ಕುಸಿದುಬಿದ್ದು ನೂಲ್ವಿ ಗ್ರಾ.ಪಂ. ಸಹಾಯಕ ಚುನಾವಣಾಧಿಕಾರಿ ನಿಧನ
Team Udayavani, Dec 15, 2020, 3:52 PM IST
ಹುಬ್ಬಳ್ಳಿ: ತಾಲೂಕನ ನೂಲ್ವಿ ಗ್ರಾಮ ಪಂಚಾಯಿತಿ ಸಹಾಯಕ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್.ಹೆಚ್.ರಾಠೋಡ್ ನಿಧನರಾಗಿದ್ದಾರೆ.
ಮೃತ ಆರ್.ಎಚ.ರಾಠೋಡ ಇಲ್ಲಿನ ಆನಂದ ನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನೂಲ್ವಿ ಗ್ರಾ.ಪಂ. ಸಹಾಯಕ ಚುನಾವಣೆ ಅಧಿಕಾರಿಯಾಗಿ ನೇಮಿಸಲಾಗಿತ್ತು. ಇಂದು ಬೆಳಿಗ್ಗೆ 10 ಗಂಟೆಗೆ ಚುನಾವಣೆ ಕರ್ತವ್ಯಕ್ಕೆ ತೆರಳುವ ವೇಳೆ ಉಣಕಲ್ ಬಸ್ ನಿಲ್ದಾಣದಲ್ಲಿ ಮೂರ್ಛೆ ಹೋಗಿ ಕುಸಿದು ಬಿದ್ದಿದ್ದರು. ನಂತರ ಕಿಮ್ಸ್ ಆಸ್ಪತ್ರೆ ಸಾಗಿಸುವ ದಾರಿ ಮಧ್ಯದಲ್ಲಿಯೇ ಅಸುನೀಗಿದ್ದಾರೆ.
ಇದನ್ನೂ ಓದಿ:ಗ್ರಾಪಂ ಚುನಾವಣೆ : ಅವಿರೋಧಕ್ಕಿಲ್ಲ ಒಲವು, ಜಿದ್ದಾಜಿದ್ದಿ ಛಲವು
ನೂಲ್ವಿ ಗ್ರಾ.ಪಂ.ಚುನಾವಣೆ ಅಧಿಕಾರಿ ಉಪನ್ಯಾಸಕ ಅಶೋಕ ಎಸ್.ಗಡಾದ ಈ ಕುರಿತು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಅವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದ್ದಾರೆ. ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ ಹಾಗೂ ನಗರ ತಹಶೀಲ್ದಾರ ಶಶಿಧರ ಮಾಡ್ಯಳ ಅವರು ಕಿಮ್ಸ್ ಆಸ್ಪತ್ರೆಗೆ ತೆರಳಿ ಮೃತರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.
ಚುನಾವಣೆ ತುರ್ತು ಕಾರ್ಯದ ನಿಮಿತ್ತ ದೈಹಿಕ ಶಿಕ್ಷಕ ರಾಜೇಸಾಬ ನದಾಫ ಅವರನ್ನು ಸಹಾಯಕ ಚುನಾವಣಾ ಅಧಿಕಾರಿಯಾಗಿ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್