ಜಗುಚಂದ್ರ ಸ್ಮರಣಾರ್ಥ ವಾರ್ಷಿಕ ಪ್ರಶಸ್ತಿ : ಡಾ|ಅಂಗಡಿ


Team Udayavani, May 21, 2018, 4:31 PM IST

21-may-21.jpg

ಧಾರವಾಡ: ರಂಗಕರ್ಮಿ ದಿ| ಜಗುಚಂದ್ರ ಕೂಡ್ಲ ಪುಣ್ಯ ಸ್ಮರಣೆ ಪ್ರಯುಕ್ತ ಪ್ರತಿವರ್ಷ ಏ. 12ರಂದು ರಂಗಭೂಮಿಯಲ್ಲಿ ಸಾಧನೆಗೈದವರನ್ನು ಗುರುತಿಸಿ, ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ಲಿಂಗರಾಜ ಅಂಗಡಿ ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ ಜಗುಚಂದ್ರ ಕೂಡ್ಲ ಅಭಿಮಾನಿ ಬಳಗದಿಂದ ನೀಡಿದ 70 ಸಾವಿರ ಮೊತ್ತದ ಡಿಡಿ ಸ್ವೀಕರಿಸಿ ಮಾತನಾಡಿದ ಅವರು, ಪ್ರಶಸ್ತಿ ಪ್ರದಾನ ಜೊತೆಗೆ ನಾಟಕ, ವಿಚಾರಗೋಷ್ಠಿ ಸೇರಿದಂತೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಸದ್ಯ ದತ್ತಿ ಹಣವನ್ನು ಬ್ಯಾಂಕ್‌ನಲ್ಲಿ ಇಡಲಾಗುವುದು. ಅದರಿಂದ ಬರುವ ಬಡ್ಡಿಯಿಂದ ಕೂಡ್ಲ ಅವರ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು. 

ಅಭಿನಯ ಭಾರತಿಯ ಅರವಿಂದ ಕುಲಕರ್ಣಿ ಮಾತನಾಡಿ, ಪ್ರತಿವರ್ಷ ಜಗುಚಂದ್ರ ಕೂಡ್ಲ ಅವರ ಜನ್ಮದಿನ ಜು. 28ರಂದು ನಾಟಕ ಪ್ರದರ್ಶನ ಕೈಗೊಳ್ಳಲಾಗುವುದು. ಅದರೊಟ್ಟಿಗೆ ರಂಗಭೂಮಿಯ ವಿವಿಧ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಲಹೆ ನೀಡಿದರು. ಜಾನಪದ ಕಲಾವಿದರಾದ ಬಸವಲಿಂಗಯ್ಯ ಹಿರೇಮಠ ಅವರು ತಮ್ಮ ಜಾನಪದ ಸಂಶೋಧನಾ ಕೇಂದ್ರದಿಂದ ಈ ಕಾರ್ಯಕ್ರಮಗಳಿಗೆ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು.

ಜಗುಚಂದ್ರ ಕೂಡ್ಲ ಅಭಿಮಾನಿಗಳ ಬಳಗದ ವತಿಯಿಂದ ಶಂಕರ ಕುಂಬಿ ಅವರು 70,000 ರೂ. ಡಿಡಿಯನ್ನು ಡಾ| ಲಿಂಗರಾಜ ಅಂಗಡಿ ಅವರಿಗೆ ನೀಡಿದರು. ವಿಶ್ವೇಶ್ವರಿ ಹಿರೇಮಠ, ಎಸ್‌.ಎಸ್‌. ದೊಡಮನಿ, ಕೆ.ಎಚ್‌. ನಾಯಕ, ಪ್ರಮೀಳಾ ಜಕ್ಕಣ್ಣವರ, ಲತಾ ಮುಳ್ಳೂರ, ಬಿ. ಮಾರುತಿ, ಕುಸುಮಾ ಹರಿಹರ, ಎಫ್‌.ಬಿ. ಕಣವಿ, ಬಿ.ಐ. ಈಳಿಗೇರ, ಬಸವರಾಜ ವಾಸನದ, ರಾಜಶೇಖರ ಹೊನ್ನಪ್ಪನವರ, ಪ್ರಭು ಹಂಚಿನಾಳ, ಅನಿತಾ ಮಹಾಜನಶೆಟ್ಟರ, ಚಂದ್ರಶೇಖರ ಕುಂಬಾರ, ಕೆ.ಎ. ದೊಡಮನಿ, ಪ್ರಕಾಶ ಅಂಗಡಿ, ಎಸ್‌.ಎನ್‌. ಅರಳಿಕಟ್ಟಿ ಇದ್ದರು. ಜಿಲ್ಲಾ ಕಸಾಪ ಕಾರ್ಯದರ್ಶಿ ಕೆ.ಎಸ್‌. ಕೌಜಲಗಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.