ನೈರುತ್ಯ ರೈಲ್ವೆಯಿಂದ ಜಾಗೃತಿ ಅಭಿಯಾನ
Team Udayavani, Jun 12, 2020, 6:08 AM IST
ಹುಬ್ಬಳ್ಳಿ: ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಸುರಕ್ಷತಾ ಶಾಖೆ ಅಂತಾರಾಷ್ಟ್ರೀಯ ಲೆವೆಲ್ ಕ್ರಾಸಿಂಗ್ ಜಾಗೃತಿ ದಿನವನ್ನು ಗುರುವಾರ ಆಚರಿಸಿತು.
ನೈರುತ್ಯ ರೈಲ್ವೆಯ ಪ್ರಧಾನ ಮುಖ್ಯ ಸುರಕ್ಷತಾ ಅಧಿಕಾರಿ ಎಂ.ಎ.ವಿ. ರಾಮಾನುಜನ್, ಹುಬ್ಬಳ್ಳಿ ವಿಭಾಗದ ಹಿರಿಯ ವಿಭಾಗೀಯ ಸುರಕ್ಷತಾ ಅಧಿಕಾರಿ ಜಗದೀಶ್ ಎಸ್. ರುದ್ರಸ್ವಾಮಿ ಮತ್ತು ಸಿಬ್ಬಂದಿಯೊಂದಿಗೆ ಲೆವೆಲ್ ಕ್ರಾಸಿಂಗ್ ಗೇಟ್ಗಳಲ್ಲಿ ರೈಲ್ವೆ ಅಪಘಾತ ತಪ್ಪಿಸಲು ಎಲ್ಸಿ ಗೇಟ್ ಸಂಖ್ಯೆ 297ರಲ್ಲಿ ಜಾಗೃತಿ ಅಭಿಯಾನ ನಡೆಸಿದರು.
ಕೋವಿಡ್-19ರ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್ ಬಳಸಿ ಎಂದು ತಿಳಿ ಹೇಳಿ, ಜಾಗೃತಿ ಕರಪತ್ರಗಳನ್ನು ವಿತರಿಸಿದರು. ಲೆವೆಲ್ ಕ್ರಾಸಿಂಗ್ ಗೇಟ್ಗಳನ್ನು ಸಮೀಪಿಸುವಾಗ ರಸ್ತೆ ಬಳಕೆದಾರರು ಜಾಗರೂಕರಾಗಿರಲು ಹಾಗೂ ಲೆವೆಲ್ ಕ್ರಾಸಿಂಗ್ ಗೇಟ್ಗಳನ್ನು ಮುಚ್ಚಿರುವಾಗ ಅದನ್ನು ದಾಟಲು ಪ್ರಯತ್ನಿಸಬೇಡಿ ಎಂದು ಸೂಚಿಸಿದರು.
ಕೋವಿಡ್-19ರ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ಆರ್ಟಿಒ ಕಚೇರಿ, ಲೆವೆಲ್ ಕ್ರಾಸಿಂಗ್ ಗೇಟ್ಗಳು, ಬಸ್ ಸ್ಟ್ಯಾಂಡ್, ಆಟೋ ರಿಕ್ಷಾ ಸ್ಟ್ಯಾಂಡ್, ದೇವಾಲಯಗಳು, ಪೆಟ್ರೋಲ್ ಪಂಪ್ಗಳು, ಹುಬ್ಬಳ್ಳಿಯ ಮುಖ್ಯ ರಸ್ತೆಗಳು ಮತ್ತು ಬೀದಿಗಳಲ್ಲಿ ಜಾಗೃತಿ ಅಭಿಯಾನ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್