ಪ್ರತ್ಯೇಕ ರಾಜ್ಯವಾದರೆ 371(ಜೆ) ಸೌಲಭ್ಯಕ್ಕೆ ಧಕ್ಕೆಯಾಗದು
Team Udayavani, Aug 4, 2018, 5:09 PM IST
ಹಾವೇರಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಸ್ತಿತ್ವಕ್ಕೆ ಬಂದರೆ 371(ಜೆ) ಸೌಲಭ್ಯಕ್ಕೆ ಯಾವುದೇ ಧಕ್ಕೆಯಾಗದು ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೂತನ ಅಧ್ಯಕ್ಷ ವಿ.ಎಫ್. ಕಟ್ಟೆಗೌಡ್ರ ಹೇಳಿದರು.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿರುವ ವಕೀಲರ ಕೊಠಡಿಯಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹೈದ್ರಾಬಾದ್-ಕರ್ನಾಟಕ ಭಾಗದ ಜನರಲ್ಲಿ 371(ಜೆ) ತೊಂದರೆಯಾಗುತ್ತದೆ ಎಂಬ ತಪ್ಪು ಕಲ್ಪನೆ ಇದೆ. ಆದರೆ, 371(ಜೆ) ಪ್ರಕಾರ ಶೇ. 10 ಉದ್ಯೋಗ ಮೀಸಲಾತಿ ದೊರೆಯಲಿದೆ. ಜೊತೆಗೆ ಉಳಿದ ಶೇ. 90ರಷ್ಟು ಭಾಗದಲ್ಲಿ ಮೀಸಲಾತಿ ದೊರೆಯಲಿದೆ. ಅದಕ್ಕೆ ಯಾವ ತೊಂದರೆಯಾಗಲ್ಲ. ಬಗ್ಗೆ ಆ ಭಾಗದ ಜನರೊಂದಿಗೆ ಸಮಾಲೋಚನೆ ನಡೆಸುವೆ ಎಂದರು.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ವ್ಯವಸ್ಥಿತವಾಗಿ ಮಾಡಬೇಕು. ಅದಕ್ಕೆ ಮೊದಲು ಹೋರಾಟ ಸಮಿತಿಯನ್ನು ನೋಂದಣಿ ಮಾಡಿಸಬೇಕು. ಈ ಹಿಂದೆ ರಾಜ್ಯಾಧ್ಯಕ್ಷರಾಗಿದ್ದ ಕೊತಂಬರಿ ವಕೀಲರು ಹೋರಾಟ ಸಮಿತಿಯನ್ನು ನೋಂದಣಿ ಮಾಡಿಸದೆ, ಆ. 2ರಂದು ಬಂದ್ ಕರೆ ನೀಡಿದ್ದರು. ಬಂದ್ ಹಿಂದಿನ ದಿನ ಬಂದ್ ವಾಪಸ್ ಪಡೆಯುವ ಮೂಲಕ ಈ ಭಾಗದ ಜನರಿಗೆ ನೋವು ತರುವ ಕೆಲಸ ಮಾಡಿದರು. ಹೋರಾಟ ಸಂದರ್ಭದಲ್ಲಿಯೇ ರೈತರು, ವಿವಿಧ ಸಂಘಟನೆಗಳ ಮುಖಂಡರು ತಮ್ಮನ್ನು ಹೋರಾಟ ಸಮಿತಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರ ನಂಬಿಕೆ ಉಳಿಸಿಕೊಳ್ಳುವ ಪ್ರಯತ್ನ ಮಾಡುವೆ. ಹೋರಾಟ ಸಮಿತಿ ನೋಂದಣಿಯಾದ ಬಳಿಕ ಎಲ್ಲ 13 ಜಿಲ್ಲೆಗಳಿಗೆ ಸಂಚರಿಸಿ ಸಂಘಟನೆ ಹಾಗೂ ಜಾಗೃತಿ ಮೂಡಿಸುವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಮಾಜಿ ಅಧ್ಯಕ್ಷ ಎನ್.ಎಸ್. ಪಾಟೀಲ, ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಇಂದು ಅನಿವಾರ್ಯವಾಗಿದೆ. ಈ ಹೋರಾಟಕ್ಕೆ ಕಟ್ಟೇಗೌಡ್ರರಂಥ ಹಿರಿಯ ವಕೀಲರ ಮುಂದಾಳತ್ವ ವಹಿಸಿರುವುದು ಹೆಮ್ಮೆಯ ವಿಷಯವಾಗಿದೆ. ಈ ಹೋರಾಟ ಯಶಸ್ವಿಯಾಗಲು ಸಹಕಾರ ನೀಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಎಂ.ವಿ. ಕುಂಟೆ, ಸಿ.ಟಿ. ಜಾವಗಲ್, ಪಿ.ಆರ್. ಮುಂಜೋಜಿ, ಎನ್.ಬಿ. ಕಾಯಕದ, ಎ.ಎಚ್. ಕುಲಕರ್ಣಿ, ಎನ್.ಎಸ್. ಪ್ರಕಾಶ, ವಿ.ಎಲ್. ಅರ್ಕಾಚಾರಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…