ಸ್ವಯಂ ಚಾಲಿತ ಸ್ಯಾನಿಟೈಸರ್ ಯಂತ್ರ ಆವಿಷ್ಕಾರ
Team Udayavani, Apr 25, 2020, 11:26 AM IST
ಹುಬ್ಬಳ್ಳಿ: ಕೋವಿಡ್ 19 ಸೋಂಕು ಹರಡದಂತೆ ಮುನ್ನೆಚ್ಚರಿಕೆಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಇಲ್ಲಿನ ಕೆಎಲ್ಇ ಎಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೆನ್ಸ್ರ್ ಆಧಾರಿತ ಸ್ಯಾನಿಟೈಸರ್ ಯಂತ್ರ ಸಿದ್ಧಪಡಿಸಿದ್ದು, ಕಿಮ್ಸ್ ಆಸ್ಪತ್ರೆಗೆ ಒಂದು ಯಂತ್ರ ನೀಡಲಾಗಿದೆ.
ಸ್ಯಾನಿಟೈಸರ್ ಬಳಕೆ ಸಾಮೂಹಿಕವಾಗಿ ಇರುವ ಕಡೆಗಳಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚು. ಈ ಕಾರಣದಿಂದ ವಿದ್ಯಾರ್ಥಿಗಳು ಸ್ವಯಂಚಾಲಿತ ಯಂತ್ರ ಅಭಿವೃದ್ಧಿಪಡಿಸಿದ್ದಾರೆ. ಕಚೇರಿ, ಆಸ್ಪತ್ರೆ, ಕೈಗಾರಿಕೆಗಳು, ಹೋಟೆಲ್, ಸಮುದಾಯ ಭವನ ಸೇರಿದಂತೆ ಹೆಚ್ಚು ಜನರಿರುವ ಕಡೆಗಳಲ್ಲಿ ಇದು ಬಳಕೆಗೆ ಯೋಗ್ಯವಾಗಿದೆ. ಇನ್ನು ಪಿಪಿಇ ಕಿಟ್ ಧರಿಸಿರುವ ಸಿಬ್ಬಂದಿ ಬಾಟಲ್ನಲ್ಲಿರುವ ಸ್ಯಾನಿಟೈಸರ್ ಬಳಸಲು ಸಾಧ್ಯವಾಗದ ಕಾರಣ ಈ ಯಂತ್ರ ಸಹಕಾರಿಯಾಗಲಿದೆ ಎಂಬುದು ವಿದ್ಯಾರ್ಥಿಗಳ ಅಭಿಪ್ರಾಯ.
ವಿದ್ಯಾರ್ಥಿಗಳಾದ ವಿ.ಆರ್.ಕಾರ್ತಿಕ್, ಜಿ. ಅಭಿಲಾಷ್, ವಿನಾಯಕ, ಪ್ರವೀಣ, ಸಂತೋಷ್, ಕೆ.ಅಭಿಲಾಶ ಈ ಸ್ವಯಂಚಾಲಿತ ಯಂತ್ರ ಅಭಿವೃದ್ಧಿಪಡಿಸಿದ್ದಾರೆ. ಮೆಕಾನಿಕಲ್ ವಿಭಾಗದ ಪ್ರಾಧ್ಯಾಪಕ ರವಿ ಗುತ್ತಲ ಹಾಗೂ ಕಿಮ್ಸ್ ವೈದ್ಯ ಎಸ್.ವಿ.ಮುಲ್ಕಿಪಾಟೀಲ ಮಾಗದರ್ಶನ ನೀಡಿದ್ದರು.
ವಿದ್ಯಾರ್ಥಿಗಳು ತಯಾರಿಸಿರುವ ಈ ಯಂತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ವೀಕ್ಷಿಸಿದರು. ವಿದ್ಯಾರ್ಥಿಗಳ ಈ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಿಮ್ಸ್ ವೈದ್ಯರಿಗೆ ನೆರವಾಗಲಿ ಎನ್ನುವ ಕಾರಣಕ್ಕೆ ನಿರ್ದೇಶಕ ಡಾ| ರಾಮಲಿಂಗಪ್ಪ ಅಂಟರತಾನಿ ಅವರಿಗೆ ವಿದ್ಯಾರ್ಥಿಗಳು ಒಂದು ಯಂತ್ರ ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್