ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಲು ಕೆ.ರಘು ಸಲಹೆ


Team Udayavani, Jul 7, 2018, 5:04 PM IST

7-july-18.jpg

ಹುಬ್ಬಳ್ಳಿ: ಲೆಕ್ಕಪರಿಶೋಧಕರು ವೃತ್ತಿಯಲ್ಲಿ ನೂತನ ತಂತ್ರಜ್ಞಾನ ಅಳವಡಿಸಿಕೊಂಡರೆ ಮಾತ್ರ ಅವಕಾಶ ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯ ಮಾಜಿ ಅಧ್ಯಕ್ಷ ಕೆ.ರಘು ಹೇಳಿದರು. ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ ಹುಬ್ಬಳ್ಳಿ ಶಾಖೆಯ ಎರಡು ದಿನಗಳ ವಾರ್ಷಿಕ ಸಮ್ಮೇಳನ ‘ಜ್ಞಾನ ಸಿಂಧು’ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಲೆಕ್ಕಪರಿಶೋಧನೆ ವೃತ್ತಿಯ ಭವಿಷ್ಯ ಉಜ್ವಲವಾಗಿದೆ. ಅವಕಾಶ ಸದ್ಬಳಕೆಗೆ ಹೊಸ ತಂತ್ರಜ್ಞಾನ ಮುಖ್ಯವಾಗಿದೆ. ಲೆಕ್ಕಪರಿಶೋಧಕರು ಹೊಸ ತಂತ್ರಜ್ಞಾನಕ್ಕೆ ಸುಲಭವಾಗಿ ಹೊಂದಿಕೊಳ್ಳುವುದಿಲ್ಲ ಎಂಬ ದೂರಿದ್ದು, ನಾವು ಹೊಸತನಕ್ಕೆ ಒಗ್ಗಿಕೊಳ್ಳದಿದ್ದರೆ ಸ್ಪರ್ಧೆಯಲ್ಲಿ ಉಳಿಯಲು ಸಾಧ್ಯವಿಲ್ಲ. ಸರ್ವರ್‌ ಗಳಲ್ಲಿ ಎಲ್ಲ ಮಾಹಿತಿ ಸಂಗ್ರಹ ಹಳತಾಗಿದೆ. ಕ್ಲೌಡ್  ಅಕೌಂಟಿಂಗ್‌ ತಿಳಿಯುವುದು ಅತ್ಯಗತ್ಯ ಎಂದರು. ವಿಶ್ಲೇಷಣಾತ್ಮಕತೆಗೆ (ಅನಾಲಿಟಿಕ್ಸ್‌) ಅಗಾಧ ಬೇಡಿಕೆಯಿದ್ದು, ಅದನ್ನು ನಿರ್ಲಕ್ಷಿಸುವ ಮೂಲಕ ನಾವು ಹಲವಾರು ಅವಕಾಶ ಕಳೆದುಕೊಳ್ಳುತ್ತಿದ್ದೇವೆ. ಕೃತಕ ಬುದ್ಧಿಮತ್ತೆ ತಿಳಿಯುವುದು ಕೂಡಾ ಅಗತ್ಯವಾಗಿದೆ ಎಂದರು.

ಮುಂದಿನ ಕೆಲ ವರ್ಷಗಳಲ್ಲಿ ಇಂಟರ್‌ ನೆಟ್‌ ತಂತ್ರಜ್ಞಾನ ಹಳತಾಗಲಿದೆ. ಸದ್ಯ ಭವಿಷ್ಯದಲ್ಲಿ ಬ್ಲಾಕ್‌ ಚೈನ್‌ ತಂತ್ರಜ್ಞಾನ ಬರಲಿದೆ. ಮಾಹಿತಿ ಬ್ಲಾಕ್‌ಗಳಲ್ಲಿ ಸಂಗ್ರಹಗೊಳ್ಳಲಿದೆ. ಇದರಿಂದ ಸಮಯ ಉಳಿತಾಯ ಮಾಡಬಹುದಾಗಿದೆಯಲ್ಲದೇ ಸೈಬರ್‌ ದಾಳಿ ತಡೆಯುವ ದಿಸೆಯಲ್ಲಿ ಇದು ಪೂರಕವಾಗಿದೆ. ವೃತ್ತಿಯ ಗುಣಮಟ್ಟ ಹೆಚ್ಚಿಸುವಲ್ಲಿ ರೋಬೊಟಿಕ್ಸ್‌ ನೆರವಾಗಲಿದೆ ಎಂದರು.

ಐಸಿಎಐ ಮಾಜಿ ಅಧ್ಯಕ್ಷ ಸುನೀಲ್‌ ತಲಾಟಿ ಮಾತನಾಡಿ, ಜಿಎಸ್‌ಟಿ ಅನುಷ್ಠಾನಗೊಂಡು ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಲೆಕ್ಕಪರಿಶೋಧಕರು ತಮ್ಮ ಕಾರ್ಯವೈಖರಿಯನ್ನು ಪರಾಮರ್ಶಿಸಿಕೊಳ್ಳುವುದು ಅವಶ್ಯಕವಾಗಿದೆ. ದೇಶದಲ್ಲಿ 1,25,000 ಲೆಕ್ಕಪರಿಶೋಧಕರಿದ್ದು, ಬೇಡಿಕೆ ಹೆಚ್ಚಾಗುತ್ತಿದೆ ಎಂದರು. ರಿಯಲ್‌ ಎಸ್ಟೇಟ್‌ ಕ್ಷೇತ್ರಕ್ಕೆ ನಿಯಂತ್ರಣ ಕಾಯ್ದೆ ತಂದಿದ್ದರಿಂದ ಲೆಕ್ಕಪರಿಶೋಧಕರ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ. ಜಾಗತಿಕ ಮಟ್ಟದ ಅವಕಾಶ ಪಡೆಯುವ ದಿಸೆಯಲ್ಲಿ ನಾವು ಕಾರ್ಯೋನ್ಮುಖರಾಗಬೇಕೆಂದರು.

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಚೇರ್ಮನ್‌ ಎಸ್‌. ರವೀಂದ್ರನ್‌ ಮಾತನಾಡಿ, ಬ್ಯಾಂಕ್‌ಗಳ ಶ್ರೇಯೋಭಿವೃದ್ಧಿಯಲ್ಲಿ ಲೆಕ್ಕಪರಿಶೋಧಕರ ಪಾತ್ರ ಪ್ರಮುಖವಾಗಿದೆ. ಜಿಎಸ್‌ಟಿಯಿಂದಾಗಿ ಲೆಕ್ಕಪರಿಶೋಧಕರ ಅವಶ್ಯಕತೆ ಹೆಚ್ಚಾಗಿದೆ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉದ್ಯಮಿ ಬಸಂತಕುಮಾರ ಪಾಟೀಲ ಮಾತನಾಡಿ, ಹುಬ್ಬಳ್ಳಿಯ ಕೋರ್ಟ್‌ ವೃತ್ತದ ಸಮೀಪ ನಾನು ನಿರ್ಮಿಸುತ್ತಿರುವ ಮಾಲ್‌ನಲ್ಲಿ ಒಂದು ಸುಸಜ್ಜಿತ ಮಹಡಿಯನ್ನು ಲೆಕ್ಕಪರಿಶೋಧಕರಿಗಾಗಿ ಮೀಸಲಾಗಿಟ್ಟಿದ್ದು, ಲೆಕ್ಕಪರಿಶೋಧಕರು ಇಲ್ಲಿ ತಮ್ಮ ಕಚೇರಿ ಮಾಡಿಕೊಳ್ಳಬಹುದಾಗಿದೆ ಎಂದು ನುಡಿದರು. ರಾಘವೇಂದ್ರ ಜೋಶಿ, ಸುಭಾಸ ಪಾಟೀಲ, ಗುರುಮೂರ್ತಿ ಬಿ.ಎಂ, ವಿಘ್ನೇಶ್ವರ ಗಾಂವಕರ, ಎಸ್‌.ಡಿ.ಓಸ್ತವಾಲ್‌ ಮೊದಲಾದವರಿದ್ದರು.

ಬ್ಯಾಂಕ್‌ಗಳಲ್ಲಿ ಹಣಕಾಸು ಅವ್ಯವಹಾರಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪಿಎನ್‌ಬಿ, ಸತ್ಯಂ ಹಗರಣಗಳು ಇದಕ್ಕೆ ಉದಾಹರಣೆಗಳಾಗಿವೆ. ಇವುಗಳನ್ನು ತಡೆಯುವಲ್ಲಿ ಲೆಕ್ಕಪರಿಶೋಧಕರ ಪಾತ್ರ ಮುಖ್ಯವಾಗಿದೆ. ಲೆಕ್ಕಪತ್ರದಲ್ಲಿ ಅಪರಾ ತಪರಾ ತಡೆಯುವ ನಿಟ್ಟಿನಲ್ಲಿ ಲೆಕ್ಕಪರಿಶೋಧಕರು ಫ್ರಾಡ್‌ ಡಿಟೆಕ್ಷನ್‌ ವಿಷಯದಲ್ಲಿ ಪರಿಣಿತಿ ಹೊಂದುವುದು ಅವಶ್ಯ ಎಂದು ಐಸಿಎಐ ಮಾಜಿ ಅಧ್ಯಕ್ಷ ಕೆ.ರಘು ಹೇಳಿದರು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.