ಆಟೋರಿಕ್ಷಾ ದರ ಪರಿಷ್ಕರಣೆ


Team Udayavani, Dec 25, 2018, 4:56 PM IST

25-december-14.gif

ಧಾರವಾಡ: ಧಾರವಾಡ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಅಧ್ಯಕ್ಷರಾಗಿರುವ ಡಿಸಿ ದೀಪಾ ಚೋಳನ್‌ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ನಿರ್ಧರಿಸಿರುವಂತೆ ಆಟೋರಿಕ್ಷಾಗಳ ಫೇರ್‌ ಮೀಟರ್‌ ದರವನ್ನು ಪರಿಷ್ಕರಿಸಲಾಗಿದೆ. ಹುಬ್ಬಳ್ಳಿ, ಧಾರವಾಡ ಅವಳಿ ನಗರದ ಆಟೋರಿಕ್ಷಾ ಚಾಲಕರ ಹಾಗೂ ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಆಟೋರಿಕ್ಷಾ ಫೇರ್‌ ಮೀಟರ್‌ ದರಗಳನ್ನು ಪರಿಷ್ಕರಿಸುವಂತೆ ಹಾಗೂ ಆಟೋರಿಕ್ಷಾ ರಹದಾರಿ ನೀಡುವುದನ್ನು ನಿರ್ಬಂಧಿಸುವಂತೆ ಸಲ್ಲಿಸಿರುವ ಮನವಿಯನ್ನು ಪರಿಶೀಲಿಸಲಾಗಿದೆ.

ಆಟೋರಿಕ್ಷಾಗಳ ದರ, ಕಾಲಕಾಲಕ್ಕೆ ಪೆಟ್ರೋಲ್‌ ಮತ್ತು ಎಲ್‌.ಪಿ.ಜಿ. ದರಗಳಲ್ಲಿನ ಏರಿಕೆ, ರಾಜ್ಯದ ಇತರೆ ಪ್ರಾಧಿಕಾರಗಳಲ್ಲಿ ನಿಗಪಡಿಸಿರುವ ದರಗಳ ಅಂಕಿ-ಅಂಶಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಈ ಸಭೆಯಲ್ಲಿ ಚರ್ಚಿಸಿ, ಪ್ರಸ್ತುತ ಪೆಟ್ರೋಲ್‌, ಎಲ್‌.ಪಿ.ಜಿ ಇಂಧನಗಳ ಬೆಲೆ ಏರಿಕೆ, ಬಿಡಿಭಾಗಗಳ ಬೆಲೆ ಏರಿಕೆ ಹಾಗೂ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ಪರಿಗಣಿಸಿ 2019ರ ಜನವರಿ 01 ರಿಂದ ಜಾರಿಗೆ ಬರುವಂತೆ ಫೇರ್‌ ಮೀಟರ್‌ ದರ ಪರಿಷ್ಕರಿಸಲಾಗಿದೆ. ನಿಗದಿಪಡಿಸಿರುವ ದರಗಳನ್ವಯ ಬಾಡಿಗೆ ಪಡೆಯತಕ್ಕದ್ದು. ನಿಗದಿತ ದರಗಳನ್ವಯ ಬಾಡಿಗೆ ಪಡೆಯದೇ ಇರುವ ಆಟೋರಿಕ್ಷಾಗಳ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಡಿಸಿ ದೀಪಾ ಚೋಳನ್‌ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ಪರವಾನಗಿ ನಿರ್ಬಂಧ: ಅವಳಿನಗರದಲ್ಲಿ ಆಟೋರಿಕ್ಷಾ ವಾಹನಗಳ ಸಂಚಾರವು ಅಧಿಕವಾಗಿದ್ದು, ಆಟೋರಿಕ್ಷಾ ಪಾರ್ಕಿಂಗ್‌ ಗೆ ಸ್ಥಳಾವಕಾಶ ಇಲ್ಲದಿರುವುದರಿಂದ ಹಾಗೂ ಅನಧಿಕೃತ ಆಟೋರಿಕ್ಷಾಗಳ ಸಂಚಾರ ನಿರ್ಬಂಧಿಸುವ ದಿಶೆಯಲ್ಲಿ ಹೊಸದಾಗಿ ಆಟೋರಿಕ್ಷಾಗಳಿಗೆ ಪರವಾನಗಿ ನೀಡುವುದನ್ನು (ಸರ್ಕಾರದ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ವಿತರಿಸಲಾಗುವ ಆಟೋರಿಕ್ಷಾಗಳು ಹಾಗೂ ಬ್ಯಾಟರಿ ಚಾಲಿತ ಗ್ರೀನ್‌ ಆಟೋರಿಕ್ಷಾಗಳನ್ನು ಹೊರತು ಪಡಿಸಿ) ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಆಟೋರಿಕ್ಷಾಗಳಿಗೆ ಪರವಾನಗಿ ನೀಡುವುದನ್ನು ನಿರ್ಬಂಧಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಕಚೇರಿ ಸಂಪರ್ಕಿಸುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಕಾರ್ಯದರ್ಶಿ ಹಾಗೂ ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ರವೀಂದ್ರ ವಿ.ಕವಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.