ಹಿಂದುಳಿದವರ ಆಶಾಕಿರಣ ಅಂಬೇಡ್ಕರ್ 


Team Udayavani, Apr 15, 2018, 4:02 PM IST

15-April-23.jpg

ಬಾಗಲಕೋಟೆ: ಸಂವಿಧಾನ ಬರುವ ಪೂರ್ವದಲ್ಲಿ ನಮ್ಮ ಜನತೆ ದೇವರ ಹಾಗೂ ಧರ್ಮ ಗ್ರಂಥಗಳ ಮೊರೆಗುತ್ತಿದ್ದು, ಆ ಸಮಯದಲ್ಲಿ ಅನೇಕ ಬಾರಿ ಸತ್ಯಕ್ಕೆ ಸೋಲಾದುದು ಉಂಟು. ಸಂವಿಧಾನ ರಚನೆಯಾದ ನಂತರ ಅಂಬೇಡ್ಕರ್‌ ಅವರು ತುಳಿತಕ್ಕೊಳಗಾದವರ ಆಶಾಕಿರಣವಾದರು ಎಂದು ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಂ ಹೇಳಿದರು.

ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶನಿವಾರ ಜಿ.ಪಂ ಸಭಾಭವನದಲ್ಲಿ ಹಮ್ಮಿಕೊಂಡ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 127ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ನಂತರ ಮಾತನಾಡಿದರು.

ಬುದ್ದ, ಬಸವ ಧರ್ಮ ಸಂಸ್ಥಾಪನೆ ಮಾಡಿದರೆ, ಅಂಬೇಡ್ಕರ್‌ ಸಂವಿಧಾನ ರಚಿಸಿ ಅವರ ಸರಿಸಮಾನರಾಗಿದ್ದು, ಇದು ಆಧುನಿಕ ಭಾರತದ ಧರ್ಮ ಗ್ರಂಥ ಎಂದರೆ ತಪ್ಪಾಗಲಾರದು ಎಂದರು.

ಸಂವಿಧಾನ ಸಮಗ್ರ ವಿಷಯಗಳ ನಿರ್ದೇಶನ ನೀಡುವ ಮಾರ್ಗಸೂಚಿಯಾಗಿದ್ದು ಇದರ ರಚನೆಯಲ್ಲಿ ಅಂಬೇಡ್ಕರ್‌ ಅವರಿಗಿದ್ದ ಪ್ರಭುತ್ವತೆ ಎತ್ತಿ ತೋರಿಸುತ್ತದೆ. ಅಂಬೇಡ್ಕರ್‌ ಒಬ್ಬ ಶ್ರೇಷ್ಠ ಅರ್ಥಶಾಸ್ತ್ರಜ್ಞರಾಗಿದ್ದು, ದೇಶ-ವಿದೇಶಗಳಲ್ಲಿಯ ಆಗು ಹೋಗುಗಳನ್ನು ಗಮನದಲ್ಲಿಟ್ಟುಕೊಂಡು ನಮಗೆ ಬೇಕಾಗುವಂತ ಸಂವಿಧಾನ ರಚಿಸಿದ್ದಾರೆ. ಅವರು ರಚಿಸಿದ ಸಂವಿಧಾನ ಹಿಂದಿನ, ಇಂದಿನ ಹಾಗೂ ಮುಂದಿನ ಜನಾಂಗಕ್ಕೆ ಮಾರ್ಗಸೂಚಿಯಾಗಿದೆ. 70 ವರ್ಷಗಳ ಹಿಂದೆ ರಚಿತವಾದ ಈ ಸಂವಿಧಾನ ಅದ್ಬುತವಾದ ನೆಲೆಗಟ್ಟನ್ನು ಹೊಂದಿದೆ ಎಂದರು.

ಪ್ರೊ.ಮಹಾಲಿಂಗ ಉಪನ್ಯಾಸ ನೀಡಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ, ಜಿ.ಪಂ ಸಿಇಒ ವಿಕಾಸ ಸುರಳಕರ, ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ಮುಂತಾದವರು ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಬಿ.ವಿ.ಚೆ„ತ್ರಾ ಸ್ವಾಗತಿಸಿದರು. ಬಿ.ಜಿ.ನಿಂಗಪ್ಪನವರ ನಿರೂಪಿಸಿದರು. ಕಾರ್ಯಕ್ರಮ ಪೂರ್ವದಲ್ಲಿ ಹಳೆಯ ಬಾಗಲಕೋಟೆಯಲ್ಲಿರುವ ಡಾ.ಬಿ.ಆರ್‌. ಅಂಬೇಡ್ಕರ ಅವರ ಪುತ್ಥಳಿಗೆ ಪುಷ್ಪ ಮಾಲಾರ್ಪಣೆ ಮಾಡಲಾಯಿತು. 

ಟಾಪ್ ನ್ಯೂಸ್

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.