮೂಡಿಸಿದೆ.

ಇತ್ಯರ್ಥಕ್ಕೆ ಪ್ರಾಧಿಕಾರ

2019 ಮಾ.8ರಂದು ಸರಕಾರ ಹೊರಡಿಸಿದ್ದ ಕರಡು ಅಧಿಸೂಚನೆಯಲ್ಲಿ ಈಗಾಗಲೇ ಸಂಚರಿಸುತ್ತಿರುವ ರಹದಾರಿ ಪರವಾನಗಿ ಅವಧಿ ಮುಗಿಯುವರೆಗೆ ಮಾತ್ರ ಸಂಚರಿಸತಕ್ಕದ್ದು ಎಂಬುದಾಗಿತ್ತು. 2020 ಮಾ.7ರೊಳಗೆ ಅಂತಿಮ ಅಧಿಸೂಚನೆ ಹೊರಡಿಸಬೇಕಾಗಿತ್ತು. ಈ ಕಾರಣಕ್ಕಾಗಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬಿಆರ್‌ಟಿಎಸ್‌ ರೂವಾರಿ ಜಗದೀಶ ಶೆಟ್ಟರ ನೇತೃತ್ವದಲ್ಲಿ ವಿಚಾರಣಾ ಪ್ರಾಧಿಕಾರ ರಚಿಸಿ ವಾಯವ್ಯ ಸಾರಿಗೆ ಸಂಸ್ಥೆ ಹಾಗೂ ಬೇಂದ್ರೆ ಸಾರಿಗೆ ಸಂಸ್ಥೆಯ ಮನವಿ ಆಲಿಸಿದ್ದರು.

ನ್ಯಾಯಾಲಯಗಳ ಆದೇಶದಿಂದ ಅಸ್ತಿತ್ವ  

2003 ಡಿ. 31ರಂದು ಅಂದಿನ ಸರಕಾರ ಬೆಂಗಳೂರು ಹೊರತುಪಡಿಸಿ ಇತರೆ ಜಿಲ್ಲಾ ಕೇಂದ್ರದ 20 ಕಿಮೀ ವ್ಯಾಪ್ತಿಯಲ್ಲಿ ಖಾಸಗಿ ಪ್ರವರ್ತಕರಿಗೆ ಅವಕಾಶ ಮಾಡಿಕೊಟ್ಟಿತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಅಧಿಸೂಚನೆ ತಡೆಹಿಡಿಯಿತು. ಅಷ್ಟರೊಳಗೆ ಹು-ಧಾ ನಡುವೆ 60 ಪರ್ಮಿಟ್‌ಗಳನ್ನು ಪಡೆದುಕೊಂಡಿದ್ದರು. 2003ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ಸರಕಾರ 2006ರಲ್ಲಿ ರದ್ದುಪಡಿಸಿತ್ತು. ಆದರೆ 2011ರಲ್ಲಿ ಸರಕಾರ ಪುನಃ 2003ರ ಅಧಿಸೂಚನೆ ಪ್ರಕಾರ ರಹದಾರಿ ಪರವಾನಗಿ ನವೀಕರಣಕ್ಕೆ ಅಧಿಸೂಚನೆ ಹೊರಡಿಸಿತ್ತು. ಇದರ ವಿರುದ್ಧ ವಾಯವ್ಯ ಸಾರಿಗೆ ಕೋರ್ಟ್‌ ಮೆಟ್ಟಿಲೇರಿತ್ತು. ಆರಂಭದಿಂದಲೂ ಬೇಂದ್ರೆ ಸಾರಿಗೆ ಏಳುಬೀಳುಗಳ ಮೂಲಕ ಮಹಾನಗರ ಜನತೆಗೆ ಸಾರಿಗೆ ಸೇವೆ ನೀಡುತ್ತಿದೆ. ಇದೀಗ ಸರಕಾರದ ಅಧಿಸೂಚನೆ ಪ್ರಕಾರ 18 ವರ್ಷಗಳ ಮಹಾನಗರ ಸಾರಿಗೆ ಸೇವೆ ಸ್ಥಗಿತಗೊಳ್ಳಲಿದೆ.

ಲಾಭದ ಮಾರ್ಗಗಳ ವಿತರಣೆ ಆರೋಪ

ಕರಾವಳಿ ಭಾಗದ ರಾಜಕೀಯ ಪ್ರಮುಖ ನಾಯಕರೊಬ್ಬರ ಒತ್ತಡದ ಮೂಲಕ ಹೆಚ್ಚಿನ ಸಾರಿಗೆ ಆದಾಯ ತರುವ ಮಾರ್ಗಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪಗಳಿವೆ. ಜನರ ಸೇವೆ, ಕಾರ್ಮಿಕ ಭವಿಷ್ಯದ ಕಾರಣ ನೀಡಿ ಉಳಿದಿರುವ ಬೇಂದ್ರೆ ಸಾರಿಗೆ ಲಾಭದಾಯಕ ಮಾರ್ಗಗಳ ಜೊತೆಗೆ ಗ್ರಾಮೀಣ ಸೇವೆ ನೀಡಬಹುದಾಗಿತ್ತು. ಸಮಗ್ರ ಕರ್ನಾಟಕ ಸಾರಿಗೆ ಯೋಜನೆಯ ಪ್ರಕಾರ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಖಾಸಗಿ ಪ್ರವರ್ತಕರಿಗೆ ಅವಕಾಶವಿಲ್ಲ. ಇದೊಂದು ಖಾಸಗೀಕರಣದ ಮೊದಲ ಹಂತ ಎನ್ನುವುದು ಸಾರಿಗೆ ಸಂಸ್ಥೆ ಅಧಿಕಾರಿಗಳ ಹಾಗೂ ಕಾರ್ಮಿಕ ಮುಖಂಡರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.