ವಿವಿಧ ವಿಭಾಗಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ
Team Udayavani, Apr 21, 2018, 4:56 PM IST
ಹುಬ್ಬಳ್ಳಿ: ನೈಋತ್ಯ ರೈಲ್ವೆಯ 63ನೇ ಸಪ್ತಾಹ ಕಾರ್ಯಕ್ರಮ ಚಾಲುಕ್ಯ ರೈಲ್ವೆ ಇನ್ಸ್ಟಿಟ್ಯೂಟ್ನಲ್ಲಿ ಶುಕ್ರವಾರ ನಡೆಯಿತು.
ವಿವಿಧ ವಿಭಾಗಗಳಲ್ಲಿ ಉತ್ತಮ ಕಾರ್ಯ ನಿರ್ವಹಿಸಿದವರಿಗೆ ಪ್ರಶಸ್ತಿ ನೀಡಿದ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಎ.ಕೆ. ಗುಪ್ತಾ ಮಾತನಾಡಿ, ಸಿಬ್ಬಂದಿ ಉತ್ಕೃಷ್ಟ ಕಾರ್ಯ ಮಾಡುತ್ತಿರುವುದರಿಂದ ಪ್ರಯಾಣಿಕರಿಗೆ ಉತ್ತಮ ಸೇವೆ ಸಿಗುತ್ತಿದೆ. ಕಳೆದ 57 ವರ್ಷಗಳಲ್ಲಿಯೇ ವಲಯದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ ಎಂದರು.
2017-18ರಲ್ಲಿ ವಲಯ ಅಗಾಧ ಸಾಧನೆ ಮಾಡಿದೆ. ಮುಂಗಡವಲ್ಲದ ಟಿಕೆಟ್ ಪಡೆಯಲು ಅಪ್ಲಿಕೇಶನ್ ಬಿಡುಗಡೆ, ಟಿಕೆಟ್ ಪರಿಶೀಲನೆ ಮೂಲಕ ಹೆಚ್ಚಿನ ಆದಾಯ, ದೀರ್ಘಾವಧಿ ಸಂಚರಿಸುವ 12 ರೈಲುಗಳು, 30 ಕಿಮೀ ಹೊಸ ಲೈನ್ ಹಾಗೂ 74 ಕಿಮೀ ಡಬ್ಲಿಂಗ್ ಮಾಡಲಾಗಿದೆ. ಎಲ್ಲ ನಿಲ್ದಾಣಗಳಲ್ಲಿ ಶೇ. 100ರಷ್ಟು ಎಲ್ಇಡಿ ಲೈಟಿಂಗ್ ಅಳವಡಿಸಲಾಗಿದೆ. ಮಾನವರಹಿತ ಲೆವಲ್ ಕ್ರಾಸಿಂಗ್ನಲ್ಲಿ ರೈಲ್ಮಿತ್ರ ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
16 ಹಿರಿಯ ಅಧಿಕಾರಿಗಳು, 48 ಸಿಬ್ಬಂದಿ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರೆ, ಇಬ್ಬರು ಮಹಿಳಾ ಸಿಬ್ಬಂದಿ ವರ್ಷದ ಮಹಿಳೆ ಪ್ರಶಸ್ತಿಗೆ ಭಾಜನರಾದರು. ಸಮಗ್ರ ಎಫಿಶಿಯೆನ್ಸಿ ಪ್ರಶಸ್ತಿ ಬೆಂಗಳೂರು ವಿಭಾಗದ ಪಾಲಾಯಿತು. ಎಸ್.ಕೆ. ಅಲ್ಬೇಲಾ ಸ್ವಾಗತಿಸಿದರು. ಶ್ರೀನಿವಾಸ ರಾಘವನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ