ಮಳೆ ಕಣ್ಣಾ ಮುಚ್ಚಾಲೆಗೆ ಆತಂಕ
Team Udayavani, Jun 24, 2018, 4:20 PM IST
ಬೆಳಗಾವಿ: ಮುಂಗಾರು ಮಳೆ ಆರಂಭವಾಗಿದ್ದರೂ ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಕಣ್ಣುಮುಚ್ಚಾಲೆ ಆಟ ನಡೆದಿದೆ.
ಇದರಿಂದ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದು ಬರುತ್ತಿಲ್ಲ. ಇದು ಕೃಷಿಕರಲ್ಲಿ ಚಿಂತೆ ಹೆಚ್ಚಲು
ಕಾರಣವಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಹಿಡಕಲ್ ಹಾಗೂ ಮಲಪ್ರಭಾ ಜಲಾಶಯಗಳಲ್ಲಿ ಹೆಚ್ಚಿನ ಪ್ರಮಾಣದ
ನೀರು ಸಂಗ್ರಹವಿದೆ. ಆದರೆ ಇನ್ನೂ ಆತಂಕ ದೂರವಾಗಿಲ್ಲ. ಕಳೆದ ಒಂದು ವಾರದಿಂದ ಮಳೆ ಮಾಯವಾಗಿರುವುದರಿಂದ ಎರಡೂ ಜಲಾಶಯಗಳ ಒಳಹರಿವಿನ ಪ್ರಮಾಣ ಸಾಕಷ್ಟು ಕಡಿಮೆಯಾಗಿದೆ.
ಒಟ್ಟು 2175 ಅಡಿ ಸಾಮರ್ಥ್ಯದ ಹಿಡಕಲ್ ಜಲಾಶಯದಲ್ಲಿ ಈಗ 2079 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 15 ಅಡಿಗಳಷ್ಟು ಹೆಚ್ಚು ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಆದರೆ ಜಲಾಶಯಕ್ಕೆ ಈಗ ಕೇವಲ 533 ಕ್ಯೂಸೆಕ್ ನೀರು ಹರಿದು ಬರುತ್ತಿರುವುದು ಸಹಜವಾಗಿಯೇ ಚಿಂತೆ ಹುಟ್ಟಿಸಿದೆ.
ಮಹಾರಾಷ್ಟ್ರದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಜಲಾಶಯಕ್ಕೆ ನೀರು ಬರುತ್ತಿಲ್ಲ. ಸಾಮಾನ್ಯವಾಗಿ ಈ ಅವಧಿಯಲ್ಲಿ 2000 ಕ್ಯೂಸೆಕ್ ನೀರು ಬರಬೇಕಿತ್ತು. ಆದರೆ ಈಗ 500 ಕ್ಯುಸೆಕ್ ಮಾತ್ರ ಬರುತ್ತಿದೆ. ಆದರಲ್ಲಿ 93 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಹಿಡಕಲ್ ಜಲಾಶಯಕ್ಕೆ ನೆರೆಯ ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶವೇ ಜಲಾನಯನ ಪ್ರದೇಶವಾಗಿದ್ದು, ಬರುವ ದಿನಗಳಲ್ಲಿ ಈ ಭಾಗದಲ್ಲಿ ಉತ್ತಮ ಮಳೆಯಾದರೆ ಜಲಾಶಯಕ್ಕೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರಲಿದೆ
ಎಂಬುದು ನೀರಾವರಿ ನಿಗಮದ ಅಧಿಕಾರಿಗಳ ಹೇಳಿಕೆ.
ಜಲಾಶಯಕ್ಕೆ ಈಗ 739 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಈ ಅವಧಿಗೆ ಯಾವುದೇ ಒಳಹರಿವು ಇರಲಿಲ್ಲ. ಬೆಳಗಾವಿ ನಗರಕ್ಕೆ ಕುಡಿಯುವ ನೀರು ಪೂರೈಸುವ ರಕ್ಕಸಕೊಪ್ಪ ಜಲಾಶಯದಲ್ಲಿ ಈಗ 2454.40 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದ ಸಾಮರ್ಥ್ಯ ಒಟ್ಟು 2476 ಅಡಿಗಳಷ್ಟಿದೆ. ಕಳೆದ ವರ್ಷ ಈ ಅವಧಿಗೆ ಜಲಾಶಯದಲ್ಲಿ 2447.40 ಅಡಿ ನೀರು ಸಂಗ್ರಹವಾಗಿತು.
ಇನ್ನು ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳ ಜೀವನಾಡಿಯಾಗಿರುವ ಮಲಪ್ರಭಾ ಜಲಾಶಯದ
ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಖಾನಾಪುರ ತಾಲೂಕಿನಲ್ಲಿ ಮಳೆ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಒಟ್ಟು 2079.50 ಅಡಿ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಈಗ 2039.80 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಜೂ.23 ರಂದು ಜಲಾಶಯದಲ್ಲಿ 2033.52 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಅಂದರೆ ಈಗ ಆರು ಅಡಿಗಳಷ್ಟು ಹೆಚ್ಚು ನೀರು ಸಂಗ್ರಹವಿದೆ. ಆದರೆ ಜಲಾಶಯ ಭರ್ತಿಯಾಗುವುದೇ ಇಲ್ಲವೆ ಎನ್ನುವ ಅನುಮಾನ ಕಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ