ಎಪಿಎಂಸಿ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ಮುಂದಕ್ಕೆ


Team Udayavani, Jul 5, 2020, 12:13 PM IST

ಎಪಿಎಂಸಿ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ಮುಂದಕ್ಕೆ

ಸಾಂದರ್ಭಿಕ ಚಿತ್ರ

ಧಾರವಾಡ: ಶನಿವಾರ ನಡೆಯಬೇಕಿದ್ದ ಸ್ಥಳೀಯ ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಕಾನೂನು ತೊಡಕಿನ ಕಾರಣ ಮುಂದೂಡಲಾಗಿದೆ.

ಎಪಿಎಂಸಿಯಲ್ಲಿ ಹಿನ್ನಡೆ ಆಗುವ ಸುಳಿವು ಪಡೆದ ಬಿಜೆಪಿಯವರು ಕಾಂಗ್ರೆಸ್‌ ಮುಖಂಡ ದೀಪಕ ಚಿಂಚೋರೆ ಅವರನ್ನು ಮತದಾನ ಪ್ರಕ್ರಿಯೆಯಿಂದ ಹೊರಗಿಟ್ಟಿದ್ದರು. ಶ್ರೀಮೃತ್ಯುಂಜಯ ಹತ್ತಿ ಸಂಸ್ಕರಣ ಸಂಘ ನಿಯಮಿತ ಧಾರವಾಡದ ಪ್ರತಿನಿಧಿಯಾಗಿ ಅವರು ಎಪಿಎಂಸಿ ಸದಸ್ಯರಾಗಿದ್ದರು. ಆದರೆ ಸಂಘದ ನೋಂದಣಿ ನವೀಕರಣಗೊಳ್ಳದಿರುವುದನ್ನು ಮುಂದಿಟ್ಟುಕೊಂಡು ಅವರ ಮತದಾನದ ಹಕ್ಕು ಮೊಟಕುಗೊಳಿಸಿದ್ದರು.

ಸಂಘದ ಮರು ನೋಂದಣಿ ಮಾಡಿಸಿ ಕಾನೂನುಬದ್ಧವಾಗಿ ಮತದಾನದ ಹಕ್ಕು ನೀಡುವಂತೆ ಕಾಂಗ್ರೆಸ್‌ ಮುಖಂಡ ಹಾಗೂ ಎಪಿಎಂಸಿ ಸದಸ್ಯ ದೀಪಕ ಚಿಂಚೋರೆ ಅವರು ಈ ಕುರಿತು ಹೈಕೋರ್ಟ್‌ ಮೆಟ್ಟಲು ಹತ್ತಿದ್ದರು. ಇದಲ್ಲದೇ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕು ಮೊಟಕುಗೊಳಿಸಿರುವ ಸರಕಾರದ ಕ್ರಮ ಪ್ರಶ್ನಿಸಿದ್ದರು.

ಈ ಸಂಬಂಧ ಪ್ರಕರಣದಲ್ಲಿ ರಾಜ್ಯ ಸರಕಾರ ಮಾರುಕಟ್ಟೆ ಕಾರ್ಯದರ್ಶಿ, ಕೃಷಿ ಮಾರಾಟ ಇಲಾಖೆ ನಿರ್ದೇಶಕರು, ಧಾರವಾಡ ಜಿಲ್ಲಾಧಿಕಾರಿ, ಧಾರವಾಡ ತಹಶೀಲ್ದಾರ್‌, ಧಾರವಾಡ ಎಪಿಎಂಸಿ ಕಾರ್ಯದರ್ಶಿಯನ್ನು ಪ್ರತಿವಾದಿಯಾಗಿಸಿದ್ದರು. ದೀಪಕ ಚಿಂಚೋರೆ ಅವರ ಅರ್ಜಿಯನ್ನು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ಅವರಿಗೆ ಚುನಾವಣೆಯಲ್ಲಿ ಭಾಗವಹಿಸಲು ಹಾಗೂ ಮತದಾನ ಮಾಡಲು ಅವಕಾಶ ಕಲ್ಪಿಸಿತ್ತು. ಅದರಂತೆ ಅವರು ಜೂ. 2ರಂದು ತಮ್ಮ ಹಕ್ಕು ಚಲಾಯಿಸಿದ್ದರು. ನಿಯಮಾವಳಿ ಪ್ರಕಾರ ಶನಿವಾರ ಧಾರವಾಡ ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ, ಧಾರವಾಡ ತಹಶೀಲ್ದಾರ್‌ ಸಂತೋಷ ಬಿರಾದಾರ ಅವರು ಮತ ಎಣಿಕೆ ಪ್ರಕ್ರಿಯೆ ಕೈಗೊಳ್ಳದೆ ಈ ಬಗ್ಗೆ ಹೈಕೋರ್ಟ್‌ ಮೂಲಕ ಕಾನೂನು ಸಲಹೆ ಪಡೆಯಲು ನಿರ್ಧರಿಸಿದ್ದಾರೆ. ಸೋಮವಾರ ಹೈಕೋರ್ಟ್‌ ಮೂಲಕ ಈ ಕುರಿತು ಸಲಹೆ ಪಡೆದು ನಂತರ ಅವರ ನಿರ್ದೇಶನದಂತೆ ಮುಂದಿನ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.