ಸರ್ಕಾರದ ಧನಸಹಾಯಕ್ಕಾಗಿ ಕಲಾವಿದರ ಪ್ರತಿಭಟನೆ
Team Udayavani, Jun 21, 2019, 3:29 PM IST
ಧಾರವಾಡ: ಸರ್ಕಾರ ಪ್ರೋತ್ಸಾಹ ಧನ ನೀಡುತ್ತಿಲ್ಲ ಎಂದು ಆರೋಪಿಸಿ ಕಲಾವಿದರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಧಾರವಾಡ: ಕಲಾ ಸೇವೆ ಮಾಡುತ್ತ ಬಂದಿರುವ ಅಧಿಕೃತ ಸಾಂಸ್ಕೃತಿಕ ಸಂಘಟನೆಗಳಿಗೆ ಹಾಗೂ ಕಲಾವಿದರಿಗೆ ಸರ್ಕಾರ 2018-19ನೇ ಸಾಲಿನ ಧನಸಹಾಯ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಜಿಲ್ಲೆಯ ಸಾಂಸ್ಕೃತಿಕ ಸಂಘಟನೆಗಳು ಹಾಗೂ ಕಲಾವಿದರ ಪುರೋಭಿವೃದ್ಧಿ ಒಕ್ಕೂಟದಿಂದ ಜಿಲ್ಲಾಕಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕಳೆದ ವರ್ಷ ಕಲಾವಿದರಿಗೆ ಒಂದಿಷ್ಟು ಧನ ಸಹಾಯ ಸಿಕ್ಕಿದ್ದು ಬಿಟ್ಟರೆ ಈ ಹಿಂದಿನ ವರ್ಷಗಳಲ್ಲೂ ಕಲಾವಿದರೂ ತಮ್ಮ ಕೈಯಿಂದಲೇ ಹಣ ಖರ್ಚು ಮಾಡಿ ಕಾರ್ಯಕ್ರಮಗಳನ್ನು ಮಾಡಿದ್ದರು. ಇದೀಗ ಮತ್ತದೇ ಚಾಳಿಯನ್ನು ಸರ್ಕಾರ ಮುಂದುವರಿಸಿದೆ. 2017-18ನೇ ಸಾಲಿನಲ್ಲಿ ಸಂಘ-ಸಂಸ್ಥೆಗಳಿಗೆ ಧನಸಹಾಯ ಹಾಗೂ ವೇಷಭೂಷಣ ವಾದ್ಯಪರಿಕರಗಳ ಖರೀದಿಗೆ ರಾಜ್ಯ ಸರಕಾರದ ಧನಸಹಾಯ ಯೋಜನೆಯಡಿ ಹಣ ಬಿಡುಗಡೆ ಮಾಡುತ್ತಿಲ್ಲ. ಇದು ಕಲಾವಿದರಿಗೆ ಮಾಡಿದ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕಕ್ಕೆ ಅನ್ಯಾಯ: ಕಲಾವಿದರು ಮತ್ತು ಕಲಾ ಸಂಘಟನೆಗಳಿಗೆ ನೀಡುವ ಅನುದಾನ ದಕ್ಷಿಣ ಕರ್ನಾಟಕ ಭಾಗದ ತಂಡ ಮತ್ತು ಸಂಘ-ಸಂಸ್ಥೆಗಳಿಗೆ ಅಧಿಕವಾಗಿ ಹೋಗುತ್ತಿದೆ. ಸರಕಾರ ಮಾತ್ರ ಉತ್ತರ ಕರ್ನಾಟಕ ಕಲಾವಿದರ ವಿಷಯದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ವಿಷಾದಿಸಿದರು.
2017-18ನೇ ಸಾಲಿನ ವಾರ್ಷಿಕ ಧನಸಹಾಯವನ್ನು ರಾಜ್ಯ ಸರಕಾರ ಕೂಡಲೇ ಬಿಡುಗಡೆ ಮಾಡಬೇಕು. ಒಂದು ವೇಳೆ ಬಿಡುಗಡೆ ಮಾಡದಿದ್ದರೆ ಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಡೋಲು-ಕೋಲಾಟದ ಪ್ರತಿಭಟನೆ: ಸರ್ಕಾರದ ವಿರುದ್ಧ ತಮ್ಮ ಸಾತ್ವಿಕ ಆಕ್ರೋಶ ವ್ಯಕ್ತಪಡಿಸಿದ ಕಲಾವಿದರು ತಮ್ಮ ಕಲಾ ವಾದ್ಯಗಳನ್ನೇ ಬಾರಿಸುತ್ತ ನಗರ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಸರ್ಕಾರದ ವಿರುದ್ಧ ಅದರಲ್ಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಡಿ.ಕೆ. ಶಿವಕುಮಾತ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಜಾನಪದ ವಿದ್ವಾಂಸರಾದ ವಿಶ್ವೇಶ್ವರಿ ಬಸಲಿಂಗಯ್ಯ ಹಿರೇಮಠ, ಆಯೇಷಾ ಸೈಯದ್, ಬಿ.ಎಂ. ಈಳಿಗೇರ, ಕಲ್ಲಪ್ಪ ಹಂಚಿನಮನಿ, ಫಕ್ಕೀರಪ್ಪ ಮಾದರ, ನಾಗರತ್ನ ಅಮ್ಮಿನಬಾವಿ, ಶಾಂತವ್ವ ಕಾರ್ಡಕೊಪ್ಪ, ಭೀಮಪ್ಪ ಹಡಪದ, ಬಸಮ್ಮ ಅಂಗಡಿ, ಮಹಾದೇವ ದೊಡ್ಡಮನಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ