ಅಧಿಕಾರ ಮೋಹದ ಮೈತ್ರಿ ಜನಹಿತ ಶತ್ರು


Team Udayavani, May 21, 2019, 12:53 PM IST

hub-4

ಧಾರವಾಡ: ಜನಹಿತಕ್ಕಾಗಿ ಮೈತ್ರಿ ಸರಕಾರ ಬಂದರೆ ಅದರಿಂದ ಅಭಿವೃದ್ಧಿ ಸಾಧ್ಯವೇ ಹೊರತು ಬರೀ ಅಧಿಕಾರಕ್ಕಾಗಿ ಅಥವಾ ಒಂದು ಪಕ್ಷಕ್ಕೆ ಅಧಿಕಾರ ನೀಡದಂತೆ ಮಾಡುವುದಕ್ಕಾಗಿ ಸಮ್ಮಿಶ್ರ ಸರಕಾರ ಬಂದರೆ ಅದರಿಂದ ಅಭಿವೃದ್ಧಿ ಅಸಾಧ್ಯ ಎಂದು ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಡಾ| ಡಿ.ವಿ.ಗುರುಪ್ರಸಾದ ಹೇಳಿದರು.

ನಗರದ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯದಲ್ಲಿ ಜಿ.ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್‌ ವತಿಯಿಂದ ಹಮ್ಮಿಕೊಂಡಿದ್ದ ‘ಓದು: ಸಂವಾದ’ ಕಾರ್ಯಕ್ರಮದಲ್ಲಿ ‘ಗೂಢಚರ್ಯೆಯ ಆ ದಿನಗಳು’ ಎಂಬ ತಮ್ಮ ಹೊಸ ಪುಸ್ತಕ ಕುರಿತು ಅವರು ಮಾತನಾಡಿದರು.

ಸಮಬಲ ಹಾಗೂ ಸಮ ಚಿಂತನೆ ಇದ್ದಾಗ ಸಮ್ಮಿಶ್ರ ಸರ್ಕಾರದಿಂದ ಅತ್ಯುತ್ತಮ ಅಭಿವೃದ್ಧಿ ಹಾಗೂ ನಿರೀಕ್ಷೆಗಳನ್ನು ಕಾಣಬಹುದು. ಆದರೆ ಅಧಿಕಾರ ಮೋಹದ ಸಮ್ಮಿಶ್ರ ಸರಕಾರದಲ್ಲಿ ಆಡಳಿತ ಕುಸಿತ ಕಂಡಿದ್ದೇ ಜಾಸ್ತಿ. ಹೀಗಾಗಿ ಅಭಿವೃದ್ಧಿಯ ದೃಷ್ಟಿಯಿಂದ ಸಮ್ಮಿಶ್ರ ಸರಕಾರಕ್ಕಿಂತ ಏಕಪಕ್ಷೀಯ ಆಡಳಿತವೇ ಹಿತಕರ ಎಂಬುದು ನನ್ನ ಅನುಭವದ ಮಾತು ಎಂದರು.

ಗುಪ್ತಚರ ಇಲಾಖೆ ಕಾರ್ಯವೈಖರಿ ಬಗ್ಗೆ ಜನರಿಗೆ ತಿಳಿಸಿ ಕೊಡಬೇಕೆಂಬ ಉದ್ದೇಶದಿಂದ ಗೂಢಚರ್ಯೆಯ ಆ ದಿನಗಳು ಎಂಬ ಪುಸ್ತಕ ಬರೆದಿದ್ದೇನೆ. ಆದರೆ ಈ ಪುಸ್ತಕದಲ್ಲಿ ಗುಪ್ತಚರ ಇಲಾಖೆಯ ಯಾವುದೇ ಗುಪ್ತ ಹಾಗೂ ಸೂಕ್ಷ್ಮ ಮಾಹಿತಿಗಳನ್ನು ಹೊರ ಹಾಕಿಲ್ಲ. ಬದಲಾಗಿ ಸಾರ್ವಜನಿಕವಾಗಿ ಬಹಿರಂಗ ಇರುವ ವಿಷಯದಲ್ಲಿಯೇ ನಾನು ಕಂಡಂತಹ ವಿಷಯಗಳನ್ನು ಜನರಿಗೆ ತಿಳಿಸಿ ಕೊಡುವ ಪ್ರಯತ್ನ ಮಾಡಿದ್ದೇನೆ ಎಂದು ತಿಳಿಸಿದರು.

ಕೆಲವೊಂದಿಷ್ಟು ಸಂದರ್ಭಗಳಲ್ಲಿ ಸಿಎಂಗಳಿಗೆ ಉತ್ತಮ ಸಲಹೆ-ಸೂಚನೆ ನೀಡಿದರೂ ಅವರು ಗಂಭೀರವಾಗಿ ಪರಿಗಣಿಸುವುದಿಲ್ಲ. ಆದರೆ, ಎಸ್‌.ಎಂ. ಕೃಷ್ಣ ಅವರು ಕರೀಂಲಾಲ್ ತೆಲಗಿ ಪ್ರಕರಣವನ್ನು ಸಿಬಿಐಗೆ ನೀಡಲು ತಾವು ಹೇಳಿದ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿ ಅದೇ ರೀತಿ ಮಾಡಿದರು. ಈಗಿನ ಗುಪ್ತಚರ ದಳದ ಸಮೀಕ್ಷಾ ವರದಿ ಸೇರಿದಂತೆ ಚುನಾವಣಾ ಸಮೀಕ್ಷಾ ವರದಿಗಳು ಬಹುತೇಕ ವಿಫಲಗೊಳ್ಳುತ್ತಿವೆ. ಇದಕ್ಕೆ ಕಾರಣ ಮತದಾರ ತನ್ನ ನಿಜ ಗುಟ್ಟು ಬಿಟ್ಟು ಕೊಡದೇ ಇರುವುದು ಕಾರಣವಾಗಿದೆ ಎಂದರು.

ಗುಪ್ತಚರ ದಳದ ಮುಖ್ಯಸ್ಥರಾಗಿ ಕರ್ನಾಟಕದ ಮೂವರು ಮುಖ್ಯಮಂತ್ರಿಗಳ ಅವಧಿಯಲ್ಲಿ ನಿರ್ವಹಿಸಿದ ಅನೇಕ ಕಾರ್ಯಗಳ ಕುತೂಹಲಕಾರಿ ಅಂಶಗಳನ್ನು ಸಭೆಯಲ್ಲಿ ತೆರೆದಿಟ್ಟ ಡಾ| ಡಿ.ವಿ. ಗುರುಪ್ರಸಾದ ಅವರೊಂದಿಗೆ ಕವಿವಿ ಎಚ್ಆರ್‌ಡಿಸಿ ಮುಖ್ಯಸ್ಥ ಡಾ| ಹರೀಶ ರಾಮಸ್ವಾಮಿ ಹಾಗೂ ನಿವೃತ್ತ ಐಜಿಪಿ ಗೋಪಾಲ ಹೊಸೂರು ಸಂವಾದ ನಡೆಸಿದರು.

ರಮಾಕಾಂತ ಜೋಶಿ, ಡಾ| ಹ.ವೆಂ. ಕಾಖಂಡಕಿ ಸೇರಿದಂತೆ ಹಲವರು ಇದ್ದರು.

ಗುಂಡೂರಾವ್‌ ಸೋಲಿನ ಮಾಹಿತಿ

ಟಿವಿ ಮಾಧ್ಯಮ ವಿರಳದ ಆ ಸಮಯದಲ್ಲಿ ಸಮೀಕ್ಷೆ ಮಾಡುವ ಯಾವ ಸಂಸ್ಥೆಗಳೂ ಇರಲಿಲ್ಲ. ಆಗ ಚುನಾವಣೆಗಳಲ್ಲಿ ಯಾರಿಗೆ ಸೋಲು-ಯಾರಿಗೆ ಗೆಲುವು ಎಂಬುದು ಗುಪ್ತಚರ ದಳದ ಸಮೀಕ್ಷೆಯೇ ಅಂತಿಮ. ಗುಂಡೂರಾವ್‌ ಅವರು ಸೋಮವಾರಪೇಟೆ ಹಾಗೂ ಚಿತ್ತಾಪುರದಲ್ಲಿ ಎರಡೂ ಕ್ಷೇತ್ರಗಳಲ್ಲಿ ನಿಲ್ಲುವ ಮನಸ್ಸು ಮಾಡಿದ್ದರು. ಎಲ್ಲಿ ಜನರು ತಪ್ಪು ತಿಳಿಯುತ್ತಾರೆಂದು ಒಂದೇ ಕ್ಷೇತ್ರದಲ್ಲಿ ಚುನಾವಣೆ ಎದುರಿಸಿದರು. ಆಗ ತಮ್ಮ ಮಾಹಿತಿಯಂತೆ ಅವರಿಗೆ ಸೋಲಿತ್ತು. ಇದನ್ನು ಅವರಿಗೆ ತಿಳಿಸಿದ್ದರೂ ಅವರು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಹೀಗಾಗಿ ಸೋಲು ಕಾಣಬೇಕಾಯಿತು ಎಂದು ಡಾ| ಡಿ.ವಿ.ಗುರುಪ್ರಸಾದ ಮೆಲುಕು ಹಾಕಿದರು.

ಎಳೆಎಳೆಯಾಗಿ ಬಿಚ್ಚಿಟ್ಟ ವಿಷಯಗಳು

ಗುಪ್ತಚರದ ಆರಂಭಿಕ ದಿನಗಳು, ಎಸ್‌.ಎಂ. ಕೃಷ್ಣ ಅವರ ವ್ಯಕ್ತಿತ್ವ, ಏಕಕಾಲದ ಚುನಾವಣೆಯಿಂದ ಕಾಂಗ್ರೆಸ್‌ ಕಂಡ ಮುಖಭಂಗ, ಮುಖ್ಯಮಂತ್ರಿಯಾಗಿ ಧರ್ಮಸಿಂಗ್‌, ಧಾರವಾಡದ ಕೃಷಿ ವಿವಿ ಅತಿಥಿ ಗೃಹವನ್ನೇ ಜೈಲಾಗಿ ಪರಿವರ್ತನೆ ಮಾಡಿಕೊಂಡ ಉಮಾಭಾರತಿ ಪ್ರಕರಣ, ರಾಜಕೀಯ ಸವಾಲುಗಳು, ಆಂಧ್ರದ ಗಡಿಯಿಂದ ಮಲೆನಾಡಿಗೆ ಪಸರಿಸಿದ ನಕ್ಸಲ್ ಸಮಸ್ಯೆ, ನಕ್ಸಲ್ ಮುಖಂಡ ಸಾಕೇತ್‌ ರಾಜನ್‌ ಹತ್ಯೆ, ಸಿದ್ದರಾಮಯ್ಯ ಅವರ ಅಹಿಂದ ಚಟುವಟಿಕೆಗಳು, ಅನಿಶ್ಚಿತತೆಯ ರಾಜಕೀಯ ಹಾಗೂ ಭದ್ರತಾ ವ್ಯವಸ್ಥೆಗಳ ಅನುಭವಗಳ ಕುರಿತು ಗುರುಪ್ರಸಾದ ಅವರು ಎಳೆಎಳೆಯಾಗಿ ಬಿಚ್ಚಿಟ್ಟರು.

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.