![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ತಹಶೀಲ್ದಾರ್ ಮಾಡ್ಯಾಳ ವರ್ಗ: ಕಿಶನ್ ಕಲಾಲ ಅಧಿಕಾರ ಸ್ವೀಕಾರ
Team Udayavani, Apr 18, 2018, 4:19 PM IST
![18-April-18.jpg](https://www.udayavani.com/wp-content/uploads/2018/04/18/18-April-18.jpg)
ಹುಬ್ಬಳ್ಳಿ: ಉಕ ಜಿಲ್ಲೆಯಲ್ಲಿ ಪ್ರೊಬೇಷನರಿ ತಹಶೀಲ್ದಾರ್ರಾಗಿದ್ದ ಕಿಶನ್ ಕಲಾಲ ಅವರು ಹುಬ್ಬಳ್ಳಿ ತಹಶೀಲ್ದಾರ್ರಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ತಹಶೀಲ್ದಾರ್ರಾಗಿದ್ದ ಶಶಿಧರ ಮಾಡ್ಯಾಳ ಅವರನ್ನು ಬೇರೆ ಕಡೆಗೆ ವರ್ಗಾಯಿಸಲಾಗಿದೆ. ಶಶಿಧರ ಮಾಡ್ಯಾಳ 1 ವರ್ಷ 10 ತಿಂಗಳ ಕಾಲ ಹುಬ್ಬಳ್ಳಿ ತಹಶೀಲ್ದಾರ್ರಾಗಿ ಕಾರ್ಯನಿರ್ವಹಿಸಿದ್ದರು. ಚುನಾವಣೆ ಸಂದರ್ಭದಲ್ಲಿ ಅವರನ್ನು ವರ್ಗಾಯಿಸಲಾಗಿದ್ದು, ಯಾವುದೇ ಹುದ್ದೆ ತೋರಿಸಿಲ್ಲ. ಅಧಿಕಾರ ಹಸ್ತಾಂತರಿಸಿದ 24 ಗಂಟೆಯಲ್ಲಿ ಇಲಾಖೆಗೆ ವರದಿ ಮಾಡಿಕೊಳ್ಳಬೇಕು ಎನ್ನುವ ಸೂಚನೆ ಹಿನ್ನಲೆಯಲ್ಲಿ ಮಂಗಳವಾರವೇ ಬೆಂಗಳೂರಿಗೆ ತೆರಳಿ ವರದಿ ಮಾಡಿಕೊಂಡಿದ್ದಾರೆ.
ಕುಂದಗೋಳ ತಹಶೀಲ್ದಾರ್ ಮೆಳವಂಕಿ ವರ್ಗಾವಣೆ
ಕುಂದಗೋಳ: ಸ್ಥಳೀಯ ತಹಶೀಲ್ದಾರ್ ಬಸವರಾಜ ಮೆಳವಂಕಿ ಅವರನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದ್ದು, ಸಂಗಪ್ಪ ಬಾಡಗಿ ಅವರನ್ನು ತಹಶೀಲ್ದಾರ್ರನ್ನಾಗಿ ನೇಮಿಸಲಾಗಿದೆ. ಪಟ್ಟಣಕ್ಕೆ ಮಂಗಳವಾರ ಭೇಟಿ ನೀಡಿದ್ದ ಜಿಲ್ಲಾ ಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಅವರನ್ನು ಈ ಕುರಿತು ಪ್ರಶ್ನಿಸಿದಾಗ, ಚುನಾವಣಾ ಆಯೋಗದ ಆದೇಶ ಮೇರೆಗೆ ವರ್ಗಾವಣೆ ಮಾಡಲಾಗಿದೆ ಎಂದರು. ಕುಂದಗೋಳ ತಹಶೀಲ್ದಾರ್ ವಿರುದ್ಧ ಪಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಿರೇಸೂರ ಹಾಗೂ ಜೆಡಿಎಸ್ ತಾಲೂಕಾಧ್ಯಕ್ಷ ರುದ್ರಪ್ಪ ಗಾಣಗೇರ ಅವರು ಪ್ರತ್ಯೇಕವಾಗಿ ರಾಜ್ಯ ಮುಖ್ಯ ಚುನಾವಣಾಯುಕ್ತರಿಗೆ ಏ.9ರಂದು ಮನವಿ ಸಲ್ಲಿಸಿದ್ದರು. ಮೆಳವಂಕಿ ಏಕಪಕ್ಷೀಯವಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಚುನಾವಣಾ ಸಂದರ್ಭದಲ್ಲಿ ಅಹಿತಕರ ಘಟನೆ ಆಗುವ ಸಾಧ್ಯತೆ ಇದ್ದು, ಕೂಡಲೇ ಅವರನ್ನು ವರ್ಗಾಯಿಸದಿದ್ದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ಮನವಿಯಲ್ಲಿ ತಿಳಿಸಿದ್ದನ್ನು ಇಲ್ಲಿ ಉಲ್ಲೇಖೀಸಬಹುದು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.