ಆಟೋರಿಕ್ಷಾ ಬಾಡಿಗೆ ವಿಚಾರ ಕೊಲೆಯಲ್ಲಿ ಅಂತ್ಯ
Team Udayavani, Sep 28, 2021, 5:40 PM IST
ಹುಬ್ಬಳ್ಳಿ: ಆಟೋರಿಕ್ಷಾ ಬಾಡಿಗೆ ಸರಿಯಾಗಿ ನೀಡುತ್ತಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ರವಿವಾರ ತಡರಾತ್ರಿ ನಡೆದಿದೆ.
ಹಳೇಹುಬ್ಬಳ್ಳಿ ನೇಕಾರನಗರ ಚವ್ಹಾಣ ಪ್ಲಾಟ್ನ ಲೋಕೇಶ ಮಹದೇವಪ್ಪ ಕಲಾಲ (24) ಕೊಲೆಯಾಗಿದ್ದಾನೆ. ಈತ ಮಾರುತಿ ಎಂಬುವರ ಆಟೋರಿಕ್ಷಾವನ್ನು ದಿನಕ್ಕೆ 200ರೂ.ದಂತೆ ಬಾಡಿಗೆ ಪಡೆದುಕೊಂಡು ಇನ್ನೊಬ್ಬರಿಗೆ ಕೊಟ್ಟಿದ್ದನಂತೆ. ಜೊತೆಗೆ ಎರಡು ದಿನಗಳಿಂದ ಆಟೋ ರಿಕ್ಷಾ ಬಾಡಿಗೆಯನ್ನು ಸರಿಯಾಗಿ ಕೊಟ್ಟಿರಲಿಲ್ಲವಂತೆ. ಇದೇ ಕಾರಣಕ್ಕೆ ಸಿಟ್ಟಾದ ಮಾರುತಿ ತನ್ನ ಸ್ನೇಹಿತರಾದ ಪ್ರಶಾಂತ, ರಾಜುನೊಂದಿಗೆ ಲೋಕೇಶ ಮನೆಗೆ ನುಗ್ಗಿ ಜಗಳ ತೆಗೆದಿದ್ದಾನೆ. ಅದು ವಿಕೋಪಕ್ಕೆ ಹೋದಾಗ ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಲೋಕೇಶ ರಾತ್ರಿ ಮನೆಯಲ್ಲಿ ಹಾಗೇ ಮಲಗಿದ್ದಾನೆ. ಆದರೆ ಬೆಳಗ್ಗೆ ನೋಡಿದರೆ ಹಾಸಿಗೆಯಲ್ಲೇ ಅಸುನೀಗಿದ್ದಾನೆ. ಮರಣೋತ್ತರ ಪರೀಕ್ಷೆ ನಂತರವೇ ನಿಖರ ಮಾಹಿತಿ ಗೊತ್ತಾಗಲಿದೆ ಎಂದು ಮೂಲಗಳು ತಿಳಿಸಿವೆ. ಹಳೇಹುಬ್ಬಳ್ಳಿ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ
ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ