ಕೋವಿಡ್ 19 ವಿರುದ್ಧದ ಸೇನಾನಿಗಳಿಗೆ ಕಲಾಕೃತಿ ಗೌರವ


Team Udayavani, Apr 25, 2020, 11:07 AM IST

ಕೋವಿಡ್ 19 ವಿರುದ್ಧದ ಸೇನಾನಿಗಳಿಗೆ ಕಲಾಕೃತಿ ಗೌರವ

ಹುಬ್ಬಳ್ಳಿ: ಕೋವಿಡ್ 19 ವಿರುದ್ಧ ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿ, ಪೌರಕಾರ್ಮಿಕರು, ಪೊಲೀಸ್‌ ಹಾಗೂ ಮಾಧ್ಯಮದವರಿಗೆ ಗೌರವ ಸಲ್ಲಿಸುವ ಹಿನ್ನೆಲೆಯಲ್ಲಿ ಇಲ್ಲಿನ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ಮರಳು ಶಿಲ್ಪ ಕಲಾಕೃತಿಯೊಂದನ್ನು ರಚಿಸಲಾಗಿದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್‌ ಶೆಟ್ಟರ ಅದನ್ನು ವೀಕ್ಷಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆರು ದಿನದ 24 ಗಂಟೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೋವಿಡ್ 19  ಸೋಂಕಿತರು ಹಾಗೂ ಪ್ರಾಥಮಿಕ ಹಂತದಲ್ಲಿ ಸಂಪರ್ಕಕ್ಕೆ ಬಂದವರ ವಿವರ ಕಲೆಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ. ವೈದ್ಯರು ಜೀವದ ಹಂಗು ತೊರೆದು ಕೋವಿಡ್‌-19 ರೋಗಿಗಳ ಚಿಕಿತ್ಸೆ ಮಾಡುತ್ತಿದ್ದಾರೆ. ಕಿಮ್ಸ್  ವೈದ್ಯರ ಪರಿಶ್ರಮದಿಂದಾಗಿ ಜಿಲ್ಲೆಯ ಇಬ್ಬರು ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದರು.

ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ಪಾಲಿಕೆ ಸಿಬ್ಬಂದಿ, ಅಧಿಕಾರಿಗಳು ಸಹ ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಕಾರ್ಯಕ್ಕೆ ಸರ್ಕಾರೇತರ ಸಂಸ್ಥೆಗಳು, ಸಂಘ ಸಂಸ್ಥೆಗಳು ಕೈ ಜೋಡಿಸಿವೆ. ಕೋವಿಡ್ 19  ವಿರುದ್ಧದ ಹೋರಾಟದಲ್ಲಿ ಮಾಧ್ಯಮಗಳು ಸಕ್ರಿಯವಾಗಿದ್ದು ಜನರಲ್ಲಿ ತಿಳಿವಳಿಕೆ ಮೂಡಿಸುವ ಕೆಲಸ ಮಾಡುತ್ತಿವೆ. ಇವರೆಲ್ಲರಿಗೂ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಕಲಾವಿದ ಮಂಜುನಾಥ ಹಿರೇಮಠ ಮರಳು ಶಿಲ್ಪ ರಚನೆ ಮಾಡಿದ್ದಾರೆ. ಕಲಾಕೃತಿ ಸುಂದರವಾಗಿ ಮೂಡಿ ಬಂದಿದೆ ಎಂದು ತಿಳಿಸಿದರು.

ಹಂತ ಹಂತವಾಗಿ ಸಡಿಲಿಕೆ: ಕೇಂದ್ರ ಸರಕಾರದ ನಿಯಮಗಳಂತೆ ಮೊದಲ ಹಂತದಲ್ಲಿ ಗ್ರಾಮೀಣ ಭಾಗದ ಹಾಗೂ ಅಗತ್ಯ ವಸ್ತು ತಯಾರಿಸುವ ಕೈಗಾರಿಕೆ ತೆರೆಯಲು ಅನುಮತಿ ನೀಡಲಾಗಿದೆ. ಇದರ ಪರಿಣಾಮ ಅವಲೋಕಿಸಿ ಹಂತ ಹಂತವಾಗಿ ಉದ್ದಿಮೆಗಳನ್ನು ತೆರೆಯಲು ಅವಕಾಶ ನೀಡಲಾಗುವುದು. ಹುಬ್ಬಳ್ಳಿಯ ಬಹುತೇಕ ಕಂಟೈನ್ಮೆಂಟ್‌ ಜೋನ್‌ ಹೊರತು ಪಡಿಸಿ ಬೇರೆ ಸ್ಥಳ ಹಾಗೂ ಧಾರವಾಡ ಬೇಲೂರಿನಲ್ಲಿ ಕೈಗಾರಿಕೆಗಳು ತೆರೆದು ಆರ್ಥಿಕ ಚಟುವಟಿಕೆಗಳು ಪಾರಂಭವಾಗಲಿವೆ ಎಂದು ತಿಳಿಸಿದರು.

ಶಾಸಕ ಪ್ರಸಾದ ಅಬ್ಬಯ್ಯ, ವಿಧಾನಪರಿಷತ್‌ ಸದಸ್ಯರಾದ ಶ್ರೀನಿವಾಸ ಮಾನೆ, ಪ್ರೊ| ಎಸ್‌.ವಿ. ಸಂಕನೂರ, ಜಿಲ್ಲಾಧಿಕಾರಿ ದೀಪಾ ಚೋಳನ್‌, ಮಹಾನಗರ ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಕಿಮ್ಸ್ ನಿರ್ದೇಶಕ ಡಾ| ರಾಮಲಿಂಗಪ್ಪ ಅಂಟರತಾನಿ, ಹುಬ್ಬಳ್ಳಿ ನಗರ ತಹಶೀಲ್ದಾರ ಶಶಿಧರ ಮಾಡ್ಯಾಳ, ಕಲಾವಿದ ಮಂಜುನಾಥ ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

 ಆರು ಅಡಿ ಎತ್ತರದ ಮರಳು ಕಲಾಕೃತಿ :  ಕಲಾವಿದ ಮಂಜುನಾಥ ಹಿರೇಮಠ ಮರಳು ಕಲಾಕೃತಿ ನಿರ್ಮಿಸಿದ್ದು, ಕೊವಿಡ್‌-19 ತುರ್ತು ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಸಲ್ಲಿಸಬೇಕು ಎನ್ನುವ ಕಾರಣಕ್ಕೆ ಜಿಲ್ಲಾಧಿಕಾರಿಗಳ ಅಭಿಪ್ರಾಯದ ಮೇರೆಗೆ ನಿರ್ಮಾಣವಾಗಿದೆ. ಹತ್ತು ಚದರಡಿ ವಿಸ್ತೀರ್ಣ ಹಾಗೂ ಆರು ಅಡಿ ಎತ್ತರವಿದೆ. ಮರಳು ಹಾಗೂ ನೈಸರ್ಗಿಕ ಬಣ್ಣಗಳಿಂದ ರಚಿಸಲಾಗಿದೆ. ಕಲಾವಿದ ಮಂಜುನಾಥ ಹಿರೇಮಠ ನಾಲ್ಕು ತಾಸುಗಳ ಶ್ರಮವಹಿಸಿ ಅಂತಿಮ ರೂಪ ನೀಡಿದ್ದಾರೆ. ಮಾಸ್ಕ್ ಧರಿಸಿದ ಪೊಲೀಸ್‌, ವೈದ್ಯರು, ಹಾಗೂ ಪೌರಕಾರ್ಮಿಕರು ಭಾರತದೊಳಗೆ ಕೋವಿಡ್ 19  ತನ್ನ ಕಬಂಧ ಬಾಹು ಚಾಚದಂತೆ ತಡೆಹಿಡಿದ್ದಾರೆ. ಜನರಿಗೆ ಕೋವಿಡ್ 19  ತಿಳಿವಳಿಕೆ ನೀಡುತ್ತಿರುವ ಮಾಧ್ಯಮಗಳ ಸೂಚಕವಾಗಿ ಸುದ್ದಿವಾಹಿನಿಗಳ ಮೈಕ್‌, ಹಾಗೂ ಲೇಖನಿಯ ಚಿತ್ರವಿದೆ. ಕಲಾಕೃತಿಯ ಅಡಿಯಲ್ಲಿ ” ಕೋವಿಡ್ 19  ಸೈನಿಕರನ್ನು ಗೌರವಿಸೋಣ’ ಎಂಬ ಉಕ್ತಿ ಇದೆ.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.